ಭಾಷಾ ಭೂಷಣ

ಇತ್ತೀಚೆಗೆ ಟಿವಿಯಲ್ಲಿ ಪೌರಾಣಿಕ ಚಿತ್ರವೊಂದು ಪ್ರಸಾರವಾಗುತ್ತಿತ್ತು. ಪೌರಾಣಿಕ ಚಿತ್ರ ಎಂಬ ಕುತೂಹಲದಿಂದ ನೋಡಲು ಕುಳಿತುಕೊಂಡು ಕೊಂಡ ಅರ್ಧಗಂಟೆಗಳಲ್ಲಿಯೇ ಮನಸ್ಸಿಗೆ ನೋವಾಗಿ ನೋಡಲು ಅಸಹನೀಯವಾಯಿತು. ಅಕಾರ ಮತ್ತು ಹಕಾರದ ನಡುವಿನ ವ್ಯತ್ಯಾಸ ಅರಿಯದ, ಅವರ ಸಂಭಾಷಣೆಗೂ ಅವರ ಆಂಗಿಕ ಅಭಿನಯಕ್ಕೂ ಸಂಬಂಧವೇ ಇರದ, ಕನ್ನಡ ಭಾಷೆಯ ಮೇಲೆ ಸ್ವಲ್ಪವೂ ಹಿಡಿತವಿರದ ಅಪಾತ್ರರನ್ನೆಲ್ಲಾ ಪೌರಾಣಿಕ ಪಾತ್ರದಲ್ಲಿ ನೋಡುತ್ತಿದ್ದಾಗ, ಕನ್ನಡ ಕಸ್ತೂರಿ ಎನ್ನುವಂತಹ ಸೊಗಡಿರುವ ಭಾಷೆಯನ್ನು ಇಷ್ಟು ಕೆಟ್ಟದಾಗಿ ಕೊಲೆ ಮಾಡುತ್ತಿದ್ದಾರಲ್ಲಾ? ಎಂದೆನಿಸಿ ಕೂಡಲೇ ಅಭಿನಯ ಮತ್ತು ಭಾಷ ಶುದ್ಧತೆಯಲ್ಲಿ ಪರಿಪಕ್ವವಾಗಿದ್ದ… Read More ಭಾಷಾ ಭೂಷಣ

ಅಜ್ಜಿ ಮನೆಯಲ್ಲಿ ಬೇಸಿಗೆಯ ರಜಾ ಮಜ

ಪರೀಕ್ಷೆ ಮುಗಿದು, ಫಲಿತಾಂಶ ಬಂದು ಬೇಸಿಗೆ ರಜೆ ಬಂದಿತೆಂದರೆ ನಮಗೆ ಖುಷಿಯೋ ಖುಷಿ. ಪರೀಕ್ಷೆ ಮುಗಿದ ತಕ್ಷಣ ಒಂದೋ ಅಮ್ಮನ ಅಮ್ಮ ಅಜ್ಜಿ ಮನೆಗೆ ಹೋಗಬೇಕು ಇಲ್ಲವೇ ತಂದೆಯ ತಂದೆ ತಾತನ ಮನೆಗೆ ಹೋಗಬೇಕು. ಸಾಧಾರಣವಾಗಿ ನಮ್ಮ ಯುಗಾದಿ ಆದ ಹದಿನೈದು ದಿನಕ್ಕೇ ನಮ್ಮ ಊರಿನಲ್ಲಿ ನಮ್ಮೂರ ಜಾತ್ರೆ ಬಹಳ ಅದ್ದೂರಿಯಿಂದ ಜರುಗುತ್ತಿದ್ದ ಕಾರಣ, ಆ ಜಾತ್ರೆಯನ್ನು ಮುಗಿಸಿಕೊಂಡು ಬಂದ ಕೂಡಲೇ ಅಜ್ಜಿ ಮನೆಗೆ ಹೋಗಲು ಸಿದ್ದವಾಗುತ್ತಿದ್ದೆವು. ತಾತನ ಊರಿಗೆ ಹೋಗಲು ದೇವಸ್ಥಾನದ ಮುಂದಿನ ಕಲ್ಯಾಣಿಯಲ್ಲಿ ಈಜಾಡುವುದು,… Read More ಅಜ್ಜಿ ಮನೆಯಲ್ಲಿ ಬೇಸಿಗೆಯ ರಜಾ ಮಜ

ರಂಗಕರ್ಮಿ ಆರ್. ಎಸ್. ರಾಜಾರಾಂ

ನೋಡಿದಾಕ್ಷಣ ಅರೇ ಇವರು ಯಾರೋ ನಮ್ಮ ತಾತನ ತರಹಾನೇ ಇದ್ದಾರಲ್ಲಾ! ಎನ್ನುವಷ್ಟು ಅಪ್ಯಾಯಮಾನತೆ,‌ ಇಳೀ ವಯಸ್ಸಿನಲ್ಲಿಯೂ ತುಂಟತನ ತೋರುವ ತಾತ, ಹೀಗೆ ತಮ್ಮ ಸಹಜ ಅಭಿನಯದ‌ ಮೂಲಕ ರಂಗಭೂಮಿ, ಹಿರಿತೆರೆ, ಕಿರಿತೆರೆಯಲ್ಲಿ ಸುಮಾರು ಆರು ದಶಕಗಳ ಕಾಲ ಕನ್ನಡಿಗರನ್ನು ರಂಜಿಸಿದ ರಂಗಕರ್ಮಿ ರಾಜಾರಾಂ ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯವನ್ನು ನಮ್ಮ ಇಂದಿನ ಕನ್ನಡದ ಕಲಿಗಳು ಮಾಲಿಕೆಯಲ್ಲಿ ತಿಳಿಯೋಣ ಬನ್ನಿ… Read More ರಂಗಕರ್ಮಿ ಆರ್. ಎಸ್. ರಾಜಾರಾಂ

ವಿರೋಧ ಪಕ್ಷಗಳು

ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಬಹುಮತ ಪಡೆದವರು ಆಡಳಿತ ನಡೆಸುವ ಅಥಿಕಾರ ಪಡೆದರೆ, . ಬಹುಮತ ಪಡೆಯದವರು ವಿರೋಧ ಪಕ್ಷವಾಗುತ್ತಾರೆ.  ದೇಶದ ಹಿತದೃಷ್ಟಿಯಿಂದ ದೇಶದ ಆಗು ಹೋಗುಗಳ ಬಗ್ಗೆ ಸೂಕ್ತ ತೀರ್ಮಾನಗಳನ್ನು ಕೈಗೊಳ್ಳಲು ಆಡಳಿತ ಪಕ್ಷದಷ್ಟೇ ಜವಾಬ್ಧಾರಿ ವಿರೋಧಪಕ್ಷಕ್ಕೂ ಇರುತ್ತದೆ. ಹಾಗಾಗಿಯೇ ಪ್ರಜಾಪ್ರಭುತ್ವದಲ್ಲಿ ವಿರೋಧ ಪಕ್ಷಗಳನ್ನು ಕಾವಲು ನಾಯಿಗಳಿಗೆ ಹೋಲಿಸಲಾಗುತ್ತದೆ,  ವಿರೋಧ ಪಕ್ಷ ಎಂದ ಮಾತ್ರಕ್ಕೆ ಆಡಳಿತ ಪಕ್ಷ ಮಾಡುವ ಎಲ್ಲಾ ಕೆಲಸಗಳನ್ನೂ ವಿರೋಧಿಸಲೇ ಬೇಕೆಂಬ ನಿಯಮವೇನಿಲ್ಲ. ವಿರೋಧ ಪಕ್ಷವು ರಚನಾತ್ಮಕವಾಗಿ ಕಾರ್ಯನಿಭಾಯಿಸುವ ಮೂಲಕ ಆಡಳಿತ ಪಕ್ಷ ದೇಶವನ್ನು ಸರಿಯಾದ… Read More ವಿರೋಧ ಪಕ್ಷಗಳು

ಪ್ರಯಾಗದ ಬಡೇ ಹನುಮಾನ್ ಜೀ ಮಂದಿರ್

ಪ್ರಯಾಗ ಭಾರತದ ಅತ್ಯಂತ ಪ್ರಾಚೀನ ನಗರದಲ್ಲಿ ಒಂದಾಗಿದೆ. ಉತ್ತರ ಪ್ರದೇಶದ ಬಹುದೊಡ್ಡ ನಗರದಲ್ಲಿ ಇದೂ ಸಹಾ ಒಂದಾಗಿದ್ದು ಪೌರಾಣಿಕವಾಗಿಯೂ ಮತ್ತು ಐತಿಹಾಸಿಕವಾಗಿಯೂ ಪ್ರಸಿದ್ಧ ನಗರವಾಗಿದೆ. ವೇದ ಪುರಾಣಗಳಲ್ಲಿಯೂ ಈ ನಗರದ ಬಗ್ಗೆ ಉಲ್ಲೇಖವಿದ್ದು ಬ್ರಹ್ಮಾಂಡವನ್ನು ಸೃಷ್ಟಿ ಮಾಡಿದ ನಂತರ ಬ್ರಹ್ಮದೇವ ಪ್ರಥಮವಾಗಿ ಇದೇ ನಗರದಲ್ಲಿಯೇ ಯಜ್ಞಮಾಡಿದ ಎಂಬ ಪ್ರತೀತಿ ಇದೆ. ಆದ್ದಾರಿಂದಲೇ ಈ ನಗರಕ್ಕೆ ಪ್ರಯಾಗ ಎಂಬ ಹೆಸರು ಬಂದಿತೆಂದು ನಂಬಲಾಗಿದೆ. ಇದು ಮೂರು ನದಿಗಳು ಸೇರುವ ತ್ರಿವೇಣಿ ಸಂಗಮವೂ ಹೌದು. ಗಂಗ ಯಮುನಾ ಮತ್ತು ವೇದಗಳಲ್ಲಿ… Read More ಪ್ರಯಾಗದ ಬಡೇ ಹನುಮಾನ್ ಜೀ ಮಂದಿರ್

ಶಾಲೆಗಳನ್ನೇ ವಿಶೇಷ ಕೋವಿಡ್ ಅರೈಕೆ ಕೇಂದ್ರಗಳನ್ನಾಗಿಸಿದ ರಾಷ್ಟ್ರೋತ್ಥಾನ ಪರಿಷತ್

ಅದೊಂದು ವಠಾರದಲ್ಲಿ ನಾಲ್ಕು ಜನರಿರುವ ಒಂದು ಸಣ್ಣ ಕುಟುಂಬವೊಂದು ವಾಸವಾಗಿತ್ತು. ಅದೊಮ್ಮೆ ಇದ್ದಕ್ಕಿದ್ದಂತೆಯೇ ಆ ಮನೆಗೆ ದೂರದೂರಿನಿಂದ ಸುಮಾರು ಎಂಟು ಹತ್ತು ನೆಂಟರು ಆಗಮಿಸಿ ಬಿಟ್ಟರು. ಬಂದರವರನ್ನು ನೋಡಿದರೆ ದೂರ ಪ್ರಯಾಣದಿಂದ ಬಹಳ ಹಸಿದಂತೆ ಕಾಣುತ್ತಿದ್ದರು. ಅವರೆಲ್ಲರನ್ನು ಊಟಕ್ಕೆ ಕುಳ್ಳಿರಿಸಬೇಕು.  ಆದರೆ  ಅವರ ಮನೆಯಲ್ಲಿ ಎಲ್ಲರಿಗೂ ಸಾಕಾಗುವಷ್ಟು ಅಡುಗೆ ಇರಲಿಲ್ಲ. ಅಷ್ಟು ಜನರಿಗೆ  ಅಡುಗೆ ಮಾಡಬೇಕೆಂದರೂ ಕನಿಷ್ಟ ಪಕ್ಷ ಒಂದೆರಡು ಗಂಟೆಯಾದರೂ ಬೇಕಿತ್ತು.  ತಿಂಗಳ ಕೊನೆಯಾಗಿದ್ದರಿಂದ ಹೋಟೇಲ್ಲಿನಿಂದಲೂ ತರುವಷ್ಟು ಹಣ ಅವರ ಬಳಿ ಇರಲಿಲ್ಲ. ಕೂಡಲೇ ಮನೆಯಾಕೆ… Read More ಶಾಲೆಗಳನ್ನೇ ವಿಶೇಷ ಕೋವಿಡ್ ಅರೈಕೆ ಕೇಂದ್ರಗಳನ್ನಾಗಿಸಿದ ರಾಷ್ಟ್ರೋತ್ಥಾನ ಪರಿಷತ್

ಶಂಖನಾದ ಅರವಿಂದ್

ಜನರು ತಮ್ಮೆಲ್ಲಾ ದೈನಂದಿನದ ಕಷ್ಟ ಸುಖಃಗಳನ್ನು ಮರೆಯುವುದಕ್ಕಾಗಿ ಮನೋರಂಜನೆಗಾಗಿ ಕೆಲ ಕಾಲ ನಾಟಕ ಮತ್ತು ಚಲನಚಿತ್ರಗಳನ್ನು ನೋಡಿ ಅದರಲ್ಲಿ ಬರುವ ನಾಯಕ ಮತ್ತು ನಾಯಕಿಯರೊಂದಿಗೆ ತಮ್ಮ ಬದುಕನ್ನು ಹೋಲಿಸಿಕೊಂಡು ತಮ್ಮ ಕಷ್ಟಗಳನ್ನು ಮರೆಯುತ್ತಾರೆ. ಇವೆಲ್ಲವೂ ನಾಯಕ ನಾಯಕಿ ಪ್ರಧಾನವಾಗಿದ್ದರೂ ಅವರಿಬ್ಬರ ಕಥೆಯ ಏಕತಾನತೆಯನ್ನು ತಡೆಯುವ ಸಲುವಾಗಿ ನಾಯಕ ಮತ್ತು ನಾಯಕಿಯ ಕಥೆಗೆ ಸಮಾನಾಂತರವಾಗಿ ಹಾಸ್ಯ ದೃಶ್ಯಗಳನ್ನು ಅಳವಡಿಸಿಕೊಂಡಿರುತ್ತಾರೆ. ಹಾಗಾಗಿ ಅಂದೂ ಇಂದು ಮತ್ತು ಮುಂದೆಯೂ ಹಾಸ್ಯನಟರ ಕಾಲ್ ಶೀಟ್ ಮೊದಲು ಪಡೆದುಕೊಂಡು ನಂತರ ನಾಯಕರನ್ನು ಆರಿಸಿಕೊಳ್ಳುವ ಸಂಪ್ರದಾಯ… Read More ಶಂಖನಾದ ಅರವಿಂದ್

ರತ್ನಗಿರಿ ಅಲ್ಫೊನ್ಸೊ ಮಾವಿನಹಣ್ಣು

ನಂಜನಗೂಡಿನ ರಸಬಾಳೆ, ತಂದಿಹೆ ಕೊಡಗಿನ ಕಿತ್ತೀಳೆ ಬೀದರ ಜಿಲ್ಲೆಯ ಸೀಬೆಯ, ಹಣ್ಣು ಬೆಂಗಳೂರಿನ ಸೇಬಿನ ಹಣ್ಣು || ಕೊಳ್ಳಿರಿ ಹಿಗ್ಗನು ಹರಿಸುವವು,ಕಲ್ಲುಸಕ್ಕರೆಯ ಮರೆಸುವವು ಕೊಳ್ಳಿರಿ ಮಧುಗಿರಿ ದಾಳಿಂಬೆ, ಬೆಳವಲ ಬಯಲಿನ ಸಿಹಿಲಿಂಬೆ || ಬೆಳಗಾವಿಯ ಸವಿ ಸಪೋಟ. ದೇವನಹಳ್ಳಿಯ ಚಕ್ಕೋತ ನಾಲಿಗೆ ಬರವನು ಕಳೆಯುವವು, ದೇಹದ ಬಲವನು ಬೆಳೆಸುವವು || ಗಂಜಾಮ್ ಅಂಜೀರ್, ತುಮಕೂರ್ ಹಲಸು, ಧಾರವಾಡದ ಆಪೂಸು, ಮಲೆನಾಡಿನ ಅನಾನಸು ಸವಿಯಿರಿ ಬಗೆಬಗೆ ಹಣ್ಣುಗಳ ಕನ್ನಡ ನಾಡಿನ ಹಣ್ಣುಗಳ || ಸದ್ಯಕ್ಕೆ ಆಡಳಿತಾತ್ಮಕವಾಗಿ ಕೇರಳದ ಭಾಗವಾಗಿದ್ದರೂ… Read More ರತ್ನಗಿರಿ ಅಲ್ಫೊನ್ಸೊ ಮಾವಿನಹಣ್ಣು

ಬಾಳೇ ದಿಂಡು ಕೋಸಂಬರಿ

ಹೇಳಿ ಕೇಳಿ ಇದು ಬೇಸಿಗೆ ಕಾಲ ಬಿಸಿಲು ಬಹಳವಿರುವ ಕಾರಣ ಈ ಸಮಯದಲ್ಲಿ ದೇಶವನ್ನು ತಂಪಾಗಿ ಮತ್ತು ಸಧೃಢವಾಗಿ ಇಟ್ಟುಕೊಳ್ಳಬೇಕಾಗಿದೆ. ಹಾಗಾಗಿ ತೆಂಗಿನ ಮರ ಕಲ್ಪವೃಕ್ಷವಾದರೆ, ಬಾಳೆ ಗಿಡವನ್ನು ಕಾಮಧೇನು ಎಂದರೂ ತಪ್ಪಾಗದು. ತೆಂಗಿನ ಮರದಂತೆಯೇ, ಬಾಳೇಗಿಡದ ಪ್ರತಿಯೊಂದು ಭಾಗವೂ ಹಲವಾರು ರೀತಿಯಲ್ಲಿ ಉಪಯೋಗಕ್ಕೆ ಬರುತ್ತದೆ. ಬಾಳೇ ಹೂವು, ಬಾಳೇಕಾಯಿ, ಬಾಳೇಹಣ್ಣು, ಬಾಳೇ ದಿಂಡುಗಳ ಮೂಲಕ ಬಗೆ ಬಗೆಯ ಖಾದ್ಯವನ್ನು ತಯಾರಿಸಬಹುದಾದರೆ, ಬಾಳೇ ಪಟ್ಟೆಯಲ್ಲಿ ನಾರು ತೆಗೆಯುವುದಕ್ಕೆ, ಮತ್ತು ವಸ್ತುಗಳನ್ನು ಪ್ಯಾಕ್ ಮಾಡಲು ಬಳಸ ಬಹುದಾಗಿದೆ. ದಕ್ಷಿಣ… Read More ಬಾಳೇ ದಿಂಡು ಕೋಸಂಬರಿ