ಮದುವೆಯ ಈ ಬಂಧ ಅನುರಾಗದ ಅನುಬಂಧ

ಮದುವೆ ಎನ್ನುವುದು ಕೇವಲ ಗಂಡು ಹೆಣ್ಣಿನ ಒಗ್ಗೂಡಿಸುವಿಕೆಯಲ್ಲದೇ ಅದು ಆ ಎರಡು ಕುಟುಂಬಗಳ ನಡುವೆ ಸಂಬಂಧವನ್ನು ಬೆಸೆಯುವುದಲ್ಲದೇ ಆ ಎರಡೂ ಕುಟುಂಬಗಳ ಮುಂದಿನ ಗುಣ ನಡುವಳಿಕೆಗಳನ್ನು ಮುಂದಿನ ತಲಮಾರಿಗೂ ಮುಂದುವರೆಸಿಕೊಂಡು ಹೋಗುವ ಸುಂದರವಾದ ಸಂದರ್ಭವಾಗಿದೆ. ಮದುವೆ ಎನ್ನುವುದು ಉಚ್ಚರಿಸಲು ಕೇವಲ ಮೂರೇ ಅಕ್ಷರಗಳಾದರೂ ಅದರ ಹಿಂದಿರುವ ಕಷ್ಟವನ್ನು ಅರಿತೇ ಮದುವೇ ಮಾಡಿ ನೋಡು, ಮನೆ ಕಟ್ಟಿ ನೋಡು ಎಂಬುವ ಗಾದೆಯನ್ನೇ ನಮ್ಮ ಹಿರಿಯರು ಮಾಡಿದ್ದಾರೆ. ಸುಮಾರು 53ವರ್ಷಗಳ ಹಿಂದೇ ಇದೇ ದಿನ ಎಲ್ಲಾ ಎಡರು ತೊಡರುಗಳನ್ನೂ ಮೀರಿ… Read More ಮದುವೆಯ ಈ ಬಂಧ ಅನುರಾಗದ ಅನುಬಂಧ

ಉಮಾ

ಆಗಷ್ಟೇ ದೇಶಕ್ಕೆ ಸ್ವಾತಂತ್ರ್ಯ ಬಂದಾಗಿತ್ತು. ಕೆ.ಜಿ.ಎಫ್ ನಲ್ಲಿದ್ದ  ಅಂದಿನ ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾಗಿದ್ದ ರಾಜಾರಾವ್ ಅವರ ಮನೆಯಲ್ಲಿ ಸಂಭ್ರಮವೋ ಸಂಭ್ರಮ. ಸತವಾಗಿ ಏಳು ಗಂಡು ಮಕ್ಕಳ (ಅರು ಮಕ್ಕಳು ಹುಟ್ಟಿದ ಕೆಲವೇ ತಿಂಗಳುಗಳಲ್ಲಿ ಅಳಿದು ಹೋಗಿದ್ದವು) ನಂತರ ಅವರ  ಮನೆಯಲ್ಲಿ ಮೊತ್ತ ಮೊದಲಬಾರಿಗೆ  ಮಹಾಲಕ್ಷ್ಮಿಯ ಜನನವಾಗಿತ್ತು.  ರಾಯರ ಮನೆ ದೇವರು ಮೇಲುಕೋಟೆ ಯೋಗಾನರಸಿಂಹನಾಗಿದ್ದ ಕಾರಣ,  ಅವರಿಗೆ ತಮ್ಮ ಮಗಳ ಹೆಸರು  ಲಕ್ಷ್ಮಿಯ ಹೆಸರಿಡಬೇಕು ಎಂದಿತ್ತು. ಆದರೆ ಅವರ ಮಡದಿ ವಿಶಾಲಾಕ್ಷಿ ಅವರ ತಾಯಿಯವರು ತಮ್ಮ ಮನೆ ದೇವರು … Read More ಉಮಾ

ಜನ್ಮ ರಹಸ್ಯ

ಅದು 1970ನೇ ಇಸವಿ ಅಕ್ಟೋಬರ್ ಮಾಸದ ಮೊದಲ ವಾರ. ಆಗ ತಾನೇ ಬಾದ್ರಪದ ಹಬ್ಬಗಳು ಕಳೆದು ಪಕ್ಷಮಾಸವೂ ಮುಗಿದು ಆಶ್ವಿಯಜಮಾಸ ಶುರುವಾಗುತ್ತಿತ್ತು. ನವರಾತ್ರಿಯ ಹಬ್ಬಕ್ಕೆ ಮನೆಯಲ್ಲಿ ಗೊಂಬೆಗಳನ್ನು ಕೂರಿಸಲು ಸಕಲ ಸಿದ್ಧತೆಗಳು ನಡೆಯುತ್ತಿತ್ತು. ಚೊಚ್ಚಲು ಬಾಣಂತನಕ್ಕೆ ಬಂದಿದ್ದ ಹಿರಿಯ ಮಗಳು ಆದರೆ ಇದ್ದಕ್ಕಿದ್ದಂತೆಯೆ ಹೊಟ್ಟೆ ನೋವು ಎಂದು ಹೇಳಿದಾಗ, ತಾಯಿ ಗರ್ಭಿಣಿ ಹೆಂಗಸರಿಗೆ ಈ ರೀತಿಯ ನೋವುಗಳೆಲ್ಲಾ ಸಹಜ ಎಂದು ಬಿಸಿ ನೀರು ಮತ್ತು ಮನೆಯ ಮದ್ದನ್ನು ನೀಡಿದರೂ ನೋವು ಕಡಿಮೆಯಾಗದಿದ್ದಾಗ ಆಸ್ಪತ್ರೆಗೆ ಕರೆದುಕೊಂಡು ಹೋಗಲು ನಿರ್ಧರಿದರು.… Read More ಜನ್ಮ ರಹಸ್ಯ

ಭಗವಂತ  ನಮ್ಮಿಂದ ಎಷ್ಟು ದೂರವಿದ್ದಾನೆ?

ಅದೊಂದು ಹೆಸರಾಂತ ಗುರುಕುಲ ಬಹಳಷ್ಟು ವಿದ್ಯಾರ್ಥಿಗಳು ಆ ಗುರುಗಳ ಬಳಿ ಹಲವಾರು ವಿಷಯಗಳ ಬಗ್ಗೆ ಅಧ್ಯಯನ ಮಾಡುತ್ತಿದ್ದರು. ಒಮ್ಮೆ ಗುರುಗಳಿಗೆ ತಮ್ಮ ಶಿಷ್ಯಂದಿರನ್ನು ಪರೀಕ್ಷಿಸುವ ಮನಸಾಗಿ, ಎಲ್ಲರನ್ನೂ ಒಟ್ಟುಗೂಡಿಸಿ ನಮಗೂ ಮತ್ತು ಭಗವಂತನಿಗೂ ಇರುವ ಅಂತರವೆಷ್ಟು? ಎಂಬ ಸರಳ ಪ್ರಶ್ನೆಯನ್ನು ಕೇಳಿದರು. ಗುರುಗಳ ಈ ಸರಳ ಪ್ರಶ್ನೆಗೆ ಬಹಳವಾಗಿ ತಲೆಕೆಡಿಸಿಕೊಂಡ ಶಿಷ್ಯಂದಿರು, ಒಬ್ಬ ಭೂಮಿ ಆಕಾಶದಷ್ಟು ದೂರವೆಂದರೆ ಮತ್ತೊಬ್ಬ, ಭೂಮಿ ಪಾತಾಳದಷ್ಟು ದೂರ ಗುರುಗಳೇ ಎಂದ ಹೀಗೆ ಒಬ್ಬಬ್ಬೊರು ಒಂದೊಂದು ರೀತಿಯಾಗಿ ಉತ್ತರಿಸಿದಾಗ ಸಮಾಧಾನರಾಗದ ಗುರುಗಳು. ಆ… Read More ಭಗವಂತ  ನಮ್ಮಿಂದ ಎಷ್ಟು ದೂರವಿದ್ದಾನೆ?