ರಾವ್‌ ಬಹಾದ್ದೂರ್‌ ಧರ್ಮ ಪ್ರವರ್ತಕ ಗುಬ್ಬಿ ತೋಟದಪ್ಪ

ಕಾಸಿದ್ದರೆ ಕೈಲಾಸ, ದುಡ್ಡೇ ದೊಡ್ಡಪ್ಪ ಎನ್ನುವ ಇಂತಹ ಕಾಲದಲ್ಲೂ ಬಡ ವಿದ್ಯಾರ್ಥಿಗಳಿಗೆ ಮತ್ತು ಪ್ರಯಾಣಿಕರಿಗೆ ತೊಂದರೆ ಆಗದಿರಲಿಂದು ದೂರದೃಷ್ಟಿಯಿಂದ ಸುಮಾರು 120 ವರ್ಷಗಳ ಹಿಂದೆಯೇ ಸಮಾಜಕ್ಕಾಗಿ ತಮ್ಮ ಇಡೀ ಸಂಪತ್ತನ್ನು ಧಾರೆ ಎರೆದಿದ್ದಂತಹ ರಾವ್‌ ಬಹಾದ್ದೂರ್‌ ಧರ್ಮ ಪ್ರವರ್ತಕ ಗುಬ್ಬಿ ತೋಟದಪ್ಪನವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಮಾಜ ಸೇವೆಗಳನ್ನು ನಮ್ಮ ಇಂದಿನ ಕನ್ನಡದ ಕಲಿಗಳು ಮಾಲಿಕೆಯಲ್ಲಿ ತಿಳಿಯೋಣ… Read More ರಾವ್‌ ಬಹಾದ್ದೂರ್‌ ಧರ್ಮ ಪ್ರವರ್ತಕ ಗುಬ್ಬಿ ತೋಟದಪ್ಪ

ಡಾ.ಕೇಶವ ಬಲಿರಾಮ ಹೆಡಗೇವಾರ್ (ಡಾಕ್ಟರ್ ಜೀ)

ಈ ದೇಶಕ್ಕಾಗಿ ಅಪಾರವಾಗಿ ಕೊಡುಗೆಯನ್ನು ನೀಡಿದ್ದರೂ, ಕೆಲವು ಪಟ್ಟಭದ್ರ ಹಿತಾಸಕ್ತಿಯ ಸುಳ್ಳು ಆರೋಪಗಳಿಂದ ಅವರಿಗೆ ನಿಜವಾಗಿಯೂ ಸಲ್ಲಬೇಕಾಗದ ಗೌರವಗಳಿಂದ ವಂಚಿತರಾಗಿರುವ ಸ್ವಾತಂತ್ರ್ಯ ಹೋರಾಟಗಾರರಾದ ವೀರ ಸಾವರ್ಕರ್, ಸುಭಾಷ್ ಚಂದ್ರ ಬೋಸ್, ಅಂಬೇಡ್ಕರ್ ಮುಂತಾದವರ ಅನೇಕರ ಪಟ್ಟಿಯಲ್ಲಿ ಡಾ.ಕೇಶವ ಬಲಿರಾಮ ಹೆಡಗೇವಾರ್ ಎಲ್ಲರ ಪ್ರೀತಿಯ ಡಾಕ್ಟರ್ ಜೀ ಅವರೂ ಸೇರುತ್ತಾರೆ ಎಂದರೆ ಅತಿಶಯೋಕ್ತಿಯಾಗಲಾರದು. ಈ ದೇಶದ ಬಗ್ಗೆ ಅವರಿಗಿದ್ದ ದೂರದೃಷ್ಟಿಯಿಂದಾಗಿ ಅವರು ಕಟ್ಟಿದ ಸಂಸ್ಥೆ ಅವರ ನಿಧನವಾಗಿ 8 ದಶಕಗಳ ನಂತರವೂ ಅವರ ಆದರ್ಶಗಳನ್ನು ಮುಂದುವರೆಸಿಕೊಂಡು 2025 ರಲ್ಲಿ… Read More ಡಾ.ಕೇಶವ ಬಲಿರಾಮ ಹೆಡಗೇವಾರ್ (ಡಾಕ್ಟರ್ ಜೀ)

ಮೂರ್ತಿ ಪೂಜೆ

ರಸ್ತೇ ಅಗಲೀಕರಣದ ನೆಪದಲ್ಲಿ ಸುಪ್ರೀಂ ಕೋರ್ಟಿನ ಆದೇಶದ ಮೇರೆಗೆ ಕಳೆದ ವಾರ ನಂಜನಗೂಡಿನ ಬಳಿ 800 ವರ್ಷದ ಹಳೆಯದಾದ ಚೋಳರ ಕಾಲದ  ದೇವಾಲಯವನ್ನು ಒಡೆದು ಹಾಕಿರುವ ವಿಷಯ ಇನ್ನೂ ಆರದಿರುವಾಗ ಅದೇ ಪ್ರಾಂತ್ಯದ ಚಾಮರಾಜನಗರದ ಬಿಳಿಗಿರಿರಂಗನಬೆಟ್ಟದ ಬಿಳಿಗಿರಿ ರಂಗನಾಥಸ್ವಾಮಿ ದೇವಾಲಯದಲ್ಲಿ ಹಾಕಲಾಗಿದ್ದ ಮೈಸೂರು ಮಹಾರಾಜರ ಫೋಟೋಗಳನ್ನು ತೆರವು ಮಾಡುವ ಎಡವಟ್ಟೊಂದನ್ನು ಮಾಡುವ ಮೂಲಕ  ಆಸ್ತಿಕ ಮಹಾಶಯರ ಸಾತ್ವಿಕ ಕೋಪ ಹೆಚ್ಚುವಂತಾಗಿದೆ. ನಮ್ಮ ರಾಜ್ಯದ ಹಲವಾರು ದೇವಾಲಯಗಳಿಗೆ ನಮ್ಮ ಮೈಸೂರು ಅರಸರ ಕೊಡುಗೆ ಅಪಾರ ಎನ್ನುವುದು ನಿರ್ವಿವಾದ. ಅದರಲ್ಲೂ… Read More ಮೂರ್ತಿ ಪೂಜೆ

ವಿವೇಕಾನಂದ ಕೇಂದ್ರ, ಕನ್ಯಾಕುಮಾರಿ

ಭಾರತ ಎಂದರೆ ಹಾವಾಡಿಗರ ದೇಶ, ಹಿಂದೂಗಳು ಎಂದರೆ ಮೂಢ ನಂಬಿಕೆಯ ಜನರು ಎಂದು ಇಡೀ ಜಗತ್ತೇ ಮೂದಲಿಸುತ್ತಿದ್ದಾಗ ವಿಶ್ವ ಧರ್ಮಗಳ ಸಂಸತ್ತು 11 ಸೆಪ್ಟೆಂಬರ್ 1893 ರಂದು ಚಿಕಾಗೋದಲ್ಲಿ ಐತಿಹಾಸಿಕ ದಿಕ್ಸೂಚಿ ಭಾಷಣವನ್ನು ಮಾಡಿ ಜಗತ್ತೇ ಭಾರತ ಮತ್ತು ಹಿಂದೂ ಧರ್ಮದತ್ತ ಬೆಚ್ಚಿ ಬೀಳುವಂತೆ ಮಾಡುವ ಮುನ್ನಾ ದೇಶಾದ್ಯಂತ ಪರಿವಾಜ್ರಕರಾಗಿ ಪರ್ಯಟನೆ ಮಾಡುತ್ತಿದ್ದಂತಹ ಸಮಯದಲ್ಲಿ, 24 ಡಿಸೆಂಬರ್ 1892 ರಂದು ಸ್ವಾಮೀ ವಿವೇಕಾನಂದರು ಕನ್ಯಾಕುಮಾರಿಯನ್ನು ತಲುಪಿದ್ದರು. ಸಮುದ್ರದ ದಂಡೆಯಲ್ಲೇ ಇರುವ ದೇವಿಯ ದರ್ಶನ ಪಡೆದು ಹಿಂದೂಮಹಾಸಾಗರ, ಅರಬ್ಬೀ… Read More ವಿವೇಕಾನಂದ ಕೇಂದ್ರ, ಕನ್ಯಾಕುಮಾರಿ

ಕ್ರಿಕೆಟ್ ಆಟಗಾರರಾಗಿ ಸ್ವಾಮಿ ವಿವೇಕಾನಂದ

ಲೇಖನದ ಶೀರ್ಷಿಕೆ ನೋಡಿ ಶಾಕ್ ಆಯ್ತಾ? ಆಗಿರ್ಲೇ ಬೇಕು. ನನಗೂ ಇದರ ಬಗ್ಗೆ ತಿಳಿದುಕೊಂಡಾಗ ಇದೇ ರೀತಿ ಶಾಕ್ ಆದೆ. ನಮಗೆಲ್ಲ ತಿಳಿದಿರುವಂತೆ ಸ್ವಾಮೀ ವಿವೇಕಾನಂದರ ಆಧ್ಯಾತ್ಮದ ಗುರುಗಳು. ಇಡೀ ಜಗತ್ತಿನವರಿಗೆ ಹಿಂದೂ ಧರ್ಮದವ ಬಗ್ಗೆ ಇದ್ದ ತಾತ್ಸಾರವನ್ನು ಹೋಗಲಾಡಿಸಿ ಅವರ ಮನದಲ್ಲಿ ಹಿಂದೂ ಧರ್ಮದ ಬಗ್ಗೆ ಪೂಜ್ಯ ಭಾವನೆ ಮೂಡಿಸುವುದರಲ್ಲಿ ಶ್ರಮಿಸಿದ ಅಗ್ರಗಣ್ಯರು. ಆದರೆ ಈ ಶೀರ್ಷಿಕೆಯಲ್ಲಿ ಕ್ರಿಕೆಟ್ ಆಟ ಅಂತಾ ಇದೇ? ಎಲ್ಲಿಯ ಬೆಟ್ಟದ ನೆಲ್ಲಿಕಾಯಿ? ಎಲ್ಲಿಯ ಸಮುದ್ರ ಉಪ್ಪು? ಎಲ್ಲಿಂದ ಎಲ್ಲಿಗೆ ಸಂಬಂಧ… Read More ಕ್ರಿಕೆಟ್ ಆಟಗಾರರಾಗಿ ಸ್ವಾಮಿ ವಿವೇಕಾನಂದ

ರಾಷ್ಟ್ರೀಯ ಯುವ‌ದಿನ

ಇಂದು ಜನವರಿ 12ನೇ ತಾರೀಖು ಇಡೀ ವಿಶ್ವದ ಯುವ ಜನತೆಗೆ ಒಂದು ವಿಶೇಷ ದಿನ. ಏಳಿ ಎದ್ದೇಳಿ ಗುರಿ ಮುಟ್ಟದವರೆಗೂ ನಿಲ್ಲದಿರಿ ಎಂದು ವಿಶ್ವದ ಯುವಜನತೆಯನ್ನು ಬಡಿದೆಬ್ಬಿಸಿದ ಮಹಾನ್ ಚೇತನ ಸ್ವಾಮಿ ವಿವೇಕಾನಂದರ ಜಯಂತಿ. ಸುಮಾರು160 ವರ್ಷಗಳ ಹಿಂದೆ ಕಲ್ಕತ್ತಾ ನಗರದಲ್ಲಿ ಜನವರಿ 12 1863ರ ಸಂಕ್ರಾಂತಿ ದಿನದಂದು ಶ್ರೀ ವಿಶ್ವನಾಥ ದತ್ತ ಮತ್ತು ಭುವನೇಶ್ವರಿದೇವಿ ದಂಪತಿಗಳ ಗರ್ಭದಲ್ಲಿ ಜನಿಸಿದ ನರೇಂದ್ರ ಮುಂದೆ ಸ್ವಾಮಿ ರಾಮಕೃಷ್ಣ ಪರಮಹಂಸರ ಪರಮ ಶಿಷ್ಯನಾಗಿ ಸನ್ಯಾಸತ್ವದ ದೀಕ್ಷೆ ಪಡೆದು ಸ್ವಾಮಿ ವಿವೇಕಾನಂದರಾದರು.… Read More ರಾಷ್ಟ್ರೀಯ ಯುವ‌ದಿನ

ಸ್ವಾಮಿ ವಿವೇಕಾನಂದರ ದಿಗ್ವಿಜಯ

ಜನವರಿ 12 ಸ್ವಾಮಿ ವಿವೇಕಾನಂದರ ಜಯಂತಿ. 1893, ಸೆಪ್ಟಂಬರ್ 11ಕ್ಕೆ ಅಮೇರಿಕಾದ ಚಿಕಾಗೋದಲ್ಲಿ ಅವರು ಮಾಡಿದ ದಿಕ್ಸೂಚಿ ಭಾಷಣ. ಈ ಎರಡೂ ಸಂಧರ್ಭಗಳನ್ನು ನೆನಪಿಸಿಕೊಳ್ಳುವ ಸಲುವಾಗಿಯೇ ಸ್ವಾಮಿ ವಿವೇಕಾನಂದರ ದಿಗ್ವಿಜಯ ಎಂಬೀ ಲೇಖನ. ಕ್ರಿ.ಶ. 1893 ಕ್ಕೆ ಸುಮಾರು ನಾಲ್ಕು ನೂರು ವರ್ಷಗಳ ಹಿಂದೆ ಅಂದರೆ ಕ್ರಿ.ಶ. 1492 ಕ್ಕೆ ಭಾರತಕ್ಕೆ ಬರಲು ಹವಣಿಸಿ ಹಡಗನ್ನೇರಿ ಹೊರಟಿದ್ದ ನಾವಿಕ ಕ್ರಿಸ್ಟೋಫರ್ ಕೋಲಂಬಸ್ ನೌಕೆ ದಿಕ್ಕು ತಪ್ಪಿ ಅಮೇರಿಕಾಕ್ಕೆ ತಲುಪಿ ಅಲ್ಲಿನ ಜನರನ್ನೇ ಅವನು ಭಾರತೀಯರೆಂದು ತಿಳಿದು ಆವರನ್ನೇ… Read More ಸ್ವಾಮಿ ವಿವೇಕಾನಂದರ ದಿಗ್ವಿಜಯ