ಹಿತಚಿಂತಕರು ಮತ್ತು ಹಿತಶತ್ರುಗಳು

ಮನುಷ್ಯ ಸಂಘ ಜೀವಿ ಮತ್ತು ಭಾವುಕ ಜೀವಿಯೂ ಹೌದು. ಹಾಗಾಗಿ ಆತ ಕಾಲ ಕಾಲಕ್ಕೆ ತನ್ನ ಮನಸ್ಸಿನಲ್ಲಾಗುವ ತುಮುಲಗಳನ್ನು ಮತ್ತು ಭಾವನೆಗಳನ್ನು ಮತ್ತೊಬ್ಬರ ಹತ್ತಿರ ಹಂಚಿಕೊಳ್ಳುವ ಮೂಲಕ ನಿರಾಳನಾಗುತ್ತಾನೆ. ಹಾಗಾಗಿಯೇ ಮನುಷ್ಯರು ಸದಾಕಾಲವೂ ಉತ್ತಮ ಗುರುಗಳು, ಸ್ನೇಹಿತರು ಮತ್ತು ಸಂಗಾತಿಯ ಅನ್ವೇಷಣೆಯಲ್ಲಿದ್ದು, ಒಮ್ಮೆ ತಮ್ಮ ಅಭಿರುಚಿಗೆ ತಕ್ಕಂತಹವರು ಸಿಕ್ಕ ಕೂಡಲೇ ತಮ್ಮ ಜೀವನದ ಗುಟ್ಟು ರಟ್ಟುಗಳನ್ನೆಲ್ಲಾ ಯಾವುದೇ ಮುಚ್ಚು ಮರೆಯಿಲ್ಲದೇ ಹೇಳಿಕೊಳ್ಳುತ್ತಾರೆ. ಹಾಗೆ ಹೇಳಿಕೊಳ್ಳುವುದಕ್ಕೆ ಪ್ರಮುಖ ಕಾರಣ ತಮ್ಮ ಗೆಳೆಯ ಈ ಎಲ್ಲಾ ಗೌಪ್ಯತೆಯನ್ನು ಕಾಪಾಡುತ್ತಾನೆ ಮತ್ತು… Read More ಹಿತಚಿಂತಕರು ಮತ್ತು ಹಿತಶತ್ರುಗಳು

ಸೂಯೆಜ್ ಕಾಲುವೆ ಮತ್ತು ಮೈಸೂರು ಸ್ಯಾಂಡಲ್

ಸುಯೆಜ್ ಕಾಲುವೆ, ಕೆಂಪು ಸಮುದ್ರದ ಸುಯೆಜ್ ಮತ್ತು ಮೆಡಿಟರೇನಿಯನ್ ಸಮುದ್ರದ ಸಯೀದ್ ಬಂದರಿನ ನಡುವೆ ಸಂಪರ್ಕ ಕಲ್ಪಿಸುವ ಒಂದು ಮಹಾಕಾಲುವೆಯಾಗಿದ್ದು ಈಜಿಪ್ಟ್ ದೇಶದಲ್ಲಿದೆ. ಇದು ಸುಮಾರು 162 ಕಿಮೀ ಉದ್ದವಿದ್ದು ಇದರ ಅಗಲ ಅತ್ಯಂತ ಕಡಿಮೆ ಇರುವ ಸ್ಥಳದಲ್ಲಿ 300 ಮೀ ಇದೆ. ಈ ಕಾಲುವೆ ಏಷ್ಯಾ ಮತ್ತು ಯೂರೋಪ್ ಖಂಡಗಳ ನಡುವೆ ಪಯಣಿಸುವ ಹಡಗುಗಳಿಗೆ ಪ್ರಮುಖ ಜಲಮಾರ್ಗವಾಗಿದೆ. ಇದು ಇಲ್ಲದಿದ್ದಲ್ಲಿ ಕೊಂಕಣ ಸುತ್ತಿ ಮೈಲಾರಕ್ಕೆ ಬಂದಂತೆ ಆಫ್ರಿಕಾದ ಕೇಪ್‌ ಆಫ್‌ ಗುಡ್‌ ಹೋಪ್‌ ಭೂಶಿರ ಸುತ್ತಿ… Read More ಸೂಯೆಜ್ ಕಾಲುವೆ ಮತ್ತು ಮೈಸೂರು ಸ್ಯಾಂಡಲ್

ಮುಲ್ತಾನ್ ಕಾ ಸುಲ್ತಾನ್ ವೀರೇಂದ್ರ ಸೆಹ್ವಾಗ್

ಈ ಬಾರಿ ಹುಣ್ಣಿಮೆ ಭಾನುವಾರ ಮತ್ತು ಸೋಮವಾರ ಬಂದಿದ್ದ ಕಾರಣ ಬಹುತೇಕ ಭಾರತೀಯರು ಎರಡೂ ದಿನ ಹೋಳಿ ಹಬ್ಬದ ಆಚರಣೆಯಲ್ಲಿದ್ದ ಕಾರಣವೋ ಅಥವಾ ಇಂಗ್ಲೇಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಸುಲಭವಾಗಿ ಗೆಲ್ಲಬಹುದಾಗಿದ್ದ ಪಂದ್ಯವನ್ನು ಕಷ್ಟ ಪಟ್ಟು ಗೆದ್ದದ್ದರ ಸಂಭ್ರಮದಲ್ಲಿ ಮಾರ್ಚ್​ 29, 2004 ರಂದು ಅಂದರೆ ಸರಿಯಾಗಿ 17 ವರ್ಷಗಳ ಹಿಂದೆ ಭಾರತ ಕ್ರಿಕೆಟ್ ತಂಡದ ಸ್ಪೋಟಕ ಆರಂಭಿಕ ಆಟಗಾರ ವಿರೇಂದ್ರ ಸೆಹ್ವಾಗ್ ಪಾಕಿಸ್ತಾನದ ಮುಲ್ತಾನಿನಲ್ಲಿ ಸುಲ್ತಾನನಾಗಿ ಮೆರೆದು ಭಾರತದ ಪರ ಚೊಚ್ಚಲು ತ್ರಿಶತಕವನ್ನು ಬಾರಿಸಿ, ಪಾಕೀಸ್ಥಾನಿಗಳಿಗೆ… Read More ಮುಲ್ತಾನ್ ಕಾ ಸುಲ್ತಾನ್ ವೀರೇಂದ್ರ ಸೆಹ್ವಾಗ್

ಕಳೆದು ಹೋದ ಉಂಗುರ

ಅದು ಎಂಭತ್ತರ ದಶಕ. ಗಮಕ ಕಲೆ ನಮ್ಮ ತಂದೆಯವರಿಗೆ ನಮ್ಮ ತಾತ ಗಮಕಿ ನಂಜುಂಡಯ್ಯನವರಿಂದಲೇ ಬಂದಿತ್ತಾದರೂ, ಶೈಕ್ಷಣಿಕವಾಗಿ ಅಧಿಕೃತವಾದ ಪದವಿಯೊಂದು ಇರಲಿ ಎಂದು ಮಲ್ಲೇಶ್ವರದ ಗಾಂಧೀ ಸಾಹಿತ್ಯ ಸಂಘದಲ್ಲಿ ಗುರುಗಳಾದ ಶ್ರೀ ನಾರಾಯಣ್ ಅವರು ನಡೆಯುತ್ತಿದ್ದ ಗಮಕ ಪಾಠ ಶಾಲೆ ಮೂಲಕ ಗಮಕ ವಿದ್ವತ್ ಪರೀಕ್ಷೆಯನ್ನು ಕಟ್ಟಿದ್ದರು. ಪರೀಕ್ಷೆ ಎಲ್ಲವೂ ಸುಲಲಿತವಾಗಿ ಮುಗಿದು ಎಲ್ಲರೂ ಅತ್ಯುತ್ತಮವಾದ ಫಲಿತಾಂಶ ಪಡೆದಿದ್ದ ಕಾರಣ ಅದರ ಸಂಭ್ರಮಾಚರಣೆಗೆಂದು ಕುಟುಂಬ ಸಮೇತವಾಗಿ ಎಲ್ಲಾದರೂ ಪ್ರವಾಸಕ್ಕೆ ಹೋಗಬೇಕೆಂದು ನಿರ್ಧರಿಸಿ, ಅದೊಂದು ಭಾನುವಾರ ಬೆಳಿಗ್ಗೆ 9.00ಘಂಟೆಯ… Read More ಕಳೆದು ಹೋದ ಉಂಗುರ

ಎಳ್ಳಿನ ಹಾಲು

ಹೇಳಿ ಕೇಳಿ ಇದು ಬೇಸಿಗೆ ಸಮಯ. ಹತ್ತಾರು ಸಲ ಬಾಯಾರಿಕೆಯಾಗುತ್ತಿರುತ್ತದೆ. ಇಂತಹ ಸಮಯದಲ್ಲಿ ಮಾರುಕಟ್ಟೆಯಲ್ಲಿ ಸಿಗುವ ಬಣ್ಣ ಬಣ್ಣದ ಅನಾರೋಗ್ಯಕರವಾದ ಪೇಯಗಳನ್ನು ಕುಡಿಯುವ ಬದಲು ಮನೆಯಲ್ಲಿಯೇ ಸುಲಭವಾಗಿ ತಯಾರಿಬಹುದಾದ ಆರೋಗ್ಯಕರವಾದ ಸಸ್ಯಜನಿತ ಎಳ್ಳಿನ ಹಾಲನ್ನು ಮಾಡುವ ವಿಧಾನವನ್ನು ನಮ್ಮ ನಳಪಾಕ ಮಾಲಿಕೆಯಲ್ಲಿ ತಿಳಿಸಿಕೊಡುತ್ತಿದ್ದೇವೆ. ಸುಮಾರು 2-3 ಜನರು ಸವಿಯಬಹುದಾದಷ್ಟು ಎಳ್ಳಿನ ಹಾಲು ತಯಾರಿಸಲು ಬೇಕಾಗುವ ಸಾಮಗ್ರಿಗಳು ಬಿಳಿ ನೈಲಾನ್ ಎಳ್ಳು – 100 ಗ್ರಾಂಬೆಲ್ಲ- 100 ಗ್ರಾಂಹಾಲು – 1/2 ಲೀಟರ್ಏಲಕ್ಕಿ – 3 ರಿಂದ 4… Read More ಎಳ್ಳಿನ ಹಾಲು

ಲೈಫ್ ಇಷ್ಟೇ ಗುರು

ಕುಟುಂಬದ ಮುಖ್ಯಸ್ಥರ ಮರಣದ ನಂತರ ಆಸ್ತಿ ಮತ್ತು ಹಣಕಾಸಿನೊಂದಿಗೆ ವ್ಯವಹರಿಸಿದ್ದವರ ಕಷ್ಟ ನಷ್ಟಗಳ ಕುರಿತಾದ ಈ ಸುದೀರ್ಘವಾದ ಲೇಖನವನ್ನು ಸ್ವಲ್ಪ ಸಮಯ ಕೊಟ್ಟು ಸಮಚಿತ್ತದಿಂದ ಓದ ಬೇಕೆಂದು ಕಳಕಳಿಯ ಮನವಿ. ಗಂಡ ಸಾಫ್ಟ್ ವೇರ್ ಇಂಜೀನಿಯರ್ ಆಗಿ ಬಹುರಾಷ್ಟ್ರೀಯ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರೆ ಅವರ ಮಡದಿ ಚಾರ್ಟಡ್ ಅಕೌಂಟೆಂಟ್ ಆಗಿದ್ದರು. ಇಬ್ಬರಿಗೂ ಕೈ ತುಂಬಾ ಕೆಲಸ ಜೋಬು ತುಂಬಿ ತುಳುಕುವಷ್ಟು ಹಣ ಇದ್ದ ಕಾರಣ ಮನೆ ಮಠ ಸಂಸಾರದ ಮಕ್ಕಳು ಮಾಡಿಕ್ಕೊಳ್ಳುವುದಕ್ಕೂ ಪುರುಸೊತ್ತು ಇಲ್ಲದಷ್ಟು ಇಬ್ಬರೂ ತಮ್ಮ… Read More ಲೈಫ್ ಇಷ್ಟೇ ಗುರು

ಮೇಲುಕೋಟೆಯ ವೈರಮುಡಿ ಉತ್ಸವ

ಮೇಲುಕೋಟೆ ಕರ್ನಾಟಕದ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಕಲೆ, ಸಂಸ್ಕೃತಿ, ಶಿಲ್ಪಕಲೆಯಿಂದ ಕೂಡಿದ ಸುಂದರವಾದ ಪುರಾಣ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾಗಿದ್ದು ಆಚಾರ್ಯ ತ್ರಯರಲ್ಲಿ ಒಬ್ಬರಾದ ಶ್ರೀ ರಾಮಾನುಜಾಚಾರ್ಯರ ಕರ್ಮ ಭೂಮಿಯೂ ಆಗಿದೆ. ಬೆಟ್ಟ ಗುಡ್ಡಗಳ ನಡುವೆ ಇರುವ ಈ ಊರಿನಲ್ಲಿ ಸರಿ ಸುಮಾರು 101 ದೇಗುಲಗಳು ಹಾಗೂ 101 ಕಲ್ಯಾಣಿಗಳಿರುವ ಸುಂದರ ಬೀಡಾಗಿದ್ದು ಶ್ರೀ ವೈಷ್ಣವರ ಯಾತ್ರಾ ಸ್ಥಳವಾಗಿಯೂ, ಅನೇಕ ಶ್ರದ್ದೇಯ ಆಸ್ತಿಕ ಬಂಧುಗಳ ಪುಣ್ಯಕ್ಷೇತ್ರವಾಗಿಯೂ ಮತ್ತು ಪ್ರವಾಸಿಗರ ಮತ್ತು ಚಿತ್ರರಂಗದ ನೆಚ್ಚಿನ ಚಿತ್ರೀಕರಣದ ತಾಣವೂ ಆಗಿದೆ.… Read More ಮೇಲುಕೋಟೆಯ ವೈರಮುಡಿ ಉತ್ಸವ

ಇಕ್ಕೇರಿಯ ಅಘೋರೇಶ್ವರ ರಥೋತ್ಸವ

ಇಕ್ಕೇರಿ ಶಿವಮೊಗ್ಗ ಜಿಲ್ಲೆಯ ಸಾಗರದಿಂದ ಸುಮಾರು 6 ಕಿಮೀ ದೂರದಲ್ಲಿರುವ ಪಟ್ಟಣವಾಗಿದೆ. 1499-1763ರ ನಡುವೆ ಈ ಪ್ರದೇಶವನ್ನು ಆಳಿದ ಕೆಳದಿಯ ನಾಯಕರ ರಾಜಧಾನಿಯಾಗಿತ್ತು. ಇಲ್ಲಿರುವ ಅಘೋರೇಶ್ವರ ದೇವಸ್ಥಾನ ಬಹಳ ಪ್ರಖ್ಯಾತವಾಗಿದ್ದು, ಇದರ ಕುರಿತಾಗಿ ಅನೇಕ ದಂತ ದಂತಕಥೆಗಳಿವೆ. ಚೌಡೇಗೌಡ ಮತ್ತು ಭಧ್ರೇ ಗೌಡ ಎಂಬ ಇಬ್ಬರು ಸಹೋದರರು ಅದೊಮ್ಮೆ ತಮ್ಮ ಹೊಲದಲ್ಲಿ ಹಸುಗಳನ್ನು ಮೇಯಿಸುತ್ತಿದ್ದಾಗ, ಅವರ ಹಸುವೊಂದು ಅಲ್ಲಿದ್ದ ಹುತ್ತದ ಮೇಲೆ ತಂತಾನೇ ಹಾಲನ್ನು ಸುರಿಸುತ್ತಿದ್ದದ್ದನು ಗಮನಿಸಿ ಆ ಹುತ್ತವನ್ನು ಅಗೆದಾಗ ಅಲ್ಲೊಂದು ಲಿಂಗವನ್ನು ಕಂಡು ಭಕ್ತಿಪೂರ್ವಕವಾಗಿ… Read More ಇಕ್ಕೇರಿಯ ಅಘೋರೇಶ್ವರ ರಥೋತ್ಸವ

ಮಹಿಳಾ ಸಭ್ಯತೆ ಮತ್ತು ಸಬಲೀಕರಣ

ಈ ವಾರದ ಅನೇಕ ಸುದ್ದಿಗಳಲ್ಲಿ ಎರಡು ಸುದ್ದಿಗಳು ರಾಜ್ಯ ಮತ್ತು ರಾಷ್ಟ್ರಾದ್ಯಂತ ಒಂದು ರೀತಿಯ ಅಲ್ಲೋಲ ಕಲ್ಲೋಲವನ್ನು ಉಂಟು ಮಾಡುತ್ತಿವೆ. ಮೊದಲನೆಯದು ತನ್ನ ವಯಕ್ತಿಕ ತೆವಲಿಗೋ ಇಲ್ಲವೇ ಮತ್ತಾರದ್ದೋ ರಾಜಕೀಯ ತೆವಲಿಗೆ ದಾಳವಾಗಿ ಪ್ರಪಂಚಾದ್ಯಂತ ಬಟ್ಟ ಬಯಲಾದ ಮಹ್ಲಿಳೆಯೊಬ್ಬಳದ್ದಾದರೇ, ಮತ್ತೊಂದು ಮಹಿಳೆಯರ ಉಡುಪಿನ ಬಗ್ಗೆ ಕಾಳಜಿಯುಕ್ತ ಮಾತನಾಡಿದ ಉತ್ತರಾಖಂಡ ನೂತನ ಮುಖ್ಯಮಂತ್ರಿ ತಿರತ್ ಸಿಂಗ್ ರಾವತ್ ಅವರನ್ನು ಪ್ರಿಯಾಂಕ ವಾದ್ರಾಳೂ ಸೇರಿದಂತೆ ತಮ್ಮನ್ನು ತಾವು ಪ್ರಗತಿಪರ ಎಂದು ತೋರಿಸಿಕೊಳ್ಳುಲು ಹಪಾಹಪಿ ಪಡುವ ಕೆಲ ಮಹಿಳೆಯರು ಹಿಗ್ಗಾ ಮುಗ್ಗಾ… Read More ಮಹಿಳಾ ಸಭ್ಯತೆ ಮತ್ತು ಸಬಲೀಕರಣ