ಸಮಾನತೆ ಎಂದರೆ ಸ್ವೇಚ್ಚಾಚಾರವಲ್ಲ

ಬಹಳ ಹಿಂದೆ ಕರಾವಳಿ ಪ್ರದೇಶದವರು ಎಂದರೆ ಬಹಳ ಶಾಂತಿ ಪ್ರಿಯರು. ಸಂಪ್ರದಾಯ, ಸಂಸ್ಕಾರವಂತರಷ್ಟೇ ಅಲ್ಲದೇ ಸಹೃದಯಿಗಳಾಗಿ ಕುಡಿಯಲು ನೀರು ಕೇಳಿದರೂ, ನೀರಿನ ಜೊತೆ ಸಿಹಿಯಾದ ಬೆಲ್ಲದುಂಡೆಗಳನ್ನು ನೀಡುವಂತಹ ವಿಶಾಲಹೃದಯಿಗಳು. ಇವೆಲ್ಲದರ ಜೊತೆಗೆ ಓದಿನಲ್ಲಿ ಸದಾ ಕಾಲವೂ ಮುಂದಿರುವುದಲ್ಲದೇ, ಬಹಳ ಶ್ರಮದಿಂದ ಎಂತಹ ಕೆಲಸವನ್ನು ಮಾಡಬಲ್ಲವರು ಎಂದೇ ಎಂದೇ ಪ್ರಖ್ಯಾತರಾದವರು. ಆದರೆ ಇತ್ತೀಚಿನ ಕೆಲವು ತಿಂಗಳಿಂದ ಕರಾವಳಿ ಮತ್ತು ಕೇರಳದಲ್ಲಿ ನಡೆಯುತ್ತಿರುವ ಘಟನೆಗಳು ನಿಜಕ್ಕೂ ಬಹಳ ಬೇಸರವನ್ನು ತರಿಸುತ್ತಿದೆ. ಯಾವುದೋ ಮತಾಂಧರ ಮಾತುಗಳಿಗೆ ಬಲಿಯಾಗಿ ವಿದ್ಯೆಗಿಂತಲೂ ಧರ್ಮವೇ ಮುಖ್ಯ… Read More ಸಮಾನತೆ ಎಂದರೆ ಸ್ವೇಚ್ಚಾಚಾರವಲ್ಲ

ಅಆಇಈ ಯಲ್ಲೂ ಅಪಸವ್ಯವೇ?

ನಾವು ಚಿಕ್ಕವರಿದ್ದಾಗ ಸಮಾಜ ಶಾಸ್ತ್ರದಲ್ಲಿ ಭಾರತವನ್ನು ಕಂಡುಹಿಡಿದವರು ಯಾರು? ಎಂಬ ಪ್ರಶ್ನೆಗೆ 1492 ರಲ್ಲಿ ಪೋರ್ಚುಗೀಸ್ ಮೂಲದ ನಾವಿಕನಾದ ವಾಸ್ಕೋ ಡಿ ಗಾಮಾ ಪೋರ್ಚುಗಲ್‌ನ ಲಿಸ್ಬನ್‌ನಿಂದ ನೌಕಾಯಾನ ಮಾಡುತ್ತಾ ಅಟ್ಲಾಂಟಿಕ್ ಸಾಗರದ ಮೂಲಕ ಕೇಪ್ ಆಫ್ ಗುಡ್ ಹೋಪ್ ಅನ್ನು ಬಳಸಿಕೊಂಡು ಆಫ್ರಿಕಾದ ಪೂರ್ವ ಕರಾವಳಿಯ ಮಲಿಂಡಿಯಲ್ಲಿ ಕೆಲಕಾಲ ಲಂಗರು ಹಾಕಿ ಅಂತಿಮವಾಗಿ ಕೇರಳದ ಮಲಬಾರ್ ಕರಾವಳಿಯ ಕ್ಯಾಲಿಕಟ್‌ಗೆ ಬರುವ ಮೂಲಕ ಭಾರತವನ್ನು ಕಂಡು ಹಿಡಿದರು ಎಂದೇ ಹೇಳಿಕೊಡಲಾಗುತ್ತಿತ್ತು. ಹಾಗಾದರೆ ಅದಕ್ಕೂ ಮುಂಚೆ ಭಾರತದ ಅಸ್ತಿತ್ವವೇ ಇರಲಿಲ್ಲವೇ?… Read More ಅಆಇಈ ಯಲ್ಲೂ ಅಪಸವ್ಯವೇ?

ಎಲ್ಲರಂತಲ್ಲ ನನ್ನ ಮಕ್ಕಳು

ಅರೇ! ಇದೇನಿದು ಈ ರೀತಿಯ ಶೀರ್ಷಿಕೆ? ನಿಮ್ಮ ಮಕ್ಕಳು ಅದೇನು ಅಷ್ಟು ದೊಡ್ಡ ಸಾಧಕರೇ? ಎಂದು ಕೇಳಿದರೆ, ನಾನು ಯಾವುದೇ ಮುಚ್ಚುಮರೆ ಇಲ್ಲದೇ ಹೇಳುತ್ತೇನೆ. ಇಲ್ಲಾ ನನ್ನ ಮಕ್ಕಳು ಸರಾಸರಿಯವರು ಮತ್ತು ನಾನು ಸರಾಸರಿ ಮಕ್ಕಳ ತಂದೆ. ನನ್ನ ಮಕ್ಕಳು ಶಾಲೆಯ ಪರೀಕ್ಷೆಗಳಲ್ಲಿ ಅಂಕಗಳನ್ನು ಗಳಿಸುವಲ್ಲಿ ಸರಾಸರಿ. ಕ್ರೀಡೆ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಓಹೋ!! ಎಂದು ಹೇಳಿಕೊಳ್ಳುವಂತಿಲ್ಲದ ಸರಾಸರಿಯವರು. ಹಾಗಾದರೆ ಆವರ ವಿಶೇಷತೆಗಳೇನು? ಎಂದು ಕೇಳಿದರೆ ಸದ್ಯಕ್ಕೆ ಸಮಾಜದ ದೃಷ್ಟಿಯಲ್ಲಿ ಮತ್ತು ಶೈಕ್ಷಣಿಕವಾಗಿ ಅವರು ಅಂತಹದ್ದೇನನ್ನೂ ಸಾಧಿಸಿಲ್ಲ… Read More ಎಲ್ಲರಂತಲ್ಲ ನನ್ನ ಮಕ್ಕಳು

ಲೈಫ್ ಇಷ್ಟೇ ಗುರು

ಕುಟುಂಬದ ಮುಖ್ಯಸ್ಥರ ಮರಣದ ನಂತರ ಆಸ್ತಿ ಮತ್ತು ಹಣಕಾಸಿನೊಂದಿಗೆ ವ್ಯವಹರಿಸಿದ್ದವರ ಕಷ್ಟ ನಷ್ಟಗಳ ಕುರಿತಾದ ಈ ಸುದೀರ್ಘವಾದ ಲೇಖನವನ್ನು ಸ್ವಲ್ಪ ಸಮಯ ಕೊಟ್ಟು ಸಮಚಿತ್ತದಿಂದ ಓದ ಬೇಕೆಂದು ಕಳಕಳಿಯ ಮನವಿ. ಗಂಡ ಸಾಫ್ಟ್ ವೇರ್ ಇಂಜೀನಿಯರ್ ಆಗಿ ಬಹುರಾಷ್ಟ್ರೀಯ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರೆ ಅವರ ಮಡದಿ ಚಾರ್ಟಡ್ ಅಕೌಂಟೆಂಟ್ ಆಗಿದ್ದರು. ಇಬ್ಬರಿಗೂ ಕೈ ತುಂಬಾ ಕೆಲಸ ಜೋಬು ತುಂಬಿ ತುಳುಕುವಷ್ಟು ಹಣ ಇದ್ದ ಕಾರಣ ಮನೆ ಮಠ ಸಂಸಾರದ ಮಕ್ಕಳು ಮಾಡಿಕ್ಕೊಳ್ಳುವುದಕ್ಕೂ ಪುರುಸೊತ್ತು ಇಲ್ಲದಷ್ಟು ಇಬ್ಬರೂ ತಮ್ಮ… Read More ಲೈಫ್ ಇಷ್ಟೇ ಗುರು

ಕಾಲ ಹೀಗೇ  ಇರುವುದಿಲ್ಲ

ಸ್ವಲ್ಪ ದಿನಗಳಾದ ನಂತರ, ಯಾರೂ ನಮ್ಮಲ್ಲಿ ಈ ವಿಷಯಗಳ ಬಗ್ಗೆ ವಿಚಾರಿಸುವುದೇ ಇಲ್ಲಾ ನೀವು ಎಷ್ಟು ಹಣ ಸಂಪಾದಿಸಿದ್ದೀರೀ? ನಿಮ್ಮ ಬ್ಯಾಂಕ್ ಬ್ಯಾಲೆನ್ಸ್ ಎಷ್ಟು? ನಿಮ್ಮಲ್ಲಿ ಎಷ್ಟು ಮತ್ತು ಯಾವ ಕಾರುಗಳಿವೆ? ಅಂತಾ, ಅದರ ಬದಲು ಎಲ್ಲರೂ ಕೇಳುವುದು ಕೇವಲ ಎರಡೇ ಪ್ರಶ್ನೆಗಳು ನಿಮ್ಮ ಆರೋಗ್ಯ ಹೇಗಿದೆ? ನಿಮ್ಮ ಮಕ್ಕಳು ಏನು ಮಾಡ್ತಾ ಇದ್ದಾರೆ? ಹಾಗಾಗಿ ಈ ಕರೋನಾ ಲಾಕ್ ಡೊನ್ ಸಮಯದಲ್ಲಿ ಚೆನ್ನಾಗಿ ಊಟ ತಿಂಡಿ ಮಾಡಿ, ಸ್ವಲ್ಪ ವ್ಯಾಯಾಮಾನೂ ಮಾಡಿ , ಮನೆಯಿಂದ ಹೊರಗೆ… Read More ಕಾಲ ಹೀಗೇ  ಇರುವುದಿಲ್ಲ

ಈ ಶತಮಾನದ ಮಕ್ಕಳನ್ನು ರೂಪಿಸುವಲ್ಲಿ ನಾವು ಎಡವುತ್ತಿದ್ದೇವೆಯೇ?

ಕಳೆದ ವಾರಾಂತ್ಯದಲ್ಲಿ ಮನೆಗೆ ಅವಶ್ಯಕವಿದ್ದ ತರಕಾರಿಗಳನ್ನು ಕೊಳ್ಳಲು ರಸ್ತೆಯ ಬದಿಯಲ್ಲಿದ್ದ ವ್ಯಾಪಾರಿಗಳ ಬಳಿ ಹೋಗಿದ್ದೆ. ನಮಗೆ ಬೇಕಾದ ತರಕಾರಿಗಳನ್ನೆಲ್ಲಾ ಕೊಂಡು ದುಡ್ಡು ಎಷ್ಟಾಯಿತು ಎಂದೆ? ಅಲ್ಲಿ ವ್ಯಾಪಾರ ಮಾಡುತ್ತಿದ್ದ ಸುಮಾರು 18-20ರ ವಯಸ್ಸಿನ ತರುಣ ತರಕಾರಿ ಕೊಡುವಾಗ ಇದ್ದ ಚುರುಕು ಲೆಕ್ಕ ಹಾಕುವಾಗ ತಡಕಾಡತೊಡಗಿದ್ದ. ಕಡೆಗೆ ಕ್ಯಾಲುಕ್ಯುಲೇಟರ್ ಸಹಾಯದಿಂದ ಲೆಖ್ಖಾ ಹಾಕಿ ಅಂಕಲ್ 235 ಆಯ್ತು ಎಂದ. ಸರಿ ಎಂದು 500 ರೂಪಾಯಿ ಕೊಟ್ಟರೆ ಪುನಃ ಕ್ಯಾಲುಕ್ಯುಲೇಟರ್ ತೆಗೆದುಕೊಂಡು 500-235 ಲೆಖ್ಖ ಹಾಕಿ ಚಿಲ್ಲರೆ 265 ರೂಗಳನ್ನು… Read More ಈ ಶತಮಾನದ ಮಕ್ಕಳನ್ನು ರೂಪಿಸುವಲ್ಲಿ ನಾವು ಎಡವುತ್ತಿದ್ದೇವೆಯೇ?

ಆಸ್ತಿ

ಎಂಭತ್ತರ ದಶಕ. ಮಳೆಯನ್ನೇ ನಂಬಿ ಬೇಸಾಯ ಮಾಡುತ್ತಾ ಜೀವನ ಸಾಗಿಸುತ್ತಿದ್ದ  ತುಮಕೂರು ಬಳಿಯ ಬೋರೇಗೌಡರ ಕುಟುಂಬಕ್ಕೆ ನಿಜಕ್ಕೂ ಬಹಳ ಆಘಾತವಾಗಿತ್ತು. ಸತತವಾಗಿ ಎರಡು ಮೂರು ವರ್ಷಗಳು ಸರಿಯಾಗಿ ಮಳೆಯಾಗದೆ  ಅವರಿದ್ದ ಪ್ರದೇಶ ಬರಗಾಲಕ್ಕೆ ತುತ್ತಾಗಿತ್ತು.  ಹೊತ್ತು ಹೊತ್ತಿಗೆ ಎರಡು ತುತ್ತು ಊಟ ಮಾಡಲೂ ಕಷ್ಟ ಪಡುವ ಸ್ಥಿತಿ ಬಂದೊದಗಿತ್ತು. ಅಂತಹ ಪರಿಸ್ಥಿತಿಯಲ್ಲಿ ಕೆಟ್ಟು ಪಟ್ಟಣ ಸೇರು ಎನ್ನುವಂತೆ ತಮ್ಮ ಸಂಬಂಧೀಕರು ಬೆಂಗಳೂರಿನಲ್ಲಿದ್ದ ಕಾರಣ, ಅಲ್ಲಿ ಏನಾದರೂ ಕೂಲೀ ನಾಲಿ ಮಾಡಿ ಸ್ವಲ್ಪ ಸಂಪಾದಿಸಿಕೊಂಡು ಜೀವನ ಸಾಗಿಸುತ್ತಾ ಪರಿಸ್ಥಿತಿ… Read More ಆಸ್ತಿ

ಕರ್ಮ

ನಮ್ಮ ಸನಾತನ ಧರ್ಮದಲ್ಲಿ ಕರ್ಮದ ಬಗ್ಗೆ ತುಂಬಾ ನಂಬಿಕೆ ಇಟ್ಟುಕೊಂಡಿದ್ದೇವೆ. ಪೂರ್ವ ಜನ್ಮದಲ್ಲಿ ಮಾಡಿದ ಕರ್ಮಗಳ ಫಲ ಫಲವನ್ನು ಈ ಜನ್ಮದಲ್ಲಿ ನಾವು ಅನುಭವಿಸುತ್ತೇವೆ ಎಂಬ ನಂಬಿಕೆ ಇದೆ. ಆದರೆ ಈ ಕಲಿಗಾಲದಲ್ಲಿ ಅದು ಸ್ವಲ್ಪ ಬದಲಾಗಿ, ನಾವು ಮಾಡಿದ ಕರ್ಮವನ್ನು ಇಂದೇ ಡ್ರಾ, ಇಂದೇ ಬಹುಮಾನ ಎನ್ನುವ ಹಾಗೆ ಇಲ್ಲೇ ಅನುಭವಿಸುವ ಹೃದಯವಿದ್ರಾವಕ ಕಥೆಯೊಂದನ್ನು ಹೇಳಲು ಹೊರಟಿದ್ದೇನೆ. ಧಾರವಾಡದ ಪ್ರಾಣೇಶ್ ಕುಲಕರ್ಣಿಯವರು ಇದ್ದಕ್ಕಿದ್ದಂತೆಯೇ ನಡು ರಾತ್ರಿಯಲ್ಲಿ ತಮ್ಮ ಪ್ರಾಣ ಸ್ನೇಹಿತ ಗುರುರಾಜ ದೇಶಪಾಂಡೆಯವರಿಗೆ ಕರೆಮಾಡಿದರು. ಇಬ್ಬರೂ… Read More ಕರ್ಮ