ಸಂಚಾರಿ ವಿಜಯ್

ಬದುಕು ಜಟಕಾಬಂಡಿ, ವಿಧಿ ಅದರ ಸಾಹೇಬ, ಕುದುರೆ ನೀನ್, ಅವನು ಪೇಳ್ದಂತೆ ಪಯಣಿಗರು.| ಮದುವೆಗೋ ಮಸಣಕೋ ಹೋಗೆಂದ ಕಡೆ ಗೋಡು ಪದ ಕುಸಿಯೆ ನೆಲವಿಹುದು ಮಂಕುತಿಮ್ಮ || ಡಿವಿಜಿಯವರು ಅಂದು ಯಾರನ್ನು ತಲೆಯಲ್ಲಿ ಇಟ್ಟುಕೊಂಡು ಈ ಕಗ್ಗವನ್ನು ಬರೆದರೋ ಏನೋ? ಆದರೆ ಈ ಪದ್ಯ ಮಾತ್ರ ಸದ್ಯದ ಪರಿಸ್ಥಿತಿಯಲ್ಲಿ ರಂಗಭೂಮಿ ಮತ್ತು ಚಲನಚಿತ್ರನಟ ಮತ್ತು ನಿರ್ದೇಶಕ ಸಂಚಾರಿ ವಿಜಯ್ ಅವರ ಪಾಲಿಗಂತೂ ಅನ್ವಯವಾಗುತ್ತದೆ ಎಂದರೂ ತಪ್ಪಾಗಲಾರದು. ಕೆಲ ವರ್ಷಗಳ ಹಿಂದೆ, ದಯಾಳ್ ಪದ್ಮನಾಭ್ ಅವರ ನಿರ್ದೇಶನದ ಸತ್ಯಹರಿಶ್ಚಂದ್ರ… Read More ಸಂಚಾರಿ ವಿಜಯ್

ಶಾಲೆಗಳನ್ನೇ ವಿಶೇಷ ಕೋವಿಡ್ ಅರೈಕೆ ಕೇಂದ್ರಗಳನ್ನಾಗಿಸಿದ ರಾಷ್ಟ್ರೋತ್ಥಾನ ಪರಿಷತ್

ಅದೊಂದು ವಠಾರದಲ್ಲಿ ನಾಲ್ಕು ಜನರಿರುವ ಒಂದು ಸಣ್ಣ ಕುಟುಂಬವೊಂದು ವಾಸವಾಗಿತ್ತು. ಅದೊಮ್ಮೆ ಇದ್ದಕ್ಕಿದ್ದಂತೆಯೇ ಆ ಮನೆಗೆ ದೂರದೂರಿನಿಂದ ಸುಮಾರು ಎಂಟು ಹತ್ತು ನೆಂಟರು ಆಗಮಿಸಿ ಬಿಟ್ಟರು. ಬಂದರವರನ್ನು ನೋಡಿದರೆ ದೂರ ಪ್ರಯಾಣದಿಂದ ಬಹಳ ಹಸಿದಂತೆ ಕಾಣುತ್ತಿದ್ದರು. ಅವರೆಲ್ಲರನ್ನು ಊಟಕ್ಕೆ ಕುಳ್ಳಿರಿಸಬೇಕು.  ಆದರೆ  ಅವರ ಮನೆಯಲ್ಲಿ ಎಲ್ಲರಿಗೂ ಸಾಕಾಗುವಷ್ಟು ಅಡುಗೆ ಇರಲಿಲ್ಲ. ಅಷ್ಟು ಜನರಿಗೆ  ಅಡುಗೆ ಮಾಡಬೇಕೆಂದರೂ ಕನಿಷ್ಟ ಪಕ್ಷ ಒಂದೆರಡು ಗಂಟೆಯಾದರೂ ಬೇಕಿತ್ತು.  ತಿಂಗಳ ಕೊನೆಯಾಗಿದ್ದರಿಂದ ಹೋಟೇಲ್ಲಿನಿಂದಲೂ ತರುವಷ್ಟು ಹಣ ಅವರ ಬಳಿ ಇರಲಿಲ್ಲ. ಕೂಡಲೇ ಮನೆಯಾಕೆ… Read More ಶಾಲೆಗಳನ್ನೇ ವಿಶೇಷ ಕೋವಿಡ್ ಅರೈಕೆ ಕೇಂದ್ರಗಳನ್ನಾಗಿಸಿದ ರಾಷ್ಟ್ರೋತ್ಥಾನ ಪರಿಷತ್

ಆಟ ಇನ್ನೂ ಬಾಕೀ ಇದೆ.

ನೆನ್ನೆಯ ದಿನ ವೀಕೆಂಡ್ ಕರ್ಘ್ಯೂ ಇದ್ದ ಕಾರಣ ಸಾವಯವ ಸಂತೆಯನ್ನು ಬಂದ್, Online ಮುಖಾಂತರವೇ ಸಾಂಘೀಕ್ಕಿನಲ್ಲಿ ಭಾಗವಹಿಸಿ, ಆತ್ಮೀಯರ ಮಗನ ಮದುವೆಯಲ್ಲೂ Online ಮುಖಾಂತರ ಆಶೀರ್ವದಿಸಿ, ಮನೆಯ ಗೇಟಿನ ಹೊರಗೂ ಹೋಗದೇ ಪಟ್ಟಾಗಿ ಮನೆಯಲ್ಲಿಯೇ ಇರಲು ನಿರ್ಧರಿಸಿದ್ದೆ. ಸಮಯೋಚಿತವಾಗಿೆ ಚೆನ್ನಾಗಿ ಜೀರಿಗೆ, ಕಾಳುಮೆಣಸು, ಶುಂಠಿ ಮತ್ತು ಮನೆಯಲ್ಲೇ ಕಡೆದು ತೆಗೆದ ಬೆಣ್ಣೆಯ ತುಪ್ಪ ಹಾಕಿ ಮಾಡಿದ್ದ ನವಣೆ ಹುಗ್ಗಿ(ಪೊಂಗಲ್) ಜೊತೆಗೆ ಕಾಯಿ, ಕೊತ್ತಂಬರಿ ಮತ್ತು ಪುದಿನಾ ಹಾಕಿದ ಚೆಟ್ಟಿ ತಿಂದು ಸ್ವರ್ಗಕ್ಕೆ ಮೂರೇ ಗೇಣು ಎನ್ನುವಂತೆ ಅನಂದಿಸಿ… Read More ಆಟ ಇನ್ನೂ ಬಾಕೀ ಇದೆ.

ದೇಶದ ವಾಸ್ತವತೆ ಮತ್ತು ನಮ್ಮ ಜವಾಬ್ಧಾರಿ

ಕಳೆದ ಮೂರ್ನಾಲ್ಕು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ದೃಶ್ಯಮಾದ್ಯಮಗಳಲ್ಲಿ ಇದ್ದಕ್ಕಿದ್ದಂತೆಯೇ ಕೊರೋನಾ ಬಗ್ಗೆ ಅತ್ಯಂತ ಹೆಚ್ಚಿನ ಕಾಳಜಿ ಬಂದಿರುವಂತಿದೆ. ಇದಕ್ಕಿದ್ದಂತೆಯೇ ಜಾಗೃತರಾಗಿ ಈ ಕೊರೋನಾ ಮಾಹಾಮಾರಿ ಉಲ್ಪಣವಾಗುವುದಕ್ಕೆ ಈ ರಾಜ್ಯಸರ್ಕಾರವೇ ಕಾರಣ ಈ ಕೇಂದ್ರ ಸರ್ಕಾರದ ಕೆಟ್ಟ ಆಡಳಿತವೇ ಕಾರಣ ಎಂದು ಪುಂಖಾನುಪುಂಖವಾಗಿ ಹರಿಹಾಯುತ್ತಿರುವುದಲ್ಲದೇ, ಈ ಸರ್ಕಾರಗಳಿಗೆ ನಾಚಿಕೆಯಾಗಬೇಕು. ಆಡಳಿತ ನಡೆಸಲು ಅಸಮರ್ಥರಾದಲ್ಲಿ ರಾಜಿನಾಮೆ ನೀಡಿ ಹೊರ ಬನ್ನಿ ಎನ್ನುತ್ತಿದ್ದಾರೆ ಇನ್ನೂ ಕೆಲವು ಕೆಲವರು ಮೋದಿ ಮತ್ತು ಬಿಜೆಪಿ ಪಕ್ಷದ ಮೇಲಿನ ತಮ್ಮ ವಯಕ್ತಿಕ ಹಿತಾಸಕ್ತಿಗಳಿಂದಾಗಿ  ಸರ್ಕಾರವನ್ನು… Read More ದೇಶದ ವಾಸ್ತವತೆ ಮತ್ತು ನಮ್ಮ ಜವಾಬ್ಧಾರಿ

ಮೊದಲನೆಯದು ಕ್ಷಮ್ಯ, ಎರಡನೆಯದು ಅಕ್ಷಮ್ಯ

ವಯಸ್ಸಾದ ತಂದೆ, ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಮಗ, ಸೊಸೆ ಮತ್ತು ಕಾಲೇಜಿಗೆ ಹೋಗುತ್ತಿದ್ದ ಮೊಮ್ಮಗನಿದ್ದ ಅದೊಂದು ಸುಂದರ ಕುಟುಂಬ. ತಂದೆ-ಮಗ, ತಾತ-ಮೊಮ್ಮಗ ಬಹಳ ಅನ್ಯೋನ್ಯವಾಗಿದ್ದಂತಹ ಸಂಬಂಧ. ತಾತನಿಗೆ ವಯಸ್ಸಾಗಿದ್ದ ಕಾರಣ ಮನೆಯಲ್ಲಿಯೇ ಇರುತ್ತಿದ್ದರು. ಅದು ಹೇಗೋ ಮೊಮ್ಮಗನಿಗೆ ಕರೋನಾ ಸೋಂಕು ತಗುಲಿ ಅಲ್ಲಿಂದ ತಾತನಿಗೆ, ನಂತರ ಮಗ ಸೊಸೆ ಹೀಗೆ ಇಡೀ ಕುಟುಂಬವೇ ಕರೋನಾ ಸೋಂಕಿಗೆ ಬಲಿಯಾದ ಕಾರಣ ವಿಧಿ ಇಲ್ಲದೇ ಎಲ್ಲರೂ ಆಸ್ಪತ್ರೆಗೆ ಸೇರಬೇಕಾಯಿತು. ವಯಸ್ಸಾದ ಹಿರಿಯರು ತೀವ್ರವಾದ ಸೋಂಕಿಗೆ ಬಲಿಯಾಗಿದ್ದ ಕಾರಣ ಐ.ಸಿ.ಯು… Read More ಮೊದಲನೆಯದು ಕ್ಷಮ್ಯ, ಎರಡನೆಯದು ಅಕ್ಷಮ್ಯ

ಶ್ರೀಕಂಠ, ವಿಷಕಂಠ, ನೀಲಕಂಠ

ಸಮುದ್ರ ಮಂಥನದ ಸಮಯ, ಕೈಲಾಸ ಪರ್ವತವನ್ನೇ ಕಡಗೋಲಾಗಿಸಿಕೊಂಡು ಆದಿಶೇಷನ ಒಂದು ತುದಿ ದೇವತೆಗಳು ಮತ್ತು ಮತ್ತೊಂದು ತುದಿಯನ್ನು ಅಸುರರು ಹಿಡಿದುಕೊಂಡು ಮಜ್ಜಿಗೆ ಕಡೆದಂತೆ ಸಮುದ್ರವನ್ನು ಕಡೆಯುತ್ತಿದ್ದಾಗ ಉಕ್ಕಿಬಂದ ಕಾರ್ಕೋಟಕ ವಿಷವನ್ನು ತಾಳಲಾರದೇ, ಎಲ್ಲರೂ ಆ ಪರಶಿವನ ಮೊರೆ ಹೊಕ್ಕಾಗಾ ಹಿಂದೂ ಮುಂದೇ ನೋಡದ ಶಿವಾ ಆ ಕಾರ್ಕೋಟಕ ವಿಷವನ್ನು ತನ್ನ ಎರಡೂ ಕೈಗಳಿಗೆ ಬರುವಂತೆ ಮಾಡಿಕೊಂಡು ಗಟ ಗಟನೆ ಆಪೋಷನೆ ಮಾಡುತ್ತಿರುವ ವಿಷಯ ತಿಳಿದು, ಪಾರ್ವತಿದೇವಿ ಓಡೋಡಿ ಬರುವಷ್ಟರಲ್ಲಿ ಶಿವ ವಿಷವನ್ನು ಸೇವಿಸಿಯಾಗಿರುತ್ತದೆ. ಇದನ್ನು ಕಂಡ ಪಾರ್ವತೀ… Read More ಶ್ರೀಕಂಠ, ವಿಷಕಂಠ, ನೀಲಕಂಠ

ಜೀವವಿದ್ದಲ್ಲಿ ಮಾತ್ರವೇ ಜೀವನ

ಕಳೆದ ಒಂದು ವಾರದಲ್ಲಿ, ಇತ್ತೀಚೆಗಷ್ಟೇ ರಾಜ್ಯಸಭೆಗೆ ಆಯ್ಕೆಯಾಗಿದ್ದ ರಾಜ್ಯಸಭಾಸದಸ್ಯರು, ನಾಲ್ಕು ಬಾರಿ ಸಾಂಸದರಾಗಿ ಕೇಂದ್ರದಲ್ಲಿ ಮಂತ್ರಿಗಳಾಗಿದ್ದವರು ಮತ್ತು ಹಿರಿಯ ಶಾಸಕರಲ್ಲದೇ. ಹೆಸರಾಂತ ಗಾಯಕರರಾದ ಶ್ರೀ ಎಸ್. ಪಿ. ಬಾಲಸುಬ್ರಹ್ಮಣ್ಯಂ ಅವರನ್ನು ಕಳೆದುಕೊಂಡಿದ್ದೇವೆ ಮತ್ತು ಅಸ್ಸಾಂನ ಮಾಜಿ ಮುಖ್ಯಮಂತ್ರಿಗಳ ಆರೋಗ್ಯ ಚಿಂತಾಜನಕವಾಗಿದೆ. ಇವರೆಲ್ಲರೀ ಪರಿಸ್ಥಿತಿಯ ಹಿಂದೆ ಮಹಾಮಾರಿ ಕೂರೋನಾ ಕೈವಾಡವಿರುವುದು ಸ್ಪಷ್ಟವಾಗಿದೆ. ಸಚಿವರು, ಶಾಸಕರು, ಸಮಾಜದ ಗಣ್ಯವ್ಯಕ್ತಿಗಳಿಗೇ ಚಿಕಿತ್ಸೆ ಫಲಕಾರಿಯಾಗುತ್ತಿಲ್ಲವೆಂದರೆ, ಇನ್ನು ಸಾಮಾನ್ಯ ಜನಗಳ ಪಾಡೇನು? ಸರ್ಕಾರ ಮತ್ತು ಆರೋಗ್ಯ ಇಲಾಖೆ ಎಷ್ಟೇ ಜಾಗೃತಿ ವಹಿಸಿದ್ದರೂ, ಸಮಾಜದಲ್ಲಿ ದಿನೇ… Read More ಜೀವವಿದ್ದಲ್ಲಿ ಮಾತ್ರವೇ ಜೀವನ

ಧೈರ್ಯಂ  ಸರ್ವತ್ರ ಸಾಧನಂ

ಮುಖಪುಟದ ಮುಖಾಂತರವೇ ಪರಿಚಯವಾದ ಮೂಲತಃ ಮುಧೋಳದವರಾದರೂ ಸದ್ಯ ಕೊಪ್ಪಳದಲ್ಲಿರುವ ಶ್ರೀ ಶಿವಶರಣಪ್ಪ ಬಳಿಗಾರ್ ಅವರು ಕಳೆದ ಮೂರ್ನಾಲ್ಕು ವಾರಗಳಿಂದಲೂ ಸಾಮಾಜಿಕ ಜಾಲ ತಾಣಗಳಲ್ಲಿ ಅಷ್ಟೊಂದು ಕಾಣಸಿಗಲಿಲ್ಲ, ಎನೋ ಕೆಲಸ ಕಾರ್ಯದಲ್ಲಿ ನಿರತರಾಗಿ ಇರಬಹುದೇನೋ ಎಂದು ಕೊಂಡಿದ್ದರೆ ಇಂದು ಬೆಳಿಗ್ಗೆ ಅವರ ಮುಖಪುಟದ ಗೋಡೆಯಲ್ಲಿ ಅವರದ್ದೇ ಲೇಖನ ಓದಿ ಒಂದು ಕಡೆ ಮತ್ತೊಂದೆಡೆ ಸಂತೋಷವಾಯಿತು. ಅವರ ಬರೆದದ್ದನ್ನು ಹಾಗೆಯೇ ಇಲ್ಲಿ ಪ್ರಕಟಿಸುತ್ತಿದ್ದೇನೆ. ಅವ್ವನಿಗೆ ಕಾಲುಸೆಪ್ಟೆಕ್ ಆದ ಕಾರಣ ಯಲಬುರ್ಗಾ ತಾಲ್ಲೂಕಿನ ಸರಕಾರಿ ಆಸ್ಪತ್ರೆಯಲ್ಲಿ 4-5 ದಿನ ಚಿಕಿತ್ಸೆ ಗಾಗಿ… Read More ಧೈರ್ಯಂ  ಸರ್ವತ್ರ ಸಾಧನಂ

ಆಲ್ ರೈಟ್ ಮುಂದಕ್ಕೆ ಹೋಗೋಣ

ಸುಮಾರು ದಿನಗಳಿಂದ ಕರೆ ಮಾಡದಿದ್ದ ನನ್ನ ಅಮೇರಿಕಾದ ನ್ಯೂಜೆರ್ಸಿಯಲ್ಲಿರುವ ಸ್ನೇಹಿತ ನಿನ್ನೆ ರಾತ್ರಿ ಕರೆ ಮಾಡಿದ್ದ. ಸಾಧಾರಣವಾಗಿ ತಿಂಗಳಿಗೊಮ್ಮೆಯೋ ಇಲ್ಲವೇ ಎರಡು ತಿಂಗಳಿಗಳಿಗೆ ಒಮ್ಮೆ ಕರೆ ಮಾಡಿ ಗಂಟೆ ಗಟ್ಟಲೆಗಳ ಕಾಲ ಉಭಯ ಕುಶಲೋಪರಿಯನ್ನು ವಿಚಾರಿಸುವುದು ನಮ್ಮಿಬ್ಬರ ನಡುವಿನ ವಾಡಿಕೆ. ಇತ್ತೀಚೆಗೆ ಸುಮಾರು ಐದಾರು ತಿಂಗಳುಗಳಿಂದ ಆತ ಕರೆ ಮಾಡಿರಲಿಲ್ಲ. ಬಹುಶಃ ಕೆಲಸದ ಬಾಹುಳ್ಯದಿಂದಲೋ ಇಲ್ಲವೇ ಕೂರೋನಾ ಪರಿಸ್ಥಿತಿಯಿಂದಾಗಿ ಆತ ಕರೆ ಮಾಡದಿರಬಹುದು ಎಂದು ನಾನೂ ಕೂಡಾ ಸುಮ್ಮನಾಗಿದ್ದೆ. ಯಥಾ ಪ್ರಕಾರ ಮನೆಯಲ್ಲಿ ಎಲ್ಲರೂ ಹೇಗಿದ್ದಾರೆ? ಮಕ್ಕಳ… Read More ಆಲ್ ರೈಟ್ ಮುಂದಕ್ಕೆ ಹೋಗೋಣ