ಕೊಡವರ ಕೈಲ್ ಪೋಳ್ದ್ ಹಬ್ಬ

ಕರ್ನಾಟಕದ ಕೆಚ್ಚೆದೆಯ ವೀರ ಕೊಡವರಿಗೆ ಕೈಲ್ ಪೋಳ್ದ್ ಹಬ್ಬದ ಶುಭಾಶಯಗಳನ್ನು ತಿಳಿಸುವುದರೊಂದಿಗೆ, ಕೊಡಗು, ಕೊಡವರ ಇತಿಹಾಸ, ಭಾರತೀಯ ಸೇನೆ ಮತ್ತು ಕ್ರೀಡಾರಂಗಕ್ಕೆ ಕೊಡವರ ಕಾಣಿಕೆಗಳ ಜೊತೆಯಲ್ಲಿ, ಅತ್ಯಂತ ವೈಶಿಷ್ಟ್ಯವಾಗಿ ಅಚರಿಸಲ್ಪಡುವ ಅವರ ಹಬ್ಬಗಳು ಅದರಲ್ಲೂ ವಿಶೇಶವಾಗಿ ಕೈಲ್ ಪೋಳ್ದ್ ಹಬ್ಬದ ಕುರಿತಾದ ಸಂಪೂರ್ಣ ಮಾಹಿತಿ ಇದೋ ನಿಮಗಾಗಿ… Read More ಕೊಡವರ ಕೈಲ್ ಪೋಳ್ದ್ ಹಬ್ಬ

ಮತಾಂಧತೆಗೆ ಇನ್ನೆಷ್ಟು ಹಿಂದೂ ಕಾರ್ಯಕರ್ತರು ಬಲಿಯಾಗ ಬೇಕೋ?

ಹಿಂದೂಗಳ‌ ಮೇಲಿನ ಹತ್ಯೆಗಳಿಗೆ ನಾಲಾಯಕ್ ರಾಜಕಾರಣಿಗಳನ್ನು ದೂಷಿಸುವ ಬದಲು, ನಮ್ಮ ಹಿಂದೂ ಮಠಾಧೀಶರುಗಳನ್ನು ಪ್ರಶ್ನಿಸ ಬೇಕಿದೆ.

ನಮ್ಮ ಜಾತಿಗೆ ಮೀಸಲಾತಿ ಕೊಡಿ, ನಮ್ಮರಿಗೆ ಟಿಕೆಟ್ ಕೊಡೀ, ನಮ್ಮವರನ್ನೇ ಮಂತ್ರಿ, ಮುಖ್ಯಮಂತ್ರಿ ಮಾಡಿ ಎಂದು ಬೀದಿಗಿಳಿದು ಬ್ಲಾಕ್ಮೇಲ್ ಮಾಡುವ ಮಠಾಧೀಷರುಗಳು ಹಿಂದೂ ಪರ‌ ಒಗ್ಗಟ್ಟಾಗಿ ಬೀದಿಗಿಳಿದಿದ್ದರೆ, ಯಾರೂ ಸಹಾ ಹಿಂದೂಗಳನ್ನು ಮುಟ್ಟುವುದಕ್ಕೆ ಮುಂದಾಗುತ್ತಿರಲಿಲ್ಲ ಅಲ್ವೇ?… Read More ಮತಾಂಧತೆಗೆ ಇನ್ನೆಷ್ಟು ಹಿಂದೂ ಕಾರ್ಯಕರ್ತರು ಬಲಿಯಾಗ ಬೇಕೋ?

ರಾಜರ್ಷಿ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್

ಸರಿ ಸುಮಾರು ಕ್ರಿ.ಶ. 1399ರ ಆಸುಪಾಸಿನಲ್ಲಿ ಈಗಿನ ಗುಜರಾತ್ ಮೂಲದವರಾದ ಶ್ರೀ ಯಧುರಾಯ ಮತ್ತು ಶ್ರೀ ರಂಗರಾಯ ಎನ್ನುವವರು ಮಹಾಬಲೇಶ್ವರ ತಪ್ಪಲಿನಲ್ಲಿ (ಈಗಿನ ಚಾಮುಂಡೀ ಬೆಟ್ಟ) ಸುಮಾರು 30 ಗ್ರಾಮಗಳ ಅಂದಿನ ವಿಜಯನಗರದ ಅಧೀನದಲ್ಲಿರುವ ಒಂದು ರಾಜ್ಯವನ್ನು ಕಟ್ದಿ, ಅಲ್ಲಿಂದ ಸುಮಾರು 7 ರಾಜರುಗಳ ಆಡಳಿತದ ನಂತರ 1529ರಲ್ಲಿ ವಿಜಯನಗರದ ಶ್ರೀ ಕೃಷ್ಣದೇವರಾಯರ ಕಾಲವಾದ ನಂತರ ಅವರ ಮುಂದಿನ ಪೀಳಿಗೆಯವರು ಅದೇ ಗತ್ತನ್ನು ಮುಂದುವರಿಸಿ ಕೊಳ್ಳಲಾಗದೇ ಹೋದಾಗ, ವಿಜಯನಗರದ ತಿರುಮಲರಾಯರನ್ನು ಸೋಲಿಸಿದ ಮೈಸೂರಿನ ಶ್ರೀರಾಜ ಒಡೆಯರ್ ಅವರು… Read More ರಾಜರ್ಷಿ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್

ಅಆಇಈ ಯಲ್ಲೂ ಅಪಸವ್ಯವೇ?

ನಾವು ಚಿಕ್ಕವರಿದ್ದಾಗ ಸಮಾಜ ಶಾಸ್ತ್ರದಲ್ಲಿ ಭಾರತವನ್ನು ಕಂಡುಹಿಡಿದವರು ಯಾರು? ಎಂಬ ಪ್ರಶ್ನೆಗೆ 1492 ರಲ್ಲಿ ಪೋರ್ಚುಗೀಸ್ ಮೂಲದ ನಾವಿಕನಾದ ವಾಸ್ಕೋ ಡಿ ಗಾಮಾ ಪೋರ್ಚುಗಲ್‌ನ ಲಿಸ್ಬನ್‌ನಿಂದ ನೌಕಾಯಾನ ಮಾಡುತ್ತಾ ಅಟ್ಲಾಂಟಿಕ್ ಸಾಗರದ ಮೂಲಕ ಕೇಪ್ ಆಫ್ ಗುಡ್ ಹೋಪ್ ಅನ್ನು ಬಳಸಿಕೊಂಡು ಆಫ್ರಿಕಾದ ಪೂರ್ವ ಕರಾವಳಿಯ ಮಲಿಂಡಿಯಲ್ಲಿ ಕೆಲಕಾಲ ಲಂಗರು ಹಾಕಿ ಅಂತಿಮವಾಗಿ ಕೇರಳದ ಮಲಬಾರ್ ಕರಾವಳಿಯ ಕ್ಯಾಲಿಕಟ್‌ಗೆ ಬರುವ ಮೂಲಕ ಭಾರತವನ್ನು ಕಂಡು ಹಿಡಿದರು ಎಂದೇ ಹೇಳಿಕೊಡಲಾಗುತ್ತಿತ್ತು. ಹಾಗಾದರೆ ಅದಕ್ಕೂ ಮುಂಚೆ ಭಾರತದ ಅಸ್ತಿತ್ವವೇ ಇರಲಿಲ್ಲವೇ?… Read More ಅಆಇಈ ಯಲ್ಲೂ ಅಪಸವ್ಯವೇ?

ಕೋತಿ ರಾಜ್ ಉರ್ಫ್ ಜ್ಯೋತಿರಾಜ್

ಜೀವಶಾಸ್ತ್ರದಲ್ಲಿ ನಾವೆಲ್ಲರೂ ಓದಿದಂತೆ ಮಂಗನಿಂದ ಮಾನವನಾಗಿ ಪರಿವರ್ತನೆಯಾದ ಎಂದು ಕೇಳಿದ್ದೇವೆ. ಅದಕ್ಕೆ ಪುರಾವೆ ಎನ್ನುವಂತೆ ಇಲ್ಲೊಬ್ಬ ಮನುಷ್ಯ ಅಕ್ಷರಶಃ ಮಂಗನಂತೆ ಚಂಗನೆ ಒಂದು ಕೆಡೆಯಿಂದ ಮತ್ತೊಂದು ಕಡೆಗೆ ಹಾರುತ್ತಾ ಎತ್ತೆರತ್ತರದ ಯಾವುದೇ ಅಸರೆ ಇಲ್ಲದ ಬಂಡೆಗಳನ್ನು ಯಾವುದೇ ಅಥವಾ ಯಾರದ್ದೇ ಸಹಾಯವಿಲ್ಲದೇ ಏರುತ್ತಾ ಇಳಿಯುತ್ತಾ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸಾಧನೆಗಳನ್ನು ಮಾಡಿರುವ ಕೋತಿರಾಜ್ ಅಲಿಯಾಸ್ ಜ್ಯೋತಿರಾಜ್ ಅವರ ಬಗ್ಗೆ ನಾವಿಂದು ತಿಳಿಯೋಣ ಬನ್ನಿ. ಸಂದರ್ಶನವೊಂದರಲ್ಲಿ ಜ್ಯೋತಿರಾಜ್ ಅವರೇ ಹೇಳಿದಂತೆ ಅವರು ಮೂಲತಃ ತಮಿಳುನಾಡಿನವರು. 1988 ಆಗಸ್ಟ್ 15… Read More ಕೋತಿ ರಾಜ್ ಉರ್ಫ್ ಜ್ಯೋತಿರಾಜ್

ಕನ್ನಡದ ರಕ್ಷಣೆಯನ್ನು ಗುತ್ತಿಗೆ ನೀಡಿದ್ದೇವೆಯೇ?

ಪ್ರತೀ ವರ್ಷ ಅಕ್ಟೋಬರ್ ತಿಂಗಳಿನಲ್ಲಿ ಸಂಭ್ರಮದಿಂದ ನಾಡಹಬ್ಬದ ದಸರವನ್ನು ಆಚರಿಸಿದ ನಂತರ ಎಲ್ಲರ ಚಿತ್ತ ಮುಂದಿನ ತಿಂಗಳ ನವೆಂಬರ್-1 ನೇ ತಾರೀಖಿನತ್ತ ಎಂದರೂ ಅತಿಶಯೋಕ್ತಿಯೇನಲ್ಲ. ಸ್ವಾತ್ರಂತ್ರ್ಯಾ ನಂತರ 1956 ರ ನವೆಂಬರ್-1 ರಂದು, ಮದ್ರಾಸ್, ಮುಂಬಯಿ, ಹೈದರಾಬಾದ್ ಪ್ರಾಂತ್ಯಗಳಲ್ಲಿ ಹರಿದು ಹಂಚಿಹೋಗಿದ್ದ ಕನ್ನಡ ಮಾತನಾಡುವ ಪ್ರದೇಶಗಳನ್ನು ಒಗ್ಗೂಡಿಸಿ ಮೈಸೂರು ರಾಜ್ಯವನ್ನು ಮಾಡಲಾಯಿತು. ಆನಂತರ 1973 ನವೆಂಬರ್-1 ರಂದು ಮೈಸೂರು ರಾಜ್ಯವನ್ನು ಕನ್ನಡಿಗರು ಇರುವ ಕರುನಾಡು ಅರ್ಥಾತ್ ಕರ್ನಾಟಕ ಎಂದು ಹೆಸರಿಸಿದ ಸಂಭ್ರಮವೇ ನಾವೆಲ್ಲರೂ ಆಚರಿಸುವ ಕನ್ನಡ ರಾಜ್ಯೋತ್ಸವ… Read More ಕನ್ನಡದ ರಕ್ಷಣೆಯನ್ನು ಗುತ್ತಿಗೆ ನೀಡಿದ್ದೇವೆಯೇ?

ತಲಕಾವೇರಿ, ತೀರ್ಥೋಧ್ಭವ ಮತ್ತು ತುಲಾ ಸಂಕ್ರಮಣ

ನಾವು ಪ್ರತಿನಿತ್ಯವೂ ಸ್ನಾನ ಮಾಡುವಾಗ ಗಂಗೇಚ ಯಮುನೇ ಚೈವ ಗೋದಾವರಿ ಸರಸ್ವತೀ | ನರ್ಮದೇ ಸಿಂಧು ಕಾವೇರಿ ಜಲೇಸ್ಮಿನ್ ಸನ್ನಿಧಿಂ ಕುರು ಎಂದು ಹೇಳಿಕೊಂಡೇ ಸ್ನಾನ ಮಾಡುತ್ತೇವೆ. ಅಂದರೆ ನಮ್ಮ ಭಾರತೀಯ ಸಂಸ್ಕೃತಿಯಲ್ಲಿ ಏಳು ನದಿಗಳಾದ – ಗಂಗಾ, ಯಮುನಾ, ಗೋದಾವರಿ, ಸರಸ್ವತಿ, ನರ್ಮದಾ, ಸಿಂಧೂ, ಕಾವೇರಿ ನದಿಗಳು ಭಾರತೀಯರ ಪೂಜನೀಯ ಜಲಸಂಪತ್ತಾಗಿದೆ. ಅದರಲ್ಲೂ ದಕ್ಷಿಣ ಭಾರತ ಮತ್ತು ಕರ್ನಾಟಕಕ್ಕೆ ಈ ಕಾವೇರಿ ನದಿಯು ಜೀವ ನದಿಯಾಗಿರುವುದರಿಂದಲೇ ಅದನ್ನು ಕೇವಲ ನದಿ ಎಂದು ಭಾವಿಸದೇ, ಕಾವೇರಿ ತಾಯಿ… Read More ತಲಕಾವೇರಿ, ತೀರ್ಥೋಧ್ಭವ ಮತ್ತು ತುಲಾ ಸಂಕ್ರಮಣ

ಲಕ್ಷದ್ವೀಪ

ಕಳೆದ ವಾರ ಪ್ರಧಾನಿಗಳಾದ ಶ್ರೀ ನರೇಂದ್ರ ಮೋದಿಯವರು ತಮ್ಮ ಲಕ್ಷದ್ವೀಪ ಪ್ರವಾಸದ ಕುರಿತಾಗಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿದ್ದಂತೆಯೇ ಪ್ರಪಂಚಾದ್ಯಂತ ಪ್ರವಾಸೀತಾಣಗಳು ಅಲ್ಲೋಲಗೊಂಡಿರುವ ವಿಷಯ ಎಲ್ಲರಿಗೂ ತಿಳಿದೇ ಇದೆ.

ಲಕ್ಷದ್ವೀಪದ ಕುರಿತಾದ ಪ್ರಧಾನಿಗಳ ಪ್ರೇಮ ಕೇವಲ ನೆನ್ನೆಯ ಮೊನ್ನೆಯದ್ದಾಗಿರದೇ, ಸುಮಾರು ಮೂರ್ನಾಲ್ಕು ವರ್ಷಗಳ ಹಿಂದೆಯೇ ಈ ಕುರಿತಾಗಿ ತಮ್ಮ ದೂರದೃಷ್ಟಿತನದಿಂದ ಅಲ್ಲಿ ಮಾಡಿರುವ ಅಭಿವೃದ್ಧಿ ಕಾರ್ಯಗಳು ಹಾಗೂ, ಲಕ್ಷದ್ವೀಪದ ಕುರಿತಾದ ಅಪರೂಪದ ಮಾಹಿತಿಗಳು ಇದೋ ನಿಮಗಾಗಿ… Read More ಲಕ್ಷದ್ವೀಪ

ಭಾಷಾ ಭೂಷಣ

ಇತ್ತೀಚೆಗೆ ಟಿವಿಯಲ್ಲಿ ಪೌರಾಣಿಕ ಚಿತ್ರವೊಂದು ಪ್ರಸಾರವಾಗುತ್ತಿತ್ತು. ಪೌರಾಣಿಕ ಚಿತ್ರ ಎಂಬ ಕುತೂಹಲದಿಂದ ನೋಡಲು ಕುಳಿತುಕೊಂಡು ಕೊಂಡ ಅರ್ಧಗಂಟೆಗಳಲ್ಲಿಯೇ ಮನಸ್ಸಿಗೆ ನೋವಾಗಿ ನೋಡಲು ಅಸಹನೀಯವಾಯಿತು. ಅಕಾರ ಮತ್ತು ಹಕಾರದ ನಡುವಿನ ವ್ಯತ್ಯಾಸ ಅರಿಯದ, ಅವರ ಸಂಭಾಷಣೆಗೂ ಅವರ ಆಂಗಿಕ ಅಭಿನಯಕ್ಕೂ ಸಂಬಂಧವೇ ಇರದ, ಕನ್ನಡ ಭಾಷೆಯ ಮೇಲೆ ಸ್ವಲ್ಪವೂ ಹಿಡಿತವಿರದ ಅಪಾತ್ರರನ್ನೆಲ್ಲಾ ಪೌರಾಣಿಕ ಪಾತ್ರದಲ್ಲಿ ನೋಡುತ್ತಿದ್ದಾಗ, ಕನ್ನಡ ಕಸ್ತೂರಿ ಎನ್ನುವಂತಹ ಸೊಗಡಿರುವ ಭಾಷೆಯನ್ನು ಇಷ್ಟು ಕೆಟ್ಟದಾಗಿ ಕೊಲೆ ಮಾಡುತ್ತಿದ್ದಾರಲ್ಲಾ? ಎಂದೆನಿಸಿ ಕೂಡಲೇ ಅಭಿನಯ ಮತ್ತು ಭಾಷ ಶುದ್ಧತೆಯಲ್ಲಿ ಪರಿಪಕ್ವವಾಗಿದ್ದ… Read More ಭಾಷಾ ಭೂಷಣ