ಉಲ್ಟೇ ಹನುಮಾನ್ ಮಂದಿರ್

ಭಕ್ತಿ ಅಂದ ತಕ್ಷಣ ನಮ್ಮ ಮನಸ್ಸಿಗೆ ಥಟ್ ಅಂತಾ ನೆನಪಿಗೆ ಬರುವುದೇ ರಾಮನ ಭಕ್ತಾಗ್ರೇಸರ ಅಂಜನೀ ಪುತ್ರ ಪವನಸುತ ಹನುಮಾನ್ ಎಂದರೆ ಅತಿಶಯೋಕ್ತಿಯೇನಲ್ಲ. ಸೀತಾಮಾತೆಯ ಅನ್ವೇಷಣೆಯ ಸಂದರ್ಭದಲ್ಲಿ ಸಮುದ್ರೋಲಂಘನವನ್ನು ಮಾಡಿ ಲಂಕೆಗೆ ಹೋಗಿ ಸೀತಾಮಾತೆಯನ್ನು ಹುಡುಕಿಕೊಂಡ ಬಂದ ಭಜರಂಗಬಲಿ ಇವನು. ಮಹಾನ್ ಪರಾಕ್ರಮಿಯಾದ ಕಾರಣಕ್ಕಾಗಿಯೇ, ಪ್ರಪಂಚಾದ್ಯಂತ ಹನುಮಂತನ ಬೃಹತ್ತಾದ ಪ್ರತಿಮೆಗಳನ್ನು ಎಲ್ಲೆಡೆಯಲ್ಲಿಯೂ ಕಾಣಬಹುದಾಗಿದೆ. ಶಕ್ತಿ, ಭಕ್ತಿ ಮತ್ತು ಬುದ್ಧಿವಂತಿಕೆಯ ಪ್ರತೀಕವೆಂದೇ ಪರಿಗಣಿಸಲ್ಪಟ್ಟ ಆಂಜನೇಯನ ನಿಂತಿರುವ ಇಲ್ಲವೇ ಸಂಜೀವಿನ ಪರ್ವತವನ್ನು ಹೊತ್ತಿರುವ ವಿಗ್ರಹವನ್ನು ಬಹುತೇಕ ಎಲ್ಲಾ ದೇವಾಲಯಗಳಲ್ಲಿಯೂ ಮತ್ತು… Read More ಉಲ್ಟೇ ಹನುಮಾನ್ ಮಂದಿರ್

ಗರಡಿ ಮನೆ

ಸುಮಾರು ಎರಡು ದಶಕಗಳ ಹಿಂದೆ ನಮ್ಮ ದೇಶದ ಬಹುತೇಕ ಹಳ್ಳಿಗಳಿಗೆ ಇನ್ನೇನು ಪ್ರವೇಶಿಸಬೇಕು ಎನ್ನುವಷ್ಟರಲ್ಲಿಯೇ ಅಲ್ಲೊಂದು ಸುಮಾರಾಗಿರುವ ಕಟ್ಟಡ ಅದರ ಮೇಲೊಂದು ಕೇಸರಿ ಬಾವುಟ ಎದ್ದು ಕಾಣುತ್ತಿದ್ದಲ್ಲಿ ಆ ಊರಿನಲ್ಲಿ ಯಾವುದೇ ಕಳ್ಳಕಾಕರ ಭಯವಿಲ್ಲ. ಆ ಊರಿನ ಹೆಣ್ಣುಮಕ್ಕಳು ನಿರ್ಭಿಡೆಯಾಗಿ ಯಾವ ಹೊತ್ತಿನಲ್ಲಾದರೂ ಓಡಾಡಬಹುದು. ಅಲ್ಲಿ ಯಾವುದೇ ಪುಂಡ ಪೋಕರಿಗಳ ಕಾಟವಿರುವುದಿಲ್ಲ ಎಂಬ ಭರವಸೆಯನ್ನು ಮೂಡಿಸುತ್ತಿದ್ದವು. ಅರೇ, ಒಂದು ಕಟ್ಟಡದಿಂದಾಗಿ ಇಷ್ಟೊಂದು ಸಾಮಾಜಿಕ ಬದಲಾವಣೆಯೇ ಎಂದು ತಿಳಿದಲ್ಲಿ, ಆ ಕಟ್ಟಡ ಸಾಮ್ಯಾನ್ಯ ಕಟ್ಟಡವಾಗಿರದೇ, ಅದನ್ನು ಗರಡಿ ಮನೆ… Read More ಗರಡಿ ಮನೆ