ಸಮಾನತೆ ಎಂದರೆ ಸ್ವೇಚ್ಚಾಚಾರವಲ್ಲ

ಬಹಳ ಹಿಂದೆ ಕರಾವಳಿ ಪ್ರದೇಶದವರು ಎಂದರೆ ಬಹಳ ಶಾಂತಿ ಪ್ರಿಯರು. ಸಂಪ್ರದಾಯ, ಸಂಸ್ಕಾರವಂತರಷ್ಟೇ ಅಲ್ಲದೇ ಸಹೃದಯಿಗಳಾಗಿ ಕುಡಿಯಲು ನೀರು ಕೇಳಿದರೂ, ನೀರಿನ ಜೊತೆ ಸಿಹಿಯಾದ ಬೆಲ್ಲದುಂಡೆಗಳನ್ನು ನೀಡುವಂತಹ ವಿಶಾಲಹೃದಯಿಗಳು. ಇವೆಲ್ಲದರ ಜೊತೆಗೆ ಓದಿನಲ್ಲಿ ಸದಾ ಕಾಲವೂ ಮುಂದಿರುವುದಲ್ಲದೇ, ಬಹಳ ಶ್ರಮದಿಂದ ಎಂತಹ ಕೆಲಸವನ್ನು ಮಾಡಬಲ್ಲವರು ಎಂದೇ ಎಂದೇ ಪ್ರಖ್ಯಾತರಾದವರು. ಆದರೆ ಇತ್ತೀಚಿನ ಕೆಲವು ತಿಂಗಳಿಂದ ಕರಾವಳಿ ಮತ್ತು ಕೇರಳದಲ್ಲಿ ನಡೆಯುತ್ತಿರುವ ಘಟನೆಗಳು ನಿಜಕ್ಕೂ ಬಹಳ ಬೇಸರವನ್ನು ತರಿಸುತ್ತಿದೆ. ಯಾವುದೋ ಮತಾಂಧರ ಮಾತುಗಳಿಗೆ ಬಲಿಯಾಗಿ ವಿದ್ಯೆಗಿಂತಲೂ ಧರ್ಮವೇ ಮುಖ್ಯ… Read More ಸಮಾನತೆ ಎಂದರೆ ಸ್ವೇಚ್ಚಾಚಾರವಲ್ಲ

ಬಾಳಗಂಚಿ ಚೋಮನ ಹಬ್ಬ

ಹಾಸನ ಜಿಲ್ಲೆಯ, ಚೆನ್ನರಾಯಪಟ್ಟಣ ತಾಲೂಕಿನ, ಹಿರೀಸಾವೆ ಹೋಬಳಿಯ ಬಳಿಯ ಪುಟ್ಟದಾದ ಹಳ್ಳಿಯೇ ನಮ್ಮೂರು ಬಾಳಗಂಚಿ. ಸದ್ಯಕ್ಕೆ 350-500 ಮನೆಗಳು ಇದ್ದು ಸುಮಾರು ಹಲವರು ಈಗಾಗಲೇ ಕೆಟ್ಟು ಪಟ್ಟಣಕ್ಕೆ ಸೇರು ಎನ್ನುವಂತೆ ದೇಶಾದ್ಯಂತ ವಿವಿಧ ನಗರ ಪ್ರದೇಶಗಳಿಗೆ ವಲಸೆ ಹೋಗಿರುವ ಕಾರಣ, ಸದ್ಯಕ್ಕೆ ಎರಡು ಮೂರು ಸಾವಿರದವರೆಗೂ ಜನಸಂಖ್ಯೆ ಇರುವಂತಹ ಹಳ್ಳಿ. ಹೆಸರಿಗಷ್ಟೇ ಚಿಕ್ಕದಾದರೂ ಇತಿಹಾಸ ಇಣುಕಿ ನೋಡಿದರೆ ಗುರು ವಿದ್ಯಾರಣ್ಯರ ತವರೂರು ಎಂದು ಖ್ಯಾತಿ ಹೊಂದಿದೆ. ಇನ್ನು ಕೆಲವರು ಗುರು ವಿದ್ಯಾರಣ್ಯರು ವಾಸಿಸಿದ ಸ್ಥಳವೆಂದು ಇಲ್ಲವೇ ತಪಸ್ಸನ್ನು… Read More ಬಾಳಗಂಚಿ ಚೋಮನ ಹಬ್ಬ

ಸಂತ ಶಿಶುನಾಳ ಷರೀಫರು

19ನೇ ಶತಮಾನ ಪರ್ವಕಾಲದಲ್ಲಿ ಬ್ರಿಟೀಷರ ದಬ್ಬಾಳಿಯ ಕಾಲದಲ್ಲಿ ದೇಶಕ್ಕೆ ಸ್ವಾತ್ರಂತ್ರ್ಯ ತಂದು ಕೊಡಲು ನಡೆಸಿದ ಹೋರಾಟದಲ್ಲಿ ಹಿಂದೂಗಳು ಮತ್ತು ಮುಸಲ್ಮಾನರು ಒಗ್ಗಟ್ಟಾಗಿಯೇ ಬ್ರಿಟಿಷರ ವಿರುದ್ಧ ಹೊರಾಡುತ್ತಿದ್ದರು. ಅಲ್ಲಿಯವರೆಗೂ ಕೋಮು ಸೌಹಾರ್ಧತೆಯಿಂದ ಶಾಂತಿಯುತವಾಗಿ ಒಟ್ಟಾಗಿಯೇ ಜೀವಿಸುತ್ತಿದ್ದ ಹಿಂದೂ ಮತ್ತು ಮುಸಲ್ಮಾನರ ನಡುವೆ ಇಂದು ಸಣ್ಣ ಸಣ್ಣ ವಿಷಯಗಳನ್ನೂ ದೊಡ್ಡ ರೀತಿಯ ಭಿನ್ನಾಭಿಪ್ರಾಯಗಳನ್ನಾಗಿ ಮಾಡಿಕೊಂಡು ಪರಸ್ಪರ ಇರುಸು ಮುರುಸು ಮೂಡಿಸುತ್ತಾ ಕೊಲೆ, ಕೋಮು ದಳ್ಳುರಿ, ಸಾರ್ವಜನಿಕ ಆಸ್ತಿ ಪಾಸ್ತಿ ನಷ್ಟವನ್ನು ಮಾಡುತ್ತಿರುವ ಇಂತಹ ಕಾಲಘಟದಲ್ಲಿಯೇ, ಧರ್ಮ, ಕುಲ-ಗೋತ್ರಗಳ ಬದಿಗೊತ್ತಿ, ಸಹೋದರತ್ವವನ್ನು… Read More ಸಂತ ಶಿಶುನಾಳ ಷರೀಫರು

ಭಾವೈಕ್ಯತೆಯ ರಾಯಭಾರಿ ಅಬ್ದುಲ್ ಕಲಾಂ

ಈ ದೇಶ ಕಂಡ ಅತ್ಯುತ್ತಮ ರಾಷ್ಟ್ರಪತಿಗಳಲ್ಲಿ ಒಬ್ಬರಾದ ಶ್ರೀ ಅಬ್ದುಲ್ ಕಲಾಂ ಅವರ ಹೃದಯ ಶ್ರೀಮಂತಿಕೆ ಮತ್ತು ಈ ದೇಶದ ಧರ್ಮಾಚಾರಣೆಗಳಲ್ಲಿ ಅವರಿಗಿದ್ದ ಅಪರಿಮಿತ ನಂಬಿಕೆಯನ್ನು ಅವರ ಕಾಲದಲ್ಲಿ ರಾಷ್ಟ್ರಪತಿ ಭವನದ ಕಂಟ್ರೋಲರ್ ಆಗಿದ್ದ ಲೆಫ್ಟಿನೆಂಟ್ ಕರ್ನಲ್ ಅಶೋಕ್ ಕಿಣಿ ಎಚ್ ಆವರ ಅಂಗ್ಲ ಭಾಷೆಯ ಲೇಖನ ನಿಜಕ್ಕೂ ಹೃದಯವನ್ನು ತಟ್ಟಿದ ಕಾರಣ ಅದರ ಭಾವಾನುವಾವನ್ನು‌ ನಿಮ್ಮೊಂದಿಗೆ ಹಂಚಿಕೊಳ್ಳುತ್ತಿದ್ದೇನೆ. ಆಗ ತಾನೇ ಶ್ರೀ ಕಲಾಂ ಅವರು ರಾಷ್ಟ್ರಪತಿಗಳಾಗಿ ಪದವಿಯನ್ನು ಸ್ವೀಕರಿಸಿದ್ದರು. ಅವರಿಗೆ ರಾಷ್ಟ್ರಪತಿ ಭವನಕ್ಕೆ ಮೊದಲ ಬಾರಿಗೆ… Read More ಭಾವೈಕ್ಯತೆಯ ರಾಯಭಾರಿ ಅಬ್ದುಲ್ ಕಲಾಂ

ಇಬ್ರಾಹಿಂ ಸುತಾರ್

ಇತ್ತೀಚೆಗೆ ಪ್ರಪಂಚಾದ್ಯಂತ ನಡೆಯುತ್ತಿರುವ ಬಹುತೇಕ ಭಯೋತ್ಪಾದನೆಯ ಹಿಂದೆ ಧಾರ್ಮಿಕ ಕಾರಣಗಳು ಇರುವುದನ್ನು ಮನಗೊಂಡು ಭಯೋತ್ಪಾದನೆಗೆ ಮತ್ತು ಭಯೋತ್ಪಾದಕರಿಗೆ ಧರ್ಮವಿಲ್ಲ. ದೇವನೊಬ್ಬ ನಾಮ ಹಲವು ಹಾಗಾಗಿ ಎಲ್ಲರೂ ಸಹಬಾಳ್ವೆ ನಡೆಸಬೇಕೆಂದು ಓತಾನುಪ್ರೋತವಾಗಿ ಹೇಳುವುದನ್ನು ಕೇಳಿದ್ದೇವೆ. ನಿಜ ಹೇಳಬೇಕೆಂದರೆ ಅದೆಲ್ಲವೂ ಕೇವಲ ಬಾಯಿ ಚಪಲಕ್ಕೆ ಬೀಸೋ ದೊಣ್ಣೆ ತಪ್ಪಿಸಿಕೊಂಡರೆ ಸಾವಿರ ವರ್ಷ ಆಯಸ್ಸು ಎನ್ನುವಂತೆ ತಪ್ಪಿಸಿಕೊಳ್ಳಲು ಹೇಳುವ ಮಾತಾಗಿ ನಿಜ ಜೀವನದಲ್ಲಿ ಅಂತಹ ಸಾಮರಸ್ಯ ಇಲ್ಲವಾಗಿದೆ. ಆದರೆ ನಮ್ಮ ಇಂದಿನ ಕನ್ನಡ ಕಲಿಗಳು ಮಾಲಿಕೆಯ ಕಥಾ ನಾಯಕರಾದ ಶ್ರೀ ಇಬ್ರಾಹಿಂ… Read More ಇಬ್ರಾಹಿಂ ಸುತಾರ್

ಅನಂತ ಚತುರ್ದಶಿ ವ್ರತ

ಭಾದ್ರಪದ ಮಾಸದ ಶುಕ್ಲ ಪಕ್ಷದ ಹದಿನಾಲ್ಕನೇಯ ದಿನದಂದು ಭಕ್ತಿಭಾವದಂದ ಆಚರಿಸಲ್ಪಡುವ ಅನಂತ ಚತುರ್ದಶಿ ಅಥವಾ ಅನಂತನ ಹಬ್ಬದ ಪೌರಾಣಿಕ ಹಿನ್ನಲೆ, ಹಬ್ಬದ ವೈಶಿಷ್ಟತೆ ಮತ್ತು ಹಬ್ಬದ ಆಚರಣೆಯ ಸಂಪೂರ್ಣ ವಿವರ ಇದೋ ನಿಮಗಾಗಿ… Read More ಅನಂತ ಚತುರ್ದಶಿ ವ್ರತ