ಶ್ರೀ ಪಲ್ಲಿಕೊಂಡೇಶ್ವರ, ಸುರಟಪಲ್ಲಿ

ನಮ್ಮ ಸನಾತನ ಧರ್ಮದಲ್ಲಿ ನಮಗೆ ವೇದ, ಉಪನಿಷತ್ತು, ರಾಮಾಯಣ, ಮಹಾಭಾರತ, ಭಗವದ್ಗೀತೆಗಳಂತಹ ಅಧ್ಭುತವಾದ ಪುರಾಣ ಪುಣ್ಯ ಗ್ರಂಥಗಳು ಮತ್ತು  ಕಥೆಗಳೇ ಪವಿತ್ರವಾಗಿದ್ದು ಅದರ ಆಧಾರದಲ್ಲಿ ನಮ್ಮ ಜೀವನ ಪದ್ದತಿಯನ್ನು ರೂಡಿಸಿಕೊಂಡು ಹೋಗುತ್ತಿದ್ದೇವೆ. ಆದರೆ ಕೆಲವರು ಈ ರೀತಿಯ ಪುರಾಣ ಪುಣ್ಯ ಕಥೆಗಳೆಲ್ಲವೂ  ಕೇವಲ ಕಾಲ್ಪನಿಕ ಕಥೆಯಷ್ಟೇ ಆ ರೀತಿಯ ಘಟನೆಗಳು ನಮ್ಮ ದೇಶದಲ್ಲಿ ನಡದೇ ಇಲ್ಲಾ ಎನ್ನುವ ವಿತಂಡ ವಾದವೂ ಇದೆ. ಆದರೆ  ಇಂತಹವರಿಗೆ ಸೂಕ್ತವಾದ ಉತ್ತರವನ್ನು ನೀಡಬಹುದಾದ ಮತ್ತು  ಜಗತ್ತಿನಲ್ಲಿ ಅತಿ ವಿರಳವಾಗಿ ಕಂಡು ಬರುವ… Read More ಶ್ರೀ ಪಲ್ಲಿಕೊಂಡೇಶ್ವರ, ಸುರಟಪಲ್ಲಿ

ಪ್ರಾರ್ಥನೆ

ಪ್ರಾರ್ಥನೆ ಎಂದರೆ ಏನು? ಎಂದು ಪ್ರಂಪಚದ ಯಾವುದೇ ಮೂಲೆಗೆ ಹೋಗಿ ಯಾವುದೇ ಧರ್ಮದ ಸಣ್ಣ ಮಗುವನ್ನೂ ಕೇಳಿದರೂ ಥಟ್ ಅಂತಾ ಹೇಳುವುದೇ, ಭಕ್ತಿಯಿಂದ ಎರಡೂ ಕಣ್ಗಳನ್ನು ಮುಚ್ಚಿಕೊಂಡು ಎರಡೂ ಕೈಗಳನ್ನು ನಮಸ್ಕಾರ ಸ್ಥಿತಿಯಲ್ಲಿಯೋ ಇಲ್ಲವೇ ಬೇಡುವ ಸ್ಥಿತಿಯಲ್ಲಿಯೋ ನಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆ ಭಗವಂತನಲ್ಲಿ ಕೇಳಿಕೊಳ್ಳುವುದು ಎನ್ನುತ್ತಾರೆ. ಹೌದು ನಿಜ. ಆ ಮಕ್ಕಳು ಹೇಳಿದ್ದರಲ್ಲಿ ಸತ್ಯವಿದೆಯಾದರು ಅದೇ ಸಂಪೂರ್ಣ ಸತ್ಯವಲ್ಲ. ಪ್ರಾರ್ಥನೆ ಎನ್ನುವುದು ಕೇವಲ ಸ್ವಹಿತಾಸಕ್ತಿಗಾಗಿಯೋ ಇಲ್ಲವೇ ಮತ್ತೊಬ್ಬರ ಹಿತಾಸ್ತಕ್ತಿಗಾಗಿಯೋ ಭಗವಂತನಲ್ಲಿ ಬೇಡಿಕೊಳ್ಳುವುದರ ಹೊರತಾಗಿಯೂ ಇದೆ. ಹಾಗಾಗಿ… Read More ಪ್ರಾರ್ಥನೆ

ಜಾಂಬವಂತನ ಗುಹೆ, ಪೋರ್ ಬಂದರ್

ತ್ರೇತಾಯುಗದಲ್ಲಿ ನಡೆದ ರಾಮಾಯಣ ಮತ್ತು ದ್ವಾಪರಯುಗದಲ್ಲಿ ನಡೆದ ಮಹಾಭಾರತ ಈ ಕಲಿಯುಗದಲ್ಲಿಯೂ ನಮ್ಮ ಶ್ರದ್ಧೇಯ ಮಹಾಕಾವ್ಯಗಳು . ಭಗವಾನ್ ವಿಷ್ಣುವಿನ ದಶಾವತಾರದ ಅಂಗವಾಗಿ ದುಷ್ಟರ ಶಿಕ್ಷೆಗಾಗಿ ಮತ್ತು ಶಿಷ್ಟರ ರಕ್ಷಣೆಗಾಗಿ ಮನುಷ್ಯ ರೂಪದಲ್ಲಿ ಈ ಭೂಮಿಯ ಮೇಲೆ ಅವತಾರವೆತ್ತಿದ್ದ ಪ್ರಭು ಶ್ರೀ ರಾಮ ಮತ್ತು ಶ್ರೀ ಕೃಷ್ಣನನ್ನು ಇಂದಿಗೂ ನಾವು ದೇವರಂತೆ ಪೂಜಿಸುತ್ತೇವೆ. ಆದರೆ ಕೆಲವು ಸ್ವಘೋಷಿತ ಬುದ್ಧಿ ಜೀವಿಗಳು ಮತ್ತು ಹಿಂದೂ ವಿರೋಧಿ ಶಕ್ತಿಗಳು ರಾಮಾಯಣ ಮತ್ತು ಮಹಾಭಾರತ ಎನ್ನುವುದು ನಡೆದೇ ಇಲ್ಲ. ಅದೊಂದು ಕಾಲ್ಪನಿಕ… Read More ಜಾಂಬವಂತನ ಗುಹೆ, ಪೋರ್ ಬಂದರ್

ಆಟ ಇನ್ನೂ ಬಾಕೀ ಇದೆ.

ನೆನ್ನೆಯ ದಿನ ವೀಕೆಂಡ್ ಕರ್ಘ್ಯೂ ಇದ್ದ ಕಾರಣ ಸಾವಯವ ಸಂತೆಯನ್ನು ಬಂದ್, Online ಮುಖಾಂತರವೇ ಸಾಂಘೀಕ್ಕಿನಲ್ಲಿ ಭಾಗವಹಿಸಿ, ಆತ್ಮೀಯರ ಮಗನ ಮದುವೆಯಲ್ಲೂ Online ಮುಖಾಂತರ ಆಶೀರ್ವದಿಸಿ, ಮನೆಯ ಗೇಟಿನ ಹೊರಗೂ ಹೋಗದೇ ಪಟ್ಟಾಗಿ ಮನೆಯಲ್ಲಿಯೇ ಇರಲು ನಿರ್ಧರಿಸಿದ್ದೆ. ಸಮಯೋಚಿತವಾಗಿೆ ಚೆನ್ನಾಗಿ ಜೀರಿಗೆ, ಕಾಳುಮೆಣಸು, ಶುಂಠಿ ಮತ್ತು ಮನೆಯಲ್ಲೇ ಕಡೆದು ತೆಗೆದ ಬೆಣ್ಣೆಯ ತುಪ್ಪ ಹಾಕಿ ಮಾಡಿದ್ದ ನವಣೆ ಹುಗ್ಗಿ(ಪೊಂಗಲ್) ಜೊತೆಗೆ ಕಾಯಿ, ಕೊತ್ತಂಬರಿ ಮತ್ತು ಪುದಿನಾ ಹಾಕಿದ ಚೆಟ್ಟಿ ತಿಂದು ಸ್ವರ್ಗಕ್ಕೆ ಮೂರೇ ಗೇಣು ಎನ್ನುವಂತೆ ಅನಂದಿಸಿ… Read More ಆಟ ಇನ್ನೂ ಬಾಕೀ ಇದೆ.

ಶ್ರೀರಾಮ ಜನ್ಮ ಭೂಮಿ ತೀರ್ಥಕ್ಷೇತ್ರ ಅಭಿಯಾನ

ನಾವೆಲ್ಲರೂ ಕೇಳಿ, ಓದಿ, ನೋಡಿ ತಿಳಿದಿರುವಂತೆ ಅಯೊಧ್ಯೆ ಪ್ರಭು ಶ್ರೀರಾಮ ಚಂದ್ರನ ಜನ್ಮಸ್ಥಳ. ಆತ ತನ್ನ ಆದರ್ಶಗಳಿಂದಾಗ ಮರ್ಯಾದಾ ಪುರುಶೋತ್ತಮ ಎನಿಸಿಕೊಂಡಿದ್ದಲ್ಲದೇ, ಸಕಲ ಹಿಂದೂಗಳ ಆರಾಧ್ಯ ದೈವವಾಗಿ ಪ್ರತಿನಿತ್ಯವೂ ಪ್ರಪಂಚಾದ್ಯಂತ ಕೋಟ್ಯಾಂತರ ಮನ ಮತ್ತು ಮನೆಗಳಲ್ಲಿ ಪೂಜೆಗೆ ಪಾತ್ರರಾಗುತ್ತಿದ್ದಾನೆ. ವಾಲ್ಮೀಕಿ ವಿರಚಿತ ರಾಮಯಣ ಪ್ರಪಂಚದ ಅತ್ಯಂತ ಪುರಾತನ ಗ್ರಂಥವಾಗಿದ್ದು ಇಂದಿಗೂ ಅನೇಕ ಮುಸ್ಲಿಂ ರಾಷ್ಟ್ರಗಳೂ ಸೇರಿದಂತೆ ಪ್ರಪಂಚಾದ್ಯಂತ ಹಲವಾರು ದೇಶಗಳಲ್ಲಿ ಪ್ರಭು ಶ್ರೀರಾಮ ಆಡಳಿತಾತ್ಮಕವಾಗಿ ಆದರ್ಶ ಪುರುಷನಾಗಿ ಆರಾಧಿಸುತ್ತಾರೆ. ಇಂತಹ ಪ್ರಭು ಶ್ರೀರಾಮನ ಮಂದಿರ ಕೆಲವು ಮತಾಂಧರ… Read More ಶ್ರೀರಾಮ ಜನ್ಮ ಭೂಮಿ ತೀರ್ಥಕ್ಷೇತ್ರ ಅಭಿಯಾನ

ಅಂಜನಾದ್ರಿ ಮತ್ತು ಕಿಷ್ಕಿಂದ ಪರ್ವತ

ಜಯ ಹನುಮಾನ್ ಜ್ಞಾನ ಗುಣ ಸಾಗರ! ಜಯ ಕಪೀಶ ತಿಹುಮ್ ಲೋಕ ಉಜಾಗರ! ರಾಮ ದೂತ ಅತುಲಿತ ಬಲ ಧಾಮ! ಅಂಜನೀ ಪುತ್ರ ಪವನ ಸುತ ನಾಮ! ರಾಮಾಯಣದಲ್ಲಿ ರಾಮ, ಸೀತೆ ಮತ್ತು ಲಕ್ಷ್ಮಣರ ನಂತರ ಅತ್ಯಂತ ಜನಪ್ರಿಯನಾಗಿರುವವನೇ ರಾಮನ ಭಂಟ ಆಂಜನೇಯ. ಮಾಯಾಜಿಂಕೆಯ ಜಾಲದಲ್ಲಿ ಮುಳುಗಿಸಿ ಸೀತಾಮಾತೆಯನ್ನು ಯಾರು ಅಪಹರಿಸಿಕೊಂಡು ಹೋಗಿರಬಹುದು ಎಂದು ವೈದೇಹೀ ಎನಾದಳೋ ಲಕ್ಷ್ಮಣಾ, ನನ್ನ ಸೀತೆಯನ್ನು ನೀವು ನೋಡಿದ್ದೀರಾ? ನೀವು ನೋಡಿದ್ದೀರಾ? ಎಂದು ಗಿಡ ಮರ ಬಳ್ಳಿಗಳನ್ನು, ಪ್ರಾಣಿ ಪಶು ಪಕ್ಷಿಗಳನ್ನು,… Read More ಅಂಜನಾದ್ರಿ ಮತ್ತು ಕಿಷ್ಕಿಂದ ಪರ್ವತ

ನಂಬಿಕೆ

ಇಂದಿನ ನಮ್ಮ ಬಹುತೇಕ ಯುವ ಜನಾಂಗವನ್ನು ಕರೆದು, ಈ ಕಾರ್ಯವನ್ನು ನಿಮ್ಮಿಂದ ಸಾಧಿಸಲು ಸಾಧ್ಯವೇ ? ಎಂದು ಒಂದು ಸಾಮಾನ್ಯ ಕೆಲಸವನ್ನು ತೋರಿಸಿದರೂ, ಅವರಿಂದ ಮೊದಲು ಬರುವ ಉತ್ತರವೇ ಇಲ್ಲಾ. ಇದು ಸಾಧ್ಯವಿಲ್ಲ. ಅದು ಏಕೆ ಸಾಧ್ಯವಿಲ್ಲಾ ಎಂದು ನಾವು ಕೇಳುವುದಕ್ಕೆ ಮುಂಚೆಯೇ, ಅದಕ್ಕೆ ನಾನಾ ರೀತಿಯ ಕಾರಣಗಳನ್ನು ನೀಡಲು ಆರಂಭಿಸುತ್ತಾರೆ. ಅರೇ ಅದೇಕೆ ಸಾಧ್ಯವಿಲ್ಲಾ? ನೀವು ಹೀಗೆ ಮಾಡಿದರೆ ಖಂಡಿತವಾಗಿಯೂ ನಿಮ್ಮ ಕೆಲಸ ಕಾರ್ಯಸಾಧುವಾಗುತ್ತದೆ ಎಂದು ತಿಳಿಸಿದಾಗ ಹಾಂ!! ಹೌದು. ನಿಜ. ನೀವು ಹೇಳಿದ ಹಾಗೆ… Read More ನಂಬಿಕೆ

ಶ್ರೀ ರಾಮ ನವಮಿ

ಸಮಸ್ತ ಹಿಂದೂಗಳ ಹೃದಯ ಸಾಮ್ರಾಟ, ಮರ್ಯಾದ ಪುರುಶೋತ್ತಮ, ದಶರಥ ಪುತ್ರ, ಶ್ರೀ ರಾಮಚಂದ್ರ ಪ್ರಭು ಚೈತ್ರ ಮಾಸದ ಶುಕ್ಲ ಪಕ್ಷದ ನವಮಿಯಂದು ತ್ರೇತಾಯುಗದಲ್ಲಿ ಸರಯೂ ನದಿ ತಟದ ಅಯೋಧ್ಯೆಯಲ್ಲಿ ಜನಿಸಿದ ದಿನ. ಈ ದಿನವನ್ನು ದೇಶಾದ್ಯಂತ ಭಕ್ತಿಭಾವದಿಂದ, ಶ್ರಧ್ಧಾ ಪೂರ್ವಕವಾಗಿ ಬಹಳ ಸಂಭ್ರಮದಿಂದ ಹಬ್ಬವಾಗಿ ಆಚರಿಸುತ್ತಾರೆ. ಕರ್ನಾಟಕದ ಬಹಳಷ್ಟು ಮನೆಗಳಲ್ಲಿ ಚೈತ್ರ ಮಾಸದ ಶುಕ್ಲ ಪಕ್ಷದ ಪಾಡ್ಯ ಅಂದರೆ ಯುಗಾದಿ ದಿನದಿಂದ ಮುಂದಿನ ಒಂಭತ್ತು ದಿನ ಅಂದರೆ ನವಮಿ, ರಾಮ ನವಮಿಯವರೆಗೆ ಪ್ರತೀ ದಿನ ರಾಮಾಯಣ ಪಾರಾಯಣ… Read More ಶ್ರೀ ರಾಮ ನವಮಿ

ರಾಮ ಹೆಚ್ಚೋ, ರಾವಣ ಹೆಚ್ಚೋ‌

ಎರಡನೆಯ ಮಗುವಿನ‌ ನಿರೀಕ್ಷೆಯಲ್ಲಿದ್ದ ಒಬ್ಬ ತಾಯಿ ತನ್ನ ಎಂಟು ವರ್ಷದ ಮಗಳನ್ನು ರಾತ್ರಿ ಮೆಲ್ಲಗೆ ತಲೆ ಸವರುತ್ತಾ ಹಾಸಿಗೆಯ ಮೇಲೆ ಮಲಗಿಸುತ್ತಾ ಕುತೂಹಲದಿಂದ ಮಗಳನ್ನು ಕೇಳುತ್ತಾಳೆ. ಪುಟ್ಟೀ ನಿನಗೆ ತಮ್ಮ ಪಾಪು ಬೇಕಾ, ಇಲ್ಲವೇ ತಂಗಿ ಪಾಪು ಬೇಕಾ ಎಂದು. ತಾಯಿ ಕೇಳಿದ ಪ್ರಶ್ನೆಗೆ ಮಗಳು ಅಷ್ಟೇ ಮುಗ್ಧವಾಗಿ ನನಗೆ ತಂಗಿ ಪಾಪು ಬೇಡ ತಮ್ಮ ಪಾಪು ಬೇಕು ಅಂತ ಹೇಳುತ್ತಾಳೆ. ಪಾಪ ಮುಗ್ಧ ಮಗುವಿಗೆ ಏನೂ ತಿಳಿಯದು ‌ಎಂದು ಭಾವಿಸಿದ ತಾಯಿ ಮಾತು ಮುಂದುವರೆಸುತ್ತಾ, ಅಲ್ಲಾ… Read More ರಾಮ ಹೆಚ್ಚೋ, ರಾವಣ ಹೆಚ್ಚೋ‌