ಸಾಯುತ್ತಿರುವುದು ಮನುಷ್ಯರಲ್ಲಾ, ಮಾನವೀಯತೆ

ದುರಂತ – 1 : ಗಂಡ ಹೆಂಡತಿ ಮತ್ತು ವಯಸ್ಸಿಗೆ ಬಂದಂತಹ ಇದ್ದ ಸಣ್ಣ ಮಧ್ಯಮ ವರ್ಗದ ಕುಟುಂಬ. ಅದು ಹೇಗೋ ಗಂಡ ಮತ್ತು ಹೆಂಡತಿ ಇಬ್ಬರಿಗೂ ಕೊರೋನಾ ಮಹಾಮಾರಿ ವಕ್ಕರಿಸಿಕೊಂಡು ಇಬ್ಬರು ಅಸ್ಲತ್ರೆಗೆ ದಾಖಲಾಗುತ್ತಾರೆ ಈ ವಿಷಯ ತಿಳಿದ ಮಗ ಪಟ್ಟಣದಿಂದ ಓಡೋಡಿ ಬರುತ್ತಾನೆ. ಆ ಔಷಧಿ ನಮ್ಮಲ್ಲಿ ಸ್ಟಾಕ್ ಇಲ್ಲಾ.. ಆಮ್ಕಜನಕದ ಕೊರತೆ ಇದೆ. ಇಂತಹವರ ಹತ್ತಿರ ಕೆಲವೇ ಸ್ಟಾಕ್ ಔಷಧಿ ಇದೆಯಂತೆ ಪ್ರಯತ್ನಿಸಿ ನೋಡಿ ನಂಬರ್ ಕೊಡ್ತಾರೆ. ಅವರಿಗೆ ಕರೆ ಮಾಡಿದರೆ ಒಂದಕ್ಕೆ… Read More ಸಾಯುತ್ತಿರುವುದು ಮನುಷ್ಯರಲ್ಲಾ, ಮಾನವೀಯತೆ

ಬೆಂಗಳೂರಿನಲ್ಲಿ ಮೊಟ್ಟ ಮೊದಲ ಆಟೋರಿಕ್ಷಾ

ಹಿಂದೆಲ್ಲಾ, ಒಂದು ಪ್ರದೇಶದಿಂದ ಮತ್ತೊಂದು ಪ್ರದೇಶಕ್ಕೆ ಹೋಗುವುದಕ್ಕೆ ನಡಿಗೆಯೇ ಮೂಲವಾಗಿದ್ದು ನಂತರದ ದಿನಗಳಲ್ಲಿ ಎತ್ತಿನ ಗಾಡಿಗಳು ಜನರನ್ನು ಮತ್ತು ವಸ್ತುಗಳನ್ನು ಸಾಗಿಸಲು ಬಳಸುತ್ತಿದ್ದರು. ಇನ್ನು ಕೆಲವರು ಸೈಕಲ್ ಮುಖಾಂತರ ಒಂದಿಬ್ಬರು ಪ್ರಯಾಣಿಸುತ್ತಿದ್ದಾಗ ಒಂದಕ್ಕಿಂತಲು ಹೆಚ್ಚಿನ ಜನರನ್ನು ಆರಾಮದಾಯಕವಾಗಿ ಪ್ರಯಾಣಿಸುವ ಸಲುವಾಗಿ ಕುದುರೇ ಗಾಡಿಗಳನ್ನು ಬಳಸಲು ಅರಂಭಿಸಿದರು ಇವು ಜಟಕಾಗಾಡಿಗಳು, ಟಾಂಗ, ಜಟ್ಕಾ (ಉರ್ದು ಭಾಷೆಯಿಂದ ಬಂದಿರುವ ಪದ) ಎಂದೇ ನಾಡಿನಾದ್ಯಂತ ಪ್ರಖ್ಯಾತವಾಯಿತು. ಎತ್ತಿನಗಾಡಿ ಮತ್ತು ಕುದುರೇ ಗಾಡಿಗಳನ್ನು ಸಂಭಾಳಿಸುವುದು ಬಹಳ ತ್ರಾಸದಾಯಕ ಮತ್ತು ಪ್ರಾಣಿಗಳಿಗೇಕೆ ತೊಂದರೆ ಕೊಡುವುದು… Read More ಬೆಂಗಳೂರಿನಲ್ಲಿ ಮೊಟ್ಟ ಮೊದಲ ಆಟೋರಿಕ್ಷಾ

ಅವಲಕ್ಕಿ ಪರೋಟ

ಸಾಧಾರಣವಾಗಿ ಎಲ್ಲರ ಮನೆಗಳಲ್ಲಿಯೂ ಅವಲಕ್ಕಿ ಒಗ್ಗರಣೆ, ಹುಳಿಯವಲಕ್ಕಿ, ಇಲ್ಲವೇ ಖಾರದ ಅವಲಕ್ಕಿ ಬೆಳಿಗ್ಗೆ ತಿಂಡಿಗೇ ಮಾಡಿದ್ರೇ, ಮಧ್ಯಾಹ್ನದ ಊಟಕ್ಕೋ ಇಲ್ಲವೇ ರಾತ್ರಿಯ ಊಟಕ್ಕೆ ಗೋಧಿ ಚಪಾತಿ ಮತ್ತು ಪರೋಟ ಇದ್ದೇ ಇರುತ್ತದೆ. ಹಾಗಾಗಿ ಇವತ್ತು ಅವಲಕ್ಕಿ ಮತ್ತು ಗೋಧಿ ಹಿಟ್ಟು ಎರಡೂ ಸೇರಿಸಿ ಗರಿಗರಿಯಾದ ವಿಭಿನ್ನ ರುಚಿಯ ಅವಲಕ್ಕಿ ಪರೋಟ ತಯಾರಿಸುವುದನ್ನು ನಮ್ಮ ನಳಪಾಕ ಮಾಲಿಕೆಯಲ್ಲಿ ತಿಳಿಸಿಕೊಡುತ್ತಿದ್ದೇವೆ. ಸುಮಾರು 4-5 ಜನರು ಸವಿಯಬಹುದಾದಷ್ಟು ಅವಲಕ್ಕಿ ಪರೋಟ ತಯಾರಿಸಲು ಬೇಕಾಗುವ ಸಾಮಗ್ರಿಗಳು ಅವಲಕ್ಕಿ – 150ಗ್ರಾಂ ಗೋಧಿಹಿಟ್ಟು –… Read More ಅವಲಕ್ಕಿ ಪರೋಟ

ಬಿಟಿಎಸ್ ಫುಟ್ ಬೋರ್ಡ್ ಅನುಭವ

ಎಂಭತ್ತರ ದಶಕ ಹದಿಹರೆಯದ ವಯಸ್ಸು. ಆಗ ತಾನೆ ಹೈಸ್ಕೂಲ್ ಮುಗಿಸಿ ಕಾಲೇಜಿಗೆ ಸೇರಿಕೊಂಡಿದ್ದೆ. ಕಾಲೇಜಿಗೆ ಶಾಲೆಯ ತರಹ ಒಂದು ಮಣಭಾರದ ಪುಸ್ತಕಗಳನ್ನು ಹೊತ್ತುಕೊಂಡು ಹೊಗಬೇಕಿರಲಿಲ್ಲ. ಕೇವಲ ನಾಲ್ಕಾರು ಪುಸ್ತಕಗಳನ್ನು ಒಂದು ಚೆಂದನೆಯ ಚೀಲದಲ್ಲಿ ಹಾಕಿಕೊಂಡು ಬಣ್ಣ ಬಣ್ಣದ ಪ್ಯಾಂಟ್ ಶರ್ಟು ಹಾಕಿಕೊಂಡು ಕಾಲೇಜಿಗೆ ಹೋಗುವುದೆಂದರೆ ಎನೋ ಒಂದು ತರಹ ಹಿತಾನುಭವ. ನಾವು ಇದ್ದಿದ್ದು ಬಿಇಎಲ್ ಬಳಿ ಕಾಲೇಜ್ ಇದ್ದದ್ದು ಆರ್. ಟಿ ನಗರ. ನಮ್ಮ ಕಡೆಯಿಂದ ನೇರ ಬಸ್ ಸಂಪರ್ಕ ಇಲ್ಲದಿದ್ದ ಕಾರಣ ಕನಿಷ್ಠ ಪಕ್ಷ ಎರಡು… Read More ಬಿಟಿಎಸ್ ಫುಟ್ ಬೋರ್ಡ್ ಅನುಭವ

ಕವಲೇ ದುರ್ಗ

ಶಿವಮೊಗ್ಗ ಹೇಳಿ ಕೇಳಿ ಮಲೆನಾಡಿನ ಪ್ರದೇಶ ವರ್ಷದ 365 ದಿನಗಳು ಹಚ್ಚ ಹಸಿರಾಗಿರುವಂತಹ ಸುಂದರ ಪ್ರಕೃತಿಯ ತಾಣ. ಶಿವಮೊಗ್ಗದಿಂದ ಸುಮಾರು 80 ಕಿಮೀ ಮತ್ತು ತೀರ್ಥಹಳ್ಳಿಯಿ೦ದ ಸುಮಾರು 18 ಕಿ.ಮಿ ದೂರದಲ್ಲಿರುವ ಸುಂದರ ಪ್ರಕೃತಿ ತಾಣ ಮತ್ತು ಐತಿಹಾಸಿಕ ಪ್ರದೇಶವೇ ಕವಲೇ ದುರ್ಗ. ತೀರ್ಥಹಳ್ಳಿಯಿಂದ ಆಗುಂಬೆಯತ್ತ ಹೋಗುವ ಹಾದಿಯಲ್ಲಿ ಸುಮಾರು ಆರು ಕಿ.ಮೀ ದಲ್ಲಿ ಸಿಗುವ ಬಿಳ್ ಕೊಪ್ಪ ಎನ್ನುವ ಸ್ಥಳದಿಂದ ಬಲಕ್ಕೆ ತಿರುಗಿ ಸುಮಾರು 10 ಕಿ.ಮೀ ಕಚ್ಚಾ ರಸ್ತೆಯಲ್ಲಿ ಕ್ರಮಿಸಿದರೆ ಕವಲೇ ದುರ್ಗದ ಬುಡವನ್ನು… Read More ಕವಲೇ ದುರ್ಗ

ಮಾತೃ ಸ್ವರೂಪೀ ಅಪ್ಪಾ

ಅದೊಂದು ಐಶಾರಾಮೀ ಅಂತರಾಷ್ಟ್ರೀಯ ಶಾಲೆಯ ಉದ್ಯಾನವನದಲ್ಲಿ  ಗಂಗಣ್ಣ ಗಿಡಗಳಿಗೆ ನೀರನ್ನು ಹಾಕಿ ಪೋಷಿಸುತ್ತಿದ್ದರು. ಸಂಜೆ ಬಿಸಿಲು ತೀವ್ರವಾಗಿ ಅತನನ್ನು ಬಸವಳಿಸುತ್ತಿತ್ತಾದರೂ ಅದನ್ನು ಲೆಕ್ಕಿಸದೆ ತನ್ನ ಕರ್ತವ್ಯದಲ್ಲಿ ನಿರತನಾಗಿದ್ದ ಮಾಲಿ ಗಂಗಣ್ಣನ ಅವರ ಬಳಿ ಬಂದ ಸಹೋದ್ಯೋಗಿಯೊಬ್ಬರು, ಪ್ರಿನ್ಸಿಪಾಲ್ ಮೇಡಂ ನಿಮ್ಮನ್ನು ಕರೆಯುತ್ತಿದ್ದಾರೆ. ಈ ಕೂಡಲೇ ಅವರನ್ನು ಭೇಟಿಯಾಗಬೇಕೆಂತೇ ಎಂದು ಹೇಳಿದರು. ಅರೇ! ಏನಪ್ಪಾ ಆಯ್ತು? ಪ್ರಿನ್ಸಿಪಾಲ್ ಮೇಡಂ ಕರೆಯುವಷ್ಟು ತಪ್ಪನ್ನು ನಾನೇನು ಮಾಡಿದೆ? ಎಂದು ಯೋಚಿಸುತ್ತಲೇ, ಭಯ ಭಯದಿಂದ ಬೆವರು ಸುರಿಯುತ್ತಿದ್ದ ಮುಖ ಮತ್ತು ಕೈಕಾಲುಗಳನ್ನು ತೊಳೆದುಕೊಂಡು… Read More ಮಾತೃ ಸ್ವರೂಪೀ ಅಪ್ಪಾ

ಶ್ರೀ ಪ್ರಸನ್ನ ಆಂಜನೇಯಸ್ವಾಮಿ ದೇವಸ್ಥಾನ, ರಾಗಿಗುಡ್ಡ

ನಮ್ಮ ಬೆಂಗಳೂರು ಇತಿಹಾಸ ಮಾಲಿಕೆಯಲ್ಲಿ ಕೆಲದಿನಗಳ ಹಿಂದೆ ಜಯನಗರದ ಕುರಿತಾಗಿ ತಿಳಿದುಕೊಂಡಿದ್ದೆವು. ಇಂದು ಅದೇ ಜಯನಗರಕ್ಕೇ ಹೊಂದಿಕೊಂಡೇ ಇರುವಂವಹ ಜಗತ್ಪ್ರಸಿದ್ದವಾದ ರಾಗಿಗುಡ್ಡದ ಆಂಜನೇಯಸ್ವಾಮಿ ದೇವಾಲಯದ ಇತಿಹಾಸದ ಬಗ್ಗೆ ಇಂದಿನ ಸಂಚಿಕೆಯಲ್ಲಿ ತಿಳಿದುಕೊಳ್ಳೋಣ.  ಬೆಂಗಳೂರು ಇತಿಹಾಸದ ಹಿಂದಿನ ಮಾಲಿಕೆಗಳನ್ನು ಓದಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ. ರಾಗಿಗುಡ್ಡದ ಶ್ರೀ ಪ್ರಸನ್ನ ಆಂಜನೇಯಸ್ವಾಮಿ ದೇವಾಲಯದ ಇತಿಹಾಸವನ್ನು ಈ ವೀಡಿಯೂ ಮೂಲಕವೂ ತಿಳಿಯಬಹುದಾಗಿದೆ ಸಾಮಾನ್ಯವಾಗಿ ಪ್ರತಿಯೊಂದು ಹಳ್ಳಿ ಅಥವಾ ಊರಿಗೆ ಹೋದಾಗ ಆ ಊರಿನ ಮುಂಭಾಗದಲ್ಲೇ ಅಂಜನಿ ಪುತ್ರ ಆಂಜನೇಯ… Read More ಶ್ರೀ ಪ್ರಸನ್ನ ಆಂಜನೇಯಸ್ವಾಮಿ ದೇವಸ್ಥಾನ, ರಾಗಿಗುಡ್ಡ

ಬಾಲ್ಯದ ಬಯಾಸ್ಕೋಪ್

ಬೇಸಿಗೆಯಲ್ಲಿ ಪರೀಕ್ಷೆ ಮುಗಿದು ಫಲಿತಾಂಶ ಬಂದಿದ್ದೇ ತಡಾ ಗಂಟು ಮೂಟೆ ಕಟ್ಟಿಕೊಂಡು ತಾತನ ಮನೆಗೆ ಹೋಗುವುದು ನಮ್ಮ ಮನೆಯ ವಾಡಿಕೆ. ನಮ್ಮೂರಿಗೆ ಹೋಗಲು ಪ್ರಮುಖ ಆಕರ್ಷಣೆಯೆಂದರೆ ಅದೇ ಸಮಯದಲ್ಲಿ ಎರಡು ವಾರಗಳ ಕಾಲ ನಡೆಯುತ್ತಿದ್ದ ಊರ ಹಬ್ಬ, ಜಾತ್ರೆ, ದೇವಸ್ಥಾನದ ಮುಂದಿದ್ದ ಕಲ್ಯಾಣಿ, ಅಜ್ಜಿ ಮಾಡಿಕೊಡುತ್ತಿದ್ದ ಕೆಂಡ ರೊಟ್ಟಿ ಗಟ್ಟಿ ಚಟ್ನಿ ಮತ್ತು ಬೆಣ್ಣೆ, ತಾತನ ತೊಡೆ ಮೇಲೆ ಕುಳಿತುಕೊಂಡು ಕೇಳುತ್ತಿದ್ದ ಕಥೆಗಳಲ್ಲದೇ ಮತ್ತೊಂದು ಪ್ರಮುಖ ಆಕರ್ಷಣೆಯೆಂದರೆ ಸಿನಿಮಾ ಪ್ರೊಜೆಕ್ಷನ್. ನಮ್ಮೂರು ಬಾಳಗಂಚಿ ಸುಮಾರು ಮುನ್ನೂರರಿಂದ ನಾಲ್ಕು… Read More ಬಾಲ್ಯದ ಬಯಾಸ್ಕೋಪ್

ಸಿಂಹಾಚಲಂನ ಸಿಂಹಾದ್ರಿ

ಸಿಂಹಾಚಲಂ ಅಥವಾ ಸಿಂಹಾದ್ರಿ ಆಂಧ್ರ ಪ್ರದೇಶದ ವಿಶಾಖಪಟ್ಟಣದ ಹೊರವಲಯದಿಂದ ಸುಮಾರು 18 ಕಿ.ಮೀ ದೂರದಲ್ಲಿರುವ ಊರಾಗಿದೆ. ನರಸಿಂಹ ಸ್ವಾಮಿಯ ಪ್ರಸಿದ್ಧ 18 ಕ್ಷೇತ್ರಗಳಲ್ಲಿ ಸಿಂಹಾದ್ರಿಯೂ ಒಂದಾಗಿದೆ. ಈ ದೇವಾಲಯದಲ್ಲಿ ವಿಷ್ಣುವಿನ ದಶಾವತಾರದಲ್ಲಿ ನಾಲ್ಕನೇ ಅವತಾರವಾದ ನರಸಿಂಹ ಸ್ವಾಮಿಯ ವಿಶಿಷ್ಟವಾದ ವಿಗ್ರಹವಿದೆ. ಈ ವಿಗ್ರಹದ ದೇಹವು ಸದೃಢವಾದ ಮಾನವ ಶರೀರದಂತಿದ್ದರೆ ತಲೆಯ ಭಾಗವು ಸಿಂಹದ ಮುಖ ಹೊಂದಿದೆ ಬೆಟ್ಟದ ಮೇಲೆ ವರಹಾ ನರಸಿಂಹ ಸ್ವಾಮಿಯ ವಾಸಸ್ಥಾನವೆಂದು ಹೇಳಲಾಗುವ ಪ್ರಸಿದ್ಧ ದೇವಾಲಯವಾಗಿದ್ದು ಪ್ರತೀ ವರ್ಷವೂ ಇಲ್ಲಿಗೆ ಲಕ್ಷಾಂತರ ಭಕ್ತರು ಭೇಟಿ… Read More ಸಿಂಹಾಚಲಂನ ಸಿಂಹಾದ್ರಿ