ಕಣ್ಣೀರು ಸುರಿಸುವ ಅಂಜನೇಯ

ಸಾಮಾನ್ಯವಾಗಿ ಮನುಷ್ಯರು ಸಂತೋಷ ಮತ್ತು ದುಃಖವನ್ನು ವ್ಯಕ್ತ ಪಡಿಸುವ ಸಲುವಾಗಿ ಕಣ್ಣೀರು ಸುರಿಸುವುದು ಸಹಜ.ಪ್ರಕ್ರಿಯೆಯಾಗಿದೆ. ಬೆಂಗಳೂರಿನ ದೇವಸ್ಥಾನವೊಂದರ ಆಂಜನೇಯಸ್ವಾಮಿ ವರ್ಷಕ್ಕೊಮ್ಮೆ ಕಣ್ಣೀರು ಸುರಿಸುವ ಆಶ್ಚರ್ಯಕರವಾದ ಸಂಗತಿಯ ಬಗ್ಗೆ ತಿಳಿದು ಕೊಳ್ಳೋಣ. ಬಾಣಸವಾಡಿ ಬೆಂಗಳೂರಿನ ಈಶಾನ್ಯಕ್ಕೆ ನಗರದ ಕೇಂದ್ರದಿಂದ ಸುಮಾರು 6-8 ಕಿ.ಮೀ ದೂರದಲ್ಲಿದ್ದು ಈ ಹಿಂದೆ ಚಿಕ್ಕ ಬಾಣಸವಾಡಿ ಮತ್ತು ದೊಡ್ಡ ಬಾಣಸವಾಡಿ ಎಂಬ ಎರಡು ಗ್ರಾಮಗಳು ಇದ್ದವು. ಹೆಚ್ಚಾಗುತ್ತಿರುವ ನಗರೀಕರಣದಿಂದ ಈ ಎರಡೂ ಹಳ್ಳಿಗಳೂ ಕಣ್ಮರೆಯಾಗಿ ಕೇವಲ ದೊಡ್ಡ ಬಾಣಸವಾಡಿ ಎಂಬ ಸುಸಜ್ಜಿತವಾದ ಬಡಾವಣೆಯು ಇಂದು… Read More ಕಣ್ಣೀರು ಸುರಿಸುವ ಅಂಜನೇಯ

ಅರ್ಜುನ ಸರ್ಜಾ ಅವರ ಯೋಗಾಂಜನೇಯ ಸ್ವಾಮಿ ದೇವಸ್ಥಾನ

ಕನ್ನಡ ಚಲನಚಿತ್ರರಂಗದಲ್ಲಿ ಬಾಲ ಕಲಾವಿದನಾಗಿ ಪ್ರವೇಶಿಸಿ ಈಗ ಬಹುಭಾಷಾ ನಾಯಕ ನಟನಾಗಿರುವ ಖ್ಯಾತ ಖಳನಟ ಶಕ್ತಿ ಪ್ರಸಾದ್ ಅವರ ಮಗ ಆ್ಯಕ್ಷನ್ ಕಿಂಗ್ ಅರ್ಜುನ್ ಸರ್ಜಾ ಅವರ ಇಡೀ ಕುಟುಂಬವೇ ಆಂಜನೇಯ ಸ್ವಾಮಿಯ ಭಕ್ತರು ಎಂಬುದು ಎಲ್ಲರಿಗೂ ತಿಳಿದ ವಿಷಯವಾಗಿದೆ. ಸಿನಿಮಾಗಳಲ್ಲಿ ಮಾತ್ರವಲ್ಲದೆ ರಿಯಲ್ ಲೈಫ್ನಲ್ಲಿಯೂ ಪವನಪುತ್ರ ಹನುಮಂತನ ಬಗ್ಗೆ ಅಪಾರವಾದ ಭಕ್ತಿ ಹೊಂದಿದೆ ಈ ಕುಟುಂಬ. ಈಗಾಗಲೇ ತುಮಕೂರಿನ ಬಳಿಯಿರುವ ತಮ್ಮ ಹುಟ್ಟೂರಿನಲ್ಲಿ ದೇವಸ್ಥಾನವನ್ನು ಕಟ್ಟಿಸಿದ್ದ ಅರ್ಜುನ್ ಸರ್ಜಾ ಸದ್ಯದಲ್ಲಿ ಚೆನ್ನೈನಲ್ಲಿ ವಾಸವಾಗಿದ್ದಾರೆ. ಚೆನ್ನೈನ ವಿಮಾನ… Read More ಅರ್ಜುನ ಸರ್ಜಾ ಅವರ ಯೋಗಾಂಜನೇಯ ಸ್ವಾಮಿ ದೇವಸ್ಥಾನ

ಪ್ರಾರ್ಥನೆ

ಪ್ರಾರ್ಥನೆ ಎಂದರೆ ಏನು? ಎಂದು ಪ್ರಂಪಚದ ಯಾವುದೇ ಮೂಲೆಗೆ ಹೋಗಿ ಯಾವುದೇ ಧರ್ಮದ ಸಣ್ಣ ಮಗುವನ್ನೂ ಕೇಳಿದರೂ ಥಟ್ ಅಂತಾ ಹೇಳುವುದೇ, ಭಕ್ತಿಯಿಂದ ಎರಡೂ ಕಣ್ಗಳನ್ನು ಮುಚ್ಚಿಕೊಂಡು ಎರಡೂ ಕೈಗಳನ್ನು ನಮಸ್ಕಾರ ಸ್ಥಿತಿಯಲ್ಲಿಯೋ ಇಲ್ಲವೇ ಬೇಡುವ ಸ್ಥಿತಿಯಲ್ಲಿಯೋ ನಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆ ಭಗವಂತನಲ್ಲಿ ಕೇಳಿಕೊಳ್ಳುವುದು ಎನ್ನುತ್ತಾರೆ. ಹೌದು ನಿಜ. ಆ ಮಕ್ಕಳು ಹೇಳಿದ್ದರಲ್ಲಿ ಸತ್ಯವಿದೆಯಾದರು ಅದೇ ಸಂಪೂರ್ಣ ಸತ್ಯವಲ್ಲ. ಪ್ರಾರ್ಥನೆ ಎನ್ನುವುದು ಕೇವಲ ಸ್ವಹಿತಾಸಕ್ತಿಗಾಗಿಯೋ ಇಲ್ಲವೇ ಮತ್ತೊಬ್ಬರ ಹಿತಾಸ್ತಕ್ತಿಗಾಗಿಯೋ ಭಗವಂತನಲ್ಲಿ ಬೇಡಿಕೊಳ್ಳುವುದರ ಹೊರತಾಗಿಯೂ ಇದೆ. ಹಾಗಾಗಿ… Read More ಪ್ರಾರ್ಥನೆ

ಶ್ರೀ ಪ್ರಸನ್ನ ಆಂಜನೇಯಸ್ವಾಮಿ ದೇವಸ್ಥಾನ, ರಾಗಿಗುಡ್ಡ

ನಮ್ಮ ಬೆಂಗಳೂರು ಇತಿಹಾಸ ಮಾಲಿಕೆಯಲ್ಲಿ ಕೆಲದಿನಗಳ ಹಿಂದೆ ಜಯನಗರದ ಕುರಿತಾಗಿ ತಿಳಿದುಕೊಂಡಿದ್ದೆವು. ಇಂದು ಅದೇ ಜಯನಗರಕ್ಕೇ ಹೊಂದಿಕೊಂಡೇ ಇರುವಂವಹ ಜಗತ್ಪ್ರಸಿದ್ದವಾದ ರಾಗಿಗುಡ್ಡದ ಆಂಜನೇಯಸ್ವಾಮಿ ದೇವಾಲಯದ ಇತಿಹಾಸದ ಬಗ್ಗೆ ಇಂದಿನ ಸಂಚಿಕೆಯಲ್ಲಿ ತಿಳಿದುಕೊಳ್ಳೋಣ.  ಬೆಂಗಳೂರು ಇತಿಹಾಸದ ಹಿಂದಿನ ಮಾಲಿಕೆಗಳನ್ನು ಓದಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ. ರಾಗಿಗುಡ್ಡದ ಶ್ರೀ ಪ್ರಸನ್ನ ಆಂಜನೇಯಸ್ವಾಮಿ ದೇವಾಲಯದ ಇತಿಹಾಸವನ್ನು ಈ ವೀಡಿಯೂ ಮೂಲಕವೂ ತಿಳಿಯಬಹುದಾಗಿದೆ ಸಾಮಾನ್ಯವಾಗಿ ಪ್ರತಿಯೊಂದು ಹಳ್ಳಿ ಅಥವಾ ಊರಿಗೆ ಹೋದಾಗ ಆ ಊರಿನ ಮುಂಭಾಗದಲ್ಲೇ ಅಂಜನಿ ಪುತ್ರ ಆಂಜನೇಯ… Read More ಶ್ರೀ ಪ್ರಸನ್ನ ಆಂಜನೇಯಸ್ವಾಮಿ ದೇವಸ್ಥಾನ, ರಾಗಿಗುಡ್ಡ

ಉಲ್ಟೇ ಹನುಮಾನ್ ಮಂದಿರ್

ಭಕ್ತಿ ಅಂದ ತಕ್ಷಣ ನಮ್ಮ ಮನಸ್ಸಿಗೆ ಥಟ್ ಅಂತಾ ನೆನಪಿಗೆ ಬರುವುದೇ ರಾಮನ ಭಕ್ತಾಗ್ರೇಸರ ಅಂಜನೀ ಪುತ್ರ ಪವನಸುತ ಹನುಮಾನ್ ಎಂದರೆ ಅತಿಶಯೋಕ್ತಿಯೇನಲ್ಲ. ಸೀತಾಮಾತೆಯ ಅನ್ವೇಷಣೆಯ ಸಂದರ್ಭದಲ್ಲಿ ಸಮುದ್ರೋಲಂಘನವನ್ನು ಮಾಡಿ ಲಂಕೆಗೆ ಹೋಗಿ ಸೀತಾಮಾತೆಯನ್ನು ಹುಡುಕಿಕೊಂಡ ಬಂದ ಭಜರಂಗಬಲಿ ಇವನು. ಮಹಾನ್ ಪರಾಕ್ರಮಿಯಾದ ಕಾರಣಕ್ಕಾಗಿಯೇ, ಪ್ರಪಂಚಾದ್ಯಂತ ಹನುಮಂತನ ಬೃಹತ್ತಾದ ಪ್ರತಿಮೆಗಳನ್ನು ಎಲ್ಲೆಡೆಯಲ್ಲಿಯೂ ಕಾಣಬಹುದಾಗಿದೆ. ಶಕ್ತಿ, ಭಕ್ತಿ ಮತ್ತು ಬುದ್ಧಿವಂತಿಕೆಯ ಪ್ರತೀಕವೆಂದೇ ಪರಿಗಣಿಸಲ್ಪಟ್ಟ ಆಂಜನೇಯನ ನಿಂತಿರುವ ಇಲ್ಲವೇ ಸಂಜೀವಿನ ಪರ್ವತವನ್ನು ಹೊತ್ತಿರುವ ವಿಗ್ರಹವನ್ನು ಬಹುತೇಕ ಎಲ್ಲಾ ದೇವಾಲಯಗಳಲ್ಲಿಯೂ ಮತ್ತು… Read More ಉಲ್ಟೇ ಹನುಮಾನ್ ಮಂದಿರ್

ಹನುಮ ವರ್ಧಂತಿ

ಚೈತ್ರ ಮಾಸದ ಶುಕ್ಲ ಪಕ್ಷದ ಹುಣ್ಣಿಮೆಯಂದು ಪ್ರಭು ಶ್ರೀರಾಮನ ಪರಮ ಭಕ್ತ, ಅಂಜನಿಯ ಪುತ್ರ ಆಂಜನೇಯನು ಹುಟ್ಟಿದ ಎಂದು ನಮ್ಮ ಪುರಾಣಗಳಲ್ಲಿ ಹೇಳಲಾಗಿದೆ. ಈ ದಿನವನ್ನು ದೇಶಾದ್ಯಂತ ಹನುಮ ಜಯಂತಿ ಎಂದು ಆಚರಿಸುವಾಗ, ಇದೇನಿದು ಹನುಮ ವರ್ಧಂತಿ? ಎಂದು ಯೋಚಿಸುತ್ತಿರುವವರಿಗೆ ಇದೋ ಇಲ್ಲಿದೆ ಉತ್ತರ… Read More ಹನುಮ ವರ್ಧಂತಿ

ಉಷ್ಟ್ರಾರೂಢಾ ಹನುಮಂತ

ವಾಯುಪುತ್ರ ಆಂಜನೇಯನಿಗೆ ಗಾಳಿಯಲ್ಲಿ ಸ್ವತಃ ತಾನೇ ನೂರಾರು ಯೋಜನಗಳಷ್ಟು ದೂರ ಹಾರುವ ಸಾಮರ್ಥ್ಯವನ್ನು ಹೊಂದಿದ್ದ ಮತ್ತು ಅದನ್ನು ಸೀತಾನ್ವೇಷಣೆಯ ಸಂಧರ್ಭದಲ್ಲಿ ಸಮುದ್ರ ಲಂಘನದ ಸಮಯದಲ್ಲಿ ನಿರೂಪಿಸಿಯೂ ಇದ್ದ ಆದರೂ, ಆಂಜನೇಯಯನ ಅನೇಕ ದೇವಾಲಯಗಳಲ್ಲಿ ಅಂಜನೇಯಯನ ವಿಗ್ರಹದ ಮುಂದೆ ಒಂಟೆಯನ್ನು ಇಟ್ಟಿರುತ್ತಾರಲ್ಲದೇ ಅವರನ್ನು ಉಷ್ಟ್ರಾರೂಡಾ ಎಂದೂ ಕರೆಯಲಾಗುತ್ತದೆ. ರಾಮಾಯಣ ಮತ್ತು ಪರಾಶರ ಸಂಹಿತೆಯಲ್ಲಿಯೂ ಹನುಮಂತ ಗಾಳಿಯ ವೇಗದಲ್ಲಿ ಹಾರಬಲ್ಲ ಎಂಬುವ ಅನೇಕ ಉದಾಹರಣೆಗಳನ್ನು ವಿವರಿಸುತ್ತಾರೆ ಮತ್ತು ಲಂಕೆಯನ್ನು ತಲುಪಲು ಸಾಗರದಾದ್ಯಂತ ಹಾರಾಟ, ಸಂಜೀವೀನಿಯನ್ನು ತರುವ ಸಲುವಾಗಿ ಲಂಕೆಯಿಂದ ಹಿಮಾಲಯಕ್ಕೆ… Read More ಉಷ್ಟ್ರಾರೂಢಾ ಹನುಮಂತ

ಗರಡಿ ಮನೆ

ಸುಮಾರು ಎರಡು ದಶಕಗಳ ಹಿಂದೆ ನಮ್ಮ ದೇಶದ ಬಹುತೇಕ ಹಳ್ಳಿಗಳಿಗೆ ಇನ್ನೇನು ಪ್ರವೇಶಿಸಬೇಕು ಎನ್ನುವಷ್ಟರಲ್ಲಿಯೇ ಅಲ್ಲೊಂದು ಸುಮಾರಾಗಿರುವ ಕಟ್ಟಡ ಅದರ ಮೇಲೊಂದು ಕೇಸರಿ ಬಾವುಟ ಎದ್ದು ಕಾಣುತ್ತಿದ್ದಲ್ಲಿ ಆ ಊರಿನಲ್ಲಿ ಯಾವುದೇ ಕಳ್ಳಕಾಕರ ಭಯವಿಲ್ಲ. ಆ ಊರಿನ ಹೆಣ್ಣುಮಕ್ಕಳು ನಿರ್ಭಿಡೆಯಾಗಿ ಯಾವ ಹೊತ್ತಿನಲ್ಲಾದರೂ ಓಡಾಡಬಹುದು. ಅಲ್ಲಿ ಯಾವುದೇ ಪುಂಡ ಪೋಕರಿಗಳ ಕಾಟವಿರುವುದಿಲ್ಲ ಎಂಬ ಭರವಸೆಯನ್ನು ಮೂಡಿಸುತ್ತಿದ್ದವು. ಅರೇ, ಒಂದು ಕಟ್ಟಡದಿಂದಾಗಿ ಇಷ್ಟೊಂದು ಸಾಮಾಜಿಕ ಬದಲಾವಣೆಯೇ ಎಂದು ತಿಳಿದಲ್ಲಿ, ಆ ಕಟ್ಟಡ ಸಾಮ್ಯಾನ್ಯ ಕಟ್ಟಡವಾಗಿರದೇ, ಅದನ್ನು ಗರಡಿ ಮನೆ… Read More ಗರಡಿ ಮನೆ

ಇಂದೋರಿನ ಪಿತೃಪರ್ವತದ ವಿರಾಟ್ ವೀರಾಂಜನೇಯ

ಮಧ್ಯಪ್ರದೇಶದ ಇಂದೋರಿನ ಪಿತೃಪರ್ವತದಲ್ಲಿ ನಿರ್ಮಾಣವಾಗುತ್ತಿರುವ ವಿರಾಟ್ ವೀರಾಂಜನೇಯನ ವಿಗ್ರಹದ ಮುಂದೆ ನಿಂತಿದ್ದೇವೆ. ಸರಿ ಸುಮಾರು 62 ಅಡಿ ಅಗಲ, 66 ಅಡಿ ಎತ್ತರದ, 90 ಟನ್ ತೂಕದ ಸುಮಾರು 10 ಕೋಟಿ ವೆಚ್ಚದಲ್ಲಿ ಸಾರ್ವಜನಿಕರ ಸಹಕಾರದಿಂದ ನಿರ್ಮಿಸಲಾಗುತ್ತಿರುವ ಈ ಅಷ್ಟಧಾತು ಲೋಹದಿಂದ ತಯಾರಿಸಿರುವ ಧ್ಯಾನ ಭಂಗಿಯಲ್ಲಿ ಕುಳಿತಿರುವ ಪ್ರಪಂಚದ ಅತಿ ದೊಡ್ದ ಹನುಮಂತನ ಪ್ರತಿಮೆಯ ನಿರ್ಮಾಣ ಭರದಿಂದ ಸಾಗಿದೆ. ಈ ಪ್ರತಿಮೆಯನ್ನು ಹವಾಮಾನದಿಂದ ರಕ್ಷಿಸಲು ವಿಶೇಷವಾಗಿ ಹೊಳಪು ನೀಡಲಾಗಿದೆ. ರಾಜಸ್ಥಾನದ ಜೈಪುರದಲ್ಲಿ ಈ ವಿಗ್ರಹದ ಬಿಡಿ ಭಾಗಗಳನ್ನು… Read More ಇಂದೋರಿನ ಪಿತೃಪರ್ವತದ ವಿರಾಟ್ ವೀರಾಂಜನೇಯ