ಆಸ್ತಿ

ಎಂಭತ್ತರ ದಶಕ. ಮಳೆಯನ್ನೇ ನಂಬಿ ಬೇಸಾಯ ಮಾಡುತ್ತಾ ಜೀವನ ಸಾಗಿಸುತ್ತಿದ್ದ  ತುಮಕೂರು ಬಳಿಯ ಬೋರೇಗೌಡರ ಕುಟುಂಬಕ್ಕೆ ನಿಜಕ್ಕೂ ಬಹಳ ಆಘಾತವಾಗಿತ್ತು. ಸತತವಾಗಿ ಎರಡು ಮೂರು ವರ್ಷಗಳು ಸರಿಯಾಗಿ ಮಳೆಯಾಗದೆ  ಅವರಿದ್ದ ಪ್ರದೇಶ ಬರಗಾಲಕ್ಕೆ ತುತ್ತಾಗಿತ್ತು.  ಹೊತ್ತು ಹೊತ್ತಿಗೆ ಎರಡು ತುತ್ತು ಊಟ ಮಾಡಲೂ ಕಷ್ಟ ಪಡುವ ಸ್ಥಿತಿ ಬಂದೊದಗಿತ್ತು. ಅಂತಹ ಪರಿಸ್ಥಿತಿಯಲ್ಲಿ ಕೆಟ್ಟು ಪಟ್ಟಣ ಸೇರು ಎನ್ನುವಂತೆ ತಮ್ಮ ಸಂಬಂಧೀಕರು ಬೆಂಗಳೂರಿನಲ್ಲಿದ್ದ ಕಾರಣ, ಅಲ್ಲಿ ಏನಾದರೂ ಕೂಲೀ ನಾಲಿ ಮಾಡಿ ಸ್ವಲ್ಪ ಸಂಪಾದಿಸಿಕೊಂಡು ಜೀವನ ಸಾಗಿಸುತ್ತಾ ಪರಿಸ್ಥಿತಿ… Read More ಆಸ್ತಿ