ಕಾಶೀ ಶ್ರೀ ವಿಶ್ವನಾಥ

ನಮ್ಮ ಭಾರತ ದೇಶದ ಅತ್ಯಂತ ದೊಡ್ಡ ರಾಜ್ಯವಾದ ಉತ್ತರ ಪ್ರದೇಶದ ಕಾಶಿ, ವಾರಣಾಸಿ, ಬನಾರಸ್ ಎಂಬೆಲ್ಲಾ ಹೆಸರುಗಳಿಂದ ಕರೆಸಿಕೊಳ್ಳುವ ಈ ಶ್ರೀಕ್ಷೇತ್ರ ಹಿಂದೂಗಳ ಆಧ್ಯಾತ್ಮ ಕೇಂದ್ರವಲ್ಲದೇ ಮೋಕ್ಷದ ಹಾದಿಯೂ ಆಗಿದೆ. ಕಾಶಿಗೆ ಹೋಗಿ ಬಂದವರಿಗೆ ಮೋಕ್ಷ ಸಿಗುವುದಲ್ಲದೇ ಕಾಶೀಯಲ್ಲಿ ದೇಹತ್ಯಾಗ ಮಾಡುವರಿಗೆ ಶಾಶ್ವತವಾದ ಸದ್ಗತಿ ದೊರೆಯುತ್ತದೆ ಎಂಬ ನಂಬಿಕೆ ಇದೆ. ಗಂಗಾನದಿಯ ತಟದಲ್ಲಿ ೬೪ ಘಾಟ್ ಗಳಿರುವ ಈ ಶ್ರೀಕ್ಷೇತ್ರದಲ್ಲಿ ವಿಶ್ವಪ್ರಸಿದ್ಧ ಕಾಶಿ ವಿಶ್ವನಾಥ ದೇವಾಲಯವಿದ್ದು ಶಿವರಾತ್ರಿಯ ಈ ಪವಿತ್ರದಿನದಂದು ಶ್ರೀಕ್ಷೇತ್ರದ ದರ್ಶನವನ್ನು ಪಡೆಯೋಣ ಬನ್ನಿ. ಕಾಶಿಯ… Read More ಕಾಶೀ ಶ್ರೀ ವಿಶ್ವನಾಥ

ಊನಕೋಟಿ

ನಮ್ಮ ಸನಾತನ ಧರ್ಮದಲ್ಲಿ ಅನೇಕ ಪುರಾಣ ಪುಣ್ಯಕಥೆಗಳಿದ್ದು ಅವೆಲ್ಲವೂ ಭಾರತದಲ್ಲಿ ಸಾವಿರಾರು ವರ್ಷಗಳ ಹಿಂದೆ ನಡೆದದ್ದು ಎಂದು ನಂಬಿದರೆ, ಇನ್ನೂ ಅನೇಕರು ಅದು ಕೇವಲ ಕಾಲ್ಪನಿಕ ಕಟ್ಟು ಕಥೆ ಎಂದು ವಾದ ಮಾಡುವವರೂ ಇದ್ದಾರೆ. ಹಾಗೆ ವಾದ ಮಾಡುವವರಿಗೆ ಉತ್ತರಿಸುವಂತೆ ಆ ಪುರಾಣ ಕಥೆಗಳಲ್ಲಿ ಉಲ್ಲೇಖವಿರುವ ಬಹುತೇಕ ನದಿಗಳು, ನಗರಗಳು ಭಾರತಾದ್ಯಂತ ಹರಡಿಕೊಂಡಿದ್ದು ಈ ಪುರಾಣ ಕಥೆಗಳಿಗೆ ಪೂರಕವಾಗಿದೆ. ಪುರಾಣ ಕಥೆಯಲ್ಲಿ ಬರುವ ಇಂತಹದ್ದೇ ಒಂದು ದಂತಕತೆಗೆ ಜ್ವಲಂತ ಉದಾಹರಣೆಯಾಗಿ ತ್ರಿಪುರದ ಕಾಡುಗಳಲ್ಲಿ ಗೋಚರವಾಗಿರುವ, ಕಾಲ ಭೈರವನ… Read More ಊನಕೋಟಿ