ನಂಬಿಕೆ, ವಿಶ್ವಾಸ ಮತ್ತು ಪ್ರೇರಣೆ

ಈ ಚಿತ್ರವನ್ನು ನೋಡುತ್ತಿದ್ದಂತೆಯೇ, ನಮ್ಮ ಮನಸ್ಸಿಗೆ ಹೊಳೆಯುವುದು,  ಅರೇ ಇದೇನಿದು? ಈ ಸಣಕಲ ದೇಹದ  ಮಾವುತನು  ಅಷ್ಟು  ದೊಡ್ಡ ಆನೆಯನ್ನು ಟ್ರಕ್ಕಿನೊಳಗೆ ದೂಡುತ್ತಿದ್ದಾನಾ? ಎಂದು  ಹುಬ್ಬನ್ನು ಹಾರಿಸತ್ತೇವೆ. ಆದರೆ ನಿಜ ಹೇಳಬೇಕೆಂದರೆ, ಅಲ್ಲಿ  ಮಾವುತನ ಕೈ ಆಸರೆ ಕೇವಲ ನಿಮಿತ್ತ ಮಾತ್ರವಾಗಿದ್ದು ಆನೆಯ ತನ್ನ ಬಲದಿಂದ ಟ್ರಕ್ಕನ್ನು ಹತ್ತುತ್ತಿರುತ್ತದೆ.  ಆನೆಗೆ ತನ್ನ ಸ್ವಸ್ವಾಮರ್ಥ್ಯದ ಮೇಲೆ ನಂಬಿಕೆ ಇರದ ಕಾರಣ, ಮಾವುತನ ಕೈ ತನ್ನ ಬೆನ್ನಿನ ಮೇಲೆಿ ಕೈ ಇಟ್ಟಿರುವ ತನ್ನ ಯಜಮಾನ ಸದಾ ಕಾಲವೂ ತನ್ನ ಸಹಾಯಕ್ಕೆ … Read More ನಂಬಿಕೆ, ವಿಶ್ವಾಸ ಮತ್ತು ಪ್ರೇರಣೆ

ಅರ್ಜುನ ಸರ್ಜಾ ಅವರ ಯೋಗಾಂಜನೇಯ ಸ್ವಾಮಿ ದೇವಸ್ಥಾನ

ಕನ್ನಡ ಚಲನಚಿತ್ರರಂಗದಲ್ಲಿ ಬಾಲ ಕಲಾವಿದನಾಗಿ ಪ್ರವೇಶಿಸಿ ಈಗ ಬಹುಭಾಷಾ ನಾಯಕ ನಟನಾಗಿರುವ ಖ್ಯಾತ ಖಳನಟ ಶಕ್ತಿ ಪ್ರಸಾದ್ ಅವರ ಮಗ ಆ್ಯಕ್ಷನ್ ಕಿಂಗ್ ಅರ್ಜುನ್ ಸರ್ಜಾ ಅವರ ಇಡೀ ಕುಟುಂಬವೇ ಆಂಜನೇಯ ಸ್ವಾಮಿಯ ಭಕ್ತರು ಎಂಬುದು ಎಲ್ಲರಿಗೂ ತಿಳಿದ ವಿಷಯವಾಗಿದೆ. ಸಿನಿಮಾಗಳಲ್ಲಿ ಮಾತ್ರವಲ್ಲದೆ ರಿಯಲ್ ಲೈಫ್ನಲ್ಲಿಯೂ ಪವನಪುತ್ರ ಹನುಮಂತನ ಬಗ್ಗೆ ಅಪಾರವಾದ ಭಕ್ತಿ ಹೊಂದಿದೆ ಈ ಕುಟುಂಬ. ಈಗಾಗಲೇ ತುಮಕೂರಿನ ಬಳಿಯಿರುವ ತಮ್ಮ ಹುಟ್ಟೂರಿನಲ್ಲಿ ದೇವಸ್ಥಾನವನ್ನು ಕಟ್ಟಿಸಿದ್ದ ಅರ್ಜುನ್ ಸರ್ಜಾ ಸದ್ಯದಲ್ಲಿ ಚೆನ್ನೈನಲ್ಲಿ ವಾಸವಾಗಿದ್ದಾರೆ. ಚೆನ್ನೈನ ವಿಮಾನ… Read More ಅರ್ಜುನ ಸರ್ಜಾ ಅವರ ಯೋಗಾಂಜನೇಯ ಸ್ವಾಮಿ ದೇವಸ್ಥಾನ

ಪ್ರಾರ್ಥನೆ

ಪ್ರಾರ್ಥನೆ ಎಂದರೆ ಏನು? ಎಂದು ಪ್ರಂಪಚದ ಯಾವುದೇ ಮೂಲೆಗೆ ಹೋಗಿ ಯಾವುದೇ ಧರ್ಮದ ಸಣ್ಣ ಮಗುವನ್ನೂ ಕೇಳಿದರೂ ಥಟ್ ಅಂತಾ ಹೇಳುವುದೇ, ಭಕ್ತಿಯಿಂದ ಎರಡೂ ಕಣ್ಗಳನ್ನು ಮುಚ್ಚಿಕೊಂಡು ಎರಡೂ ಕೈಗಳನ್ನು ನಮಸ್ಕಾರ ಸ್ಥಿತಿಯಲ್ಲಿಯೋ ಇಲ್ಲವೇ ಬೇಡುವ ಸ್ಥಿತಿಯಲ್ಲಿಯೋ ನಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆ ಭಗವಂತನಲ್ಲಿ ಕೇಳಿಕೊಳ್ಳುವುದು ಎನ್ನುತ್ತಾರೆ. ಹೌದು ನಿಜ. ಆ ಮಕ್ಕಳು ಹೇಳಿದ್ದರಲ್ಲಿ ಸತ್ಯವಿದೆಯಾದರು ಅದೇ ಸಂಪೂರ್ಣ ಸತ್ಯವಲ್ಲ. ಪ್ರಾರ್ಥನೆ ಎನ್ನುವುದು ಕೇವಲ ಸ್ವಹಿತಾಸಕ್ತಿಗಾಗಿಯೋ ಇಲ್ಲವೇ ಮತ್ತೊಬ್ಬರ ಹಿತಾಸ್ತಕ್ತಿಗಾಗಿಯೋ ಭಗವಂತನಲ್ಲಿ ಬೇಡಿಕೊಳ್ಳುವುದರ ಹೊರತಾಗಿಯೂ ಇದೆ. ಹಾಗಾಗಿ… Read More ಪ್ರಾರ್ಥನೆ

ಶ್ರೀ ಪ್ರಸನ್ನ ಆಂಜನೇಯಸ್ವಾಮಿ ದೇವಸ್ಥಾನ, ರಾಗಿಗುಡ್ಡ

ನಮ್ಮ ಬೆಂಗಳೂರು ಇತಿಹಾಸ ಮಾಲಿಕೆಯಲ್ಲಿ ಕೆಲದಿನಗಳ ಹಿಂದೆ ಜಯನಗರದ ಕುರಿತಾಗಿ ತಿಳಿದುಕೊಂಡಿದ್ದೆವು. ಇಂದು ಅದೇ ಜಯನಗರಕ್ಕೇ ಹೊಂದಿಕೊಂಡೇ ಇರುವಂವಹ ಜಗತ್ಪ್ರಸಿದ್ದವಾದ ರಾಗಿಗುಡ್ಡದ ಆಂಜನೇಯಸ್ವಾಮಿ ದೇವಾಲಯದ ಇತಿಹಾಸದ ಬಗ್ಗೆ ಇಂದಿನ ಸಂಚಿಕೆಯಲ್ಲಿ ತಿಳಿದುಕೊಳ್ಳೋಣ.  ಬೆಂಗಳೂರು ಇತಿಹಾಸದ ಹಿಂದಿನ ಮಾಲಿಕೆಗಳನ್ನು ಓದಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ. ರಾಗಿಗುಡ್ಡದ ಶ್ರೀ ಪ್ರಸನ್ನ ಆಂಜನೇಯಸ್ವಾಮಿ ದೇವಾಲಯದ ಇತಿಹಾಸವನ್ನು ಈ ವೀಡಿಯೂ ಮೂಲಕವೂ ತಿಳಿಯಬಹುದಾಗಿದೆ ಸಾಮಾನ್ಯವಾಗಿ ಪ್ರತಿಯೊಂದು ಹಳ್ಳಿ ಅಥವಾ ಊರಿಗೆ ಹೋದಾಗ ಆ ಊರಿನ ಮುಂಭಾಗದಲ್ಲೇ ಅಂಜನಿ ಪುತ್ರ ಆಂಜನೇಯ… Read More ಶ್ರೀ ಪ್ರಸನ್ನ ಆಂಜನೇಯಸ್ವಾಮಿ ದೇವಸ್ಥಾನ, ರಾಗಿಗುಡ್ಡ

ಪ್ರಯಾಗದ ಬಡೇ ಹನುಮಾನ್ ಜೀ ಮಂದಿರ್

ಪ್ರಯಾಗ ಭಾರತದ ಅತ್ಯಂತ ಪ್ರಾಚೀನ ನಗರದಲ್ಲಿ ಒಂದಾಗಿದೆ. ಉತ್ತರ ಪ್ರದೇಶದ ಬಹುದೊಡ್ಡ ನಗರದಲ್ಲಿ ಇದೂ ಸಹಾ ಒಂದಾಗಿದ್ದು ಪೌರಾಣಿಕವಾಗಿಯೂ ಮತ್ತು ಐತಿಹಾಸಿಕವಾಗಿಯೂ ಪ್ರಸಿದ್ಧ ನಗರವಾಗಿದೆ. ವೇದ ಪುರಾಣಗಳಲ್ಲಿಯೂ ಈ ನಗರದ ಬಗ್ಗೆ ಉಲ್ಲೇಖವಿದ್ದು ಬ್ರಹ್ಮಾಂಡವನ್ನು ಸೃಷ್ಟಿ ಮಾಡಿದ ನಂತರ ಬ್ರಹ್ಮದೇವ ಪ್ರಥಮವಾಗಿ ಇದೇ ನಗರದಲ್ಲಿಯೇ ಯಜ್ಞಮಾಡಿದ ಎಂಬ ಪ್ರತೀತಿ ಇದೆ. ಆದ್ದಾರಿಂದಲೇ ಈ ನಗರಕ್ಕೆ ಪ್ರಯಾಗ ಎಂಬ ಹೆಸರು ಬಂದಿತೆಂದು ನಂಬಲಾಗಿದೆ. ಇದು ಮೂರು ನದಿಗಳು ಸೇರುವ ತ್ರಿವೇಣಿ ಸಂಗಮವೂ ಹೌದು. ಗಂಗ ಯಮುನಾ ಮತ್ತು ವೇದಗಳಲ್ಲಿ… Read More ಪ್ರಯಾಗದ ಬಡೇ ಹನುಮಾನ್ ಜೀ ಮಂದಿರ್

ಉಲ್ಟೇ ಹನುಮಾನ್ ಮಂದಿರ್

ಭಕ್ತಿ ಅಂದ ತಕ್ಷಣ ನಮ್ಮ ಮನಸ್ಸಿಗೆ ಥಟ್ ಅಂತಾ ನೆನಪಿಗೆ ಬರುವುದೇ ರಾಮನ ಭಕ್ತಾಗ್ರೇಸರ ಅಂಜನೀ ಪುತ್ರ ಪವನಸುತ ಹನುಮಾನ್ ಎಂದರೆ ಅತಿಶಯೋಕ್ತಿಯೇನಲ್ಲ. ಸೀತಾಮಾತೆಯ ಅನ್ವೇಷಣೆಯ ಸಂದರ್ಭದಲ್ಲಿ ಸಮುದ್ರೋಲಂಘನವನ್ನು ಮಾಡಿ ಲಂಕೆಗೆ ಹೋಗಿ ಸೀತಾಮಾತೆಯನ್ನು ಹುಡುಕಿಕೊಂಡ ಬಂದ ಭಜರಂಗಬಲಿ ಇವನು. ಮಹಾನ್ ಪರಾಕ್ರಮಿಯಾದ ಕಾರಣಕ್ಕಾಗಿಯೇ, ಪ್ರಪಂಚಾದ್ಯಂತ ಹನುಮಂತನ ಬೃಹತ್ತಾದ ಪ್ರತಿಮೆಗಳನ್ನು ಎಲ್ಲೆಡೆಯಲ್ಲಿಯೂ ಕಾಣಬಹುದಾಗಿದೆ. ಶಕ್ತಿ, ಭಕ್ತಿ ಮತ್ತು ಬುದ್ಧಿವಂತಿಕೆಯ ಪ್ರತೀಕವೆಂದೇ ಪರಿಗಣಿಸಲ್ಪಟ್ಟ ಆಂಜನೇಯನ ನಿಂತಿರುವ ಇಲ್ಲವೇ ಸಂಜೀವಿನ ಪರ್ವತವನ್ನು ಹೊತ್ತಿರುವ ವಿಗ್ರಹವನ್ನು ಬಹುತೇಕ ಎಲ್ಲಾ ದೇವಾಲಯಗಳಲ್ಲಿಯೂ ಮತ್ತು… Read More ಉಲ್ಟೇ ಹನುಮಾನ್ ಮಂದಿರ್

ಹನುಮ ಜಯಂತಿ

ನಮ್ಮೆಲ್ಲರಿಗೂ ತಿಳಿದಿರುವಂತೆ ಶ್ರೀರಾಮ ಅಯೋಧ್ಯೆಯ ಮೂಲದವನು ಮತ್ತು ವನವಾಸದಲ್ಲಿದ್ದಾಗ ಕಳೆದು ಹೋದ ತನ್ನ ಪತ್ನಿಯನ್ನು ಹುಡುಕುತ್ತ ದಕ್ಶಿಣ ಭಾಗದಲ್ಲಿ ಬರುತ್ತಿದ್ದಾಗ ಅವನಿಗೆ ಈಗಿನ ವಿಜಯನಗರ ಸಾಮ್ರಾಜ್ಯದ ಹಂಪೆಯೆ ಹತ್ತಿರವಿರುವ ಆನೆಗುಂದಿ ಬಳಿಯ ಅಂಜನಾದ್ರಿ ಬೆಟ್ಟ ಪ್ರದೇಶದಲ್ಲಿ ಪರಿಚಯವಾಗಿ ಸೀತಾ ಮಾತೆಯನ್ನು ಹುಡುಕಲು ಸಹಕರಿಸಿ, ಲಂಕಾ ಧಹನ ಮಾಡಿ, ರಾಮ ರಾವಣರ ಯುಧ್ಧದಲ್ಲಿ ಪ್ರಮುಖ ಪಾತ್ರವಹಿಸಿ ಕಡೆಗೆ ರಾಮ ಸೀತೆಯರನ್ನು ತನ್ನ ಹೃದಯದಲ್ಲೇ ಪ್ರತಿಷ್ಠಾಪನೆಗೊಳಿಸಿ ಕೊಂಡವನು. ಇಂದು ಚೈತ್ರ ಮಾಸದ ಶುಕ್ಲ ಪಕ್ಷದ ಹುಣ್ಣಿಮೆ. ಇದೇ ದಿನ ರಾಮನ… Read More ಹನುಮ ಜಯಂತಿ

ಉಷ್ಟ್ರಾರೂಢಾ ಹನುಮಂತ

ವಾಯುಪುತ್ರ ಆಂಜನೇಯನಿಗೆ ಗಾಳಿಯಲ್ಲಿ ಸ್ವತಃ ತಾನೇ ನೂರಾರು ಯೋಜನಗಳಷ್ಟು ದೂರ ಹಾರುವ ಸಾಮರ್ಥ್ಯವನ್ನು ಹೊಂದಿದ್ದ ಮತ್ತು ಅದನ್ನು ಸೀತಾನ್ವೇಷಣೆಯ ಸಂಧರ್ಭದಲ್ಲಿ ಸಮುದ್ರ ಲಂಘನದ ಸಮಯದಲ್ಲಿ ನಿರೂಪಿಸಿಯೂ ಇದ್ದ ಆದರೂ, ಆಂಜನೇಯಯನ ಅನೇಕ ದೇವಾಲಯಗಳಲ್ಲಿ ಅಂಜನೇಯಯನ ವಿಗ್ರಹದ ಮುಂದೆ ಒಂಟೆಯನ್ನು ಇಟ್ಟಿರುತ್ತಾರಲ್ಲದೇ ಅವರನ್ನು ಉಷ್ಟ್ರಾರೂಡಾ ಎಂದೂ ಕರೆಯಲಾಗುತ್ತದೆ. ರಾಮಾಯಣ ಮತ್ತು ಪರಾಶರ ಸಂಹಿತೆಯಲ್ಲಿಯೂ ಹನುಮಂತ ಗಾಳಿಯ ವೇಗದಲ್ಲಿ ಹಾರಬಲ್ಲ ಎಂಬುವ ಅನೇಕ ಉದಾಹರಣೆಗಳನ್ನು ವಿವರಿಸುತ್ತಾರೆ ಮತ್ತು ಲಂಕೆಯನ್ನು ತಲುಪಲು ಸಾಗರದಾದ್ಯಂತ ಹಾರಾಟ, ಸಂಜೀವೀನಿಯನ್ನು ತರುವ ಸಲುವಾಗಿ ಲಂಕೆಯಿಂದ ಹಿಮಾಲಯಕ್ಕೆ… Read More ಉಷ್ಟ್ರಾರೂಢಾ ಹನುಮಂತ

ಇಂದೋರಿನ ಪಿತೃಪರ್ವತದ ವಿರಾಟ್ ವೀರಾಂಜನೇಯ

ಮಧ್ಯಪ್ರದೇಶದ ಇಂದೋರಿನ ಪಿತೃಪರ್ವತದಲ್ಲಿ ನಿರ್ಮಾಣವಾಗುತ್ತಿರುವ ವಿರಾಟ್ ವೀರಾಂಜನೇಯನ ವಿಗ್ರಹದ ಮುಂದೆ ನಿಂತಿದ್ದೇವೆ. ಸರಿ ಸುಮಾರು 62 ಅಡಿ ಅಗಲ, 66 ಅಡಿ ಎತ್ತರದ, 90 ಟನ್ ತೂಕದ ಸುಮಾರು 10 ಕೋಟಿ ವೆಚ್ಚದಲ್ಲಿ ಸಾರ್ವಜನಿಕರ ಸಹಕಾರದಿಂದ ನಿರ್ಮಿಸಲಾಗುತ್ತಿರುವ ಈ ಅಷ್ಟಧಾತು ಲೋಹದಿಂದ ತಯಾರಿಸಿರುವ ಧ್ಯಾನ ಭಂಗಿಯಲ್ಲಿ ಕುಳಿತಿರುವ ಪ್ರಪಂಚದ ಅತಿ ದೊಡ್ದ ಹನುಮಂತನ ಪ್ರತಿಮೆಯ ನಿರ್ಮಾಣ ಭರದಿಂದ ಸಾಗಿದೆ. ಈ ಪ್ರತಿಮೆಯನ್ನು ಹವಾಮಾನದಿಂದ ರಕ್ಷಿಸಲು ವಿಶೇಷವಾಗಿ ಹೊಳಪು ನೀಡಲಾಗಿದೆ. ರಾಜಸ್ಥಾನದ ಜೈಪುರದಲ್ಲಿ ಈ ವಿಗ್ರಹದ ಬಿಡಿ ಭಾಗಗಳನ್ನು… Read More ಇಂದೋರಿನ ಪಿತೃಪರ್ವತದ ವಿರಾಟ್ ವೀರಾಂಜನೇಯ