ಅವರೆಕಾಳು ಉಂಡೆ ಕಡುಬು

ಮಳೆಗಾಲ ಮುಗಿಯುತ್ತಿದ್ದಂತೆಯೇ ಅವರೇಕಾಳಿನ ಕಾಲ ಶುರುವಾಗುತ್ತದೆ. ಆವರೇ ಕಾಳಿನ ಉಪ್ಪಿಟ್ಟು, ಹುಳಿ, ನುಚ್ಚಿನುಂಡೆ, ಆಂಬೊಡೆ, ಹುಸ್ಲಿ ಹೀಗೆ ಹಲವಾರು ರುಚಿ ರುಚಿಯಾದ ಪದಾರ್ಥಗಳನ್ನು ಮಾಡಬಹುದಾಗಿದೆ.  ನಾವು ಇಂದು ಅತ್ಯಂತ ಸುಲಭ ಮತ್ತು ಸರಳವಾಗಿ ತಯಾರಿಸಬಹುದಾದ ರುಚಿ ರುಚಿಯಾದ ಅವರೆಕಾಳು  ಉಂಡೆ ಕಡುಬು ಮಾಡುವುದನ್ನು ನಮ್ಮ ನಳಪಾಕ ಮಾಲಿಕೆಯಲ್ಲಿ ತಿಳಿಸಿಕೊಡುತ್ತಿದ್ದೇವೆ. ಸುಮಾರು 4-5 ಜನರು ಸವಿಯಬಹುದಾದಷ್ಟು  ಅವರೆಕಾಳು ಉಂಡೆ ಕಡುಬು ತಯಾರಿಸಲು ಬೇಕಾಗುವ ಸಾಮಗ್ರಿಗಳು ಈ ರೀತಿಯಾಗಿವೆ ಬೇಯಿಸಿಟ್ಟುಕೊಂಡ ಅವರೇಕಾಳು – 1 ಬಟ್ಟಲು ಅಕ್ಕಿತರಿ – 1 ಬಟ್ಟಲು ಸಾಸಿವೆ – 1/2 ಚಮಚ… Read More ಅವರೆಕಾಳು ಉಂಡೆ ಕಡುಬು

ಅವರೇ ಮೇಳ

ರಂಗು ರಂಗಿನ ಶಬ್ಧ ಮತ್ತು ಬೆಳಕಿನ ಸಮ್ಮಿಳನದ ದೀಪಾವಳಿ ಹಬ್ಬ ಮುಗಿದು ಕನ್ನಡದ ಹಬ್ಬ ಕರ್ನಾಟಕ ರಾಜ್ಯೋತ್ಸವದ ಇಡೀ ತಿಂಗಳ ಭರಾಟೆ ಮುಗಿದು ಪ್ರಕೃತಿಯಲ್ಲೂ ತೀವ್ರವಾದ ಬದಲಾವಣೆಯಾಗಿ ಜನರನ್ನೆಲ್ಲಾ ಮಾಗಿಯ ಚಳಿಯಲ್ಲಿ ಗಡ ಗಡ ನಡುಗಿಸುತ್ತಾ ಮನೆಯಿಂದ ಹೊರಗಡೆ ಬಾರದಂತೆ ತಡೆದರೂ, ಬೆಂಗಳೂರಿನ ಜನರನ್ನೆಲ್ಲಾ ಸುಮಾರು ಎರಡು ವಾರಗಳ ಕಾಲ ಒಂದೆಡೆ ಒಗ್ಗೂಡಿಸುವ ಕಾರ್ಯಕ್ರಮವೆಂದರೆ ಬೆಂಗಳೂರಿನ ವಿಶ್ವೇಶ್ವರ ಪುರಂ ನ ತಿಂಡಿ ಬೀದಿಯಲ್ಲಿ ಪ್ರತೀವರ್ಷವೂ ವಾಸವೀ ಕಾಂಡಿಮೆಂಟ್ಸ್ ಅವರ ವತಿಯಿಂದ ನೆಡೆಸಲ್ಪಡುವ ಅವರೇ ಮೇಳ ಎಂದರೆ ಅತಿಶಯೋಕ್ತಿಯೇನಲ್ಲ.… Read More ಅವರೇ ಮೇಳ