ಕರ್ನಾಟಕ ರಾಜಧಾನಿ ಬೆಂಗಳೂರಿನಲ್ಲಿ ಭುವನೇಶ್ವರಿಯೇ ಮಾಯ

ಅರೇ ಇದೇನಿದು? ಇಂತಹ ತರೆಬರಹ ಎಂದು ಯೋಚನೆ ಮಾಡುತ್ತಿದ್ದೀರಾ? ಪ್ರತ್ಯಕ್ಷವಾಗಿ ನೋಡಿದರೂ ಪ್ರಮಾಣಿಸಿ ನೋಡೂ.. ಎನ್ನುವಂತೇ ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಈ ಚಿತ್ರಗಳನ್ನು ಒಮ್ಮೆ ನೋಡಿ, ಮೈ ನಖಶಿಖಾಂತ ಉರಿಯದೇ ಹೋದ್ರೇ, ಆತ ನಿಜವಾದ ಕನ್ನಡಿಗನೇ ಅಲ್ಲ.. ನಮಗೆಲ್ಲಾ ಕನ್ನಡ ಅಂದ ತಕ್ಷಣ ನೆನಪಾಗೋದೇ ನಮ್ಮ ಹಳದಿ ಮತ್ತು ಕೆಂಪು ಬಾವುಟದ ಜೊತೆ ತಾಯಿ ಭುವನೇಶ್ವರಿ. ಅದರೆ ದುರಾದೃಷ್ಟವಷಾತ್ ಈ ಚಿತ್ರವನ್ನು ಸೂಕ್ಷ್ಮವಾಗಿ ಗಮನಿಸಿದಲ್ಲಿ ಕನ್ನಡ ರಾಜ್ಯೋತ್ಸವದ ಆಚರಣೆಯ ಆ ಫಲಕದಲ್ಲಿ ಕನ್ನಡಾಂಬೆಯ ಸ್ಥಾನದಲ್ಲಿ… Read More ಕರ್ನಾಟಕ ರಾಜಧಾನಿ ಬೆಂಗಳೂರಿನಲ್ಲಿ ಭುವನೇಶ್ವರಿಯೇ ಮಾಯ

ಶ್ರೀ ವೀರೇಂದ್ರ ಹೆಗ್ಗಡೆ

ನಾವು ಚಿಕ್ಕವರಿದ್ದಾಗ ಪುರಾಣ ಪುಣ್ಯಕಥೆಗಳಲ್ಲಿ ರಾಜರ್ಷಿ ಎಂದರೆ ಸದಾಕಾಲವು ಧರ್ಮಾತ್ಮನಾಗಿದ್ದು, ಲೋಕ ಕಲ್ಯಾಣಕ್ಕಾಗಿ ವಿವಿಧ ರೀತಿಯ ಸಮಾಜಮುಖೀ ಸೇವೆಗಳಲ್ಲಿ ನಿರತರಾಗಿರುವುದಲ್ಲದೇ, ಜನರು ತಮ್ಮ ಸಂಕಷ್ಟಗಳನ್ನೋ ಇಲ್ಲವೇ ವ್ಯಾಜ್ಯಗಳೊಂದಿಗೆ ಬಂದಾಗ ಅವರಿಗೆ ಸೂಕ್ತ ಪರಿಹಾರವನ್ನು ನೀಡುವವರಾಗಿರುತ್ತಾರೆ ಎಂದು ಕೇಳಿಯೋ ಇಲ್ಲವೇ ಓದಿ ತಿಳಿದಿದ್ದೇವೆ. ಈ ಕಲಿಯುಗದಲ್ಲಿಯೂ ಅಂತಹ ರಾಜರ್ಷಿಯವರು ಇದ್ದಾರೆಯೇ ಎಂದು ಯೋಚಿಸುತ್ತಿದ್ದಲ್ಲಿ, ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಶ್ರೀ ವೀರೆಂದ್ರ ಹೆಗ್ಗಡೆಯವರ ಯಶೋಗಾಥೆಯನ್ನು ನೋಡಿದಲ್ಲಿ ನಮ್ಮ ಆ ಎಲ್ಲಾ ಕುತೂಹಲವನ್ನು ತಣಿಸುತ್ತದೆ. ದಕ್ಷಿಣ ಕನ್ನಡದ ಜೀವನದಿ ನೇತ್ರಾವತಿಯ ತಟದಲ್ಲಿರುವ ಪುರಾಣ… Read More ಶ್ರೀ ವೀರೇಂದ್ರ ಹೆಗ್ಗಡೆ

ಹಾಸ್ಯ ಚಕ್ರವರ್ತಿ ನರಸಿಂಹರಾಜು

ಕೆಲ ವರ್ಷಗಳ ಹಿಂದೆ ಸುಧಾ ನರಸಿಂಹರಾಜು ಅವರು ದೂರದರ್ಶನದಲ್ಲಿ ನಡೆಸಿಕೊಡುತ್ತಿದ್ದ ಸಂದರ್ಶನದಲ್ಲಿ ಭಾಗವಹಿಸಿದ್ದ ವರನಟ ರಾಜ್ ಕುಮಾರ್ ಅವರು ಅರವತ್ತು ಮತ್ತು ಎಪ್ಪತ್ತರ ದಿನಗಳಲ್ಲಿ ಬಹಳ ಉತ್ತಂಗದ ಶಿಖರವೇರಿದ್ದರೂ, ಅಂದಿನ ದಿನದಲ್ಲಿ ನಿರ್ಮಾಪಕ ನಿರ್ದೇಶಕರು, ತಮ್ಮ ಚಲನಚಿತ್ರಗಳಿಗೆ ಮೊದಲು ಆ ಹಾಸ್ಯ ನಟನ ಕಾಲ್ ಶೀಟ್ ಇದೆಯೇ ಎಂದು ನಿಗಧಿಪಡಿಸಿಕೊಂಡು ನಂತರ ನಾಯಕ, ನಾಯಕಿ ಮತ್ತು ಉಳಿದ ಸಹಕಲಾವಿದರನ್ನು ಸಂಪರ್ಕಿಸುತ್ತಿದ್ದರು ಎಂದು ಹೇಳಿದರು ಎಂದರೆ ಆ ಹಾಸ್ಯ ನಟ ಎಂತಹ ಮಹಾನ್ ನಟನಿರಬೇಕು ಎಂಬುದು ತಿಳಿಯುತ್ತದೆ. ಈ… Read More ಹಾಸ್ಯ ಚಕ್ರವರ್ತಿ ನರಸಿಂಹರಾಜು

ಕೊಹಿನೂರು ವಜ್ರ ನಮ್ಮ ಕರ್ನಾಟಕದ ಸ್ವತ್ತು 

ಅರೇ 105.6 ಕ್ಯಾರೆಟ್ ತೂಕದ  ಪ್ರಸ್ತುತ 350 ಮಿಲಿಯನ್ ಯುಎಸ್ ಡಾಲರ್ ಅಂದರೆ 23,28,95,07,500 ರೂ. ಬೆಲೆ ಬಾಳುವಂತಹ ಲಂಡನ್ ಗೋಪುರದ ಜ್ಯುವೆಲ್ಹೌಸ್‌ನಲ್ಲಿ 1911 ರಲ್ಲಿ ಕ್ವೀನ್ ಮೇರಿಯ ಕಿರೀಟದದ ಮೂಲಕ ಸಾರ್ವಜನಿಕ ಪ್ರದರ್ಶನಕ್ಕೆ ಇಡಲಾಗಿರುವ ಆ ಕೋಹಿನೂರ್ ವಜ್ರವೆಲ್ಲಿ ನಮ್ಮ ಕರ್ನಾಟಕವೆಲ್ಲಿ?  ಅಲ್ಲಿಗೂ ಇಲ್ಲಿಗೂ ಎಲ್ಲಿಯ ಬಾದರಾಯಣ ಸಂಬಂಧ? ಸ್ವಲ್ಪ ಉಸಿರು ಬಿಗಿ ಮಾಡಿಕೊಂಡು ಇದನ್ನು ಕೇಳ್ತಾ/ಈ ಲೇಖನ ಓದುತ್ತಾ ಹೋದಂತೆಲ್ಲಾ ನಿಮಗೇ ಅರ್ಥವಾಗುತ್ತದೆ. ಆರ್ಟಿಐ ಕಾರ್ಯಕರ್ತ ಶ್ರೀ ರೋಹಿತ್ ಸಬರ್ ವಾಲ್ ಅವರು ಮಾಹಿತಿ ಹಕ್ಕು… Read More ಕೊಹಿನೂರು ವಜ್ರ ನಮ್ಮ ಕರ್ನಾಟಕದ ಸ್ವತ್ತು 

ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ

ಏಳು ಕೋಟಿ ಕನ್ನಡಿಗರು ಇರುವ ಈ ಕರ್ನಾಟಕದ ಕನ್ನಡ ಪರ ಹೋರಾಟಗಾರರು ಪರಸ್ಪರ ನಂಬಿಕೆ, ವಿಶ್ವಾಸ ಮತ್ತು ಹೊಂದಾಣಿಕೆಗಳೇ ಇಲ್ಲದೇ, ತಮ್ಮ ತಮ್ಮ ಅಹಂ ಮತ್ತು ಅಸ್ತಿತ್ವಕ್ಕಾಗಿ ಪದೇ ಪದೇ ಕರ್ನಾಟಕ ಬಂದ್ ಕರೆ ನೀಡುವುದು ಎಷ್ಟು ಸರಿ? ಈ ರೀತಿಯ ಬಂದ್ ನಿಂದ ಸಾಧಿಸುವುದಾದರೂ ಏನು?… Read More ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ

ಕೆಚ್ಚೆದೆಯ ಹಾಕಿ ಪಟು ಎಂ. ಪಿ. ಗಣೇಶ್

ಯಾವುದೇ ಒಂದು ಕ್ರೀಡೆಯಲ್ಲಿ ಅಂತರಾಷ್ಟ್ರೀಯ ಮಟ್ಟವನ್ನು ತಲುಪುದು ಎಷ್ಟು ಕಷ್ಟ ಎಂದು ಕ್ರೀಡಾಪಟು ಆಗಿದ್ದವರಿಗೆ ತಿಳಿಯುತ್ತದೆ ಇಲ್ಲವೇ ಕ್ರೀಡಾಸಕ್ತರಿಗೆ ತಿಳಿದಿರುತ್ತದೆ. ಇಲ್ಲೊಬ್ಬರು ಎರಡೆರಡು ಕ್ರೀಡೆಗಳಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರತಿನಿಧಿಸಿ, ಮತ್ತೊಂದು ಕ್ರೀಡೆಯ ಆಡಳಿತಾಧಿಕಾರಿಯಾಗಿ ನಮ್ಮ ರಾಜ್ಯಕ್ಕೆ ಹೆಮ್ಮೆ ತಂದ ವೀರ ಸೇನಾನಿ, ಕೆಚ್ಚೆದೆಯ ಆಟಗಾರ, ಛಲವಂತ ನಾಯಕ, ಅತ್ಯುತ್ತಮ ತರಭೇತಿದಾರ ಮತ್ತು ಸಮರ್ಥ ಕ್ರೀಡಾ ಆಡಳಿತಗಾರರಾಗಿದ್ದ ಹಾಕಿ ಆಟಗಾರ ಶ್ರೀ ಎಂ ಪಿ ಗಣೇಶ್ ಆವರ ಬಗ್ಗೆ ತಿಳಿದುಕೊಳ್ಳೋಣ. ಕೊಡಗು ಜಿಲ್ಲೆಯ ಮಡಿಕೇರಿಯ ಸುಂಟಿಕೊಪ್ಪದ ಬಳಿಯ ಅಂದಗೋವೆ… Read More ಕೆಚ್ಚೆದೆಯ ಹಾಕಿ ಪಟು ಎಂ. ಪಿ. ಗಣೇಶ್

ಶ್ರೀ ಆಲೂರು ವೆಂಕಟರಾಯರು

ವಕೀಲರಾಗಿ, ಸಾಹಿತಿಗಳಾಗಿ, ಪತ್ರಿಕಾ ಸಂಪಾದಕರಾಗಿ, ಪ್ರಕಾಶಕರಾಗಿ, ಅನೇಕ ಸಂಘ ಸಂಸ್ಥೆಗಳ ಸಂಸ್ಕಾಪಕರಾಗಿ, ಸಂಘಟಿಕರಾಗಿ, ಸಂಶೋಧಕರಾಗಿ, ಸ್ವಾತಂತ್ಯ್ರ ಹೋರಾಟಗಾರರಾಗಿ ಒಟ್ಟಿನಲ್ಲಿ *ಆಡು ಮುಟ್ಟದ ಸೊಪ್ಪಿಲ್ಲ ಆಲೂರು ವೆಂಟರಾಯರು* ಮಾಡದ ಕೆಲಸವಿಲ್ಲ ಎಂಬಂತೆ ಕರ್ನಾಟಕದ ಏಕೀಕರಣಕ್ಕೆ ಅಹಿರ್ನಿಶಿಯಾಗಿ ದುಡಿದ ಕನ್ನಡದ ಕುಲಪುರೋಹಿತರ ಜಯಂತಿಯಂದು ಅವರನ್ನು ನೆನಪಿಸಿಕೊಳ್ಳುವುದು ಪ್ರತಿಯೊಬ್ಬ ಕನ್ನಡಿಗರ ಆದ್ಯ ಕರ್ತವ್ಯವೇ ಸರಿ… Read More ಶ್ರೀ ಆಲೂರು ವೆಂಕಟರಾಯರು

ಶ್ರೀ ಕೌಂಡಿನ್ಯ ಮಹರ್ಷಿ ಕ್ಷೇತ್ರ, ಸಂತಾನ ವೇಣುಗೋಪಾಲಸ್ವಾಮಿ, ಹೆಮ್ಮರಗಾಲ

ನಂಜನಗೂಡು ಮತ್ತು ಚಾಮರಾಜ ನಗರದ ಮಧ್ಯೆ ಇರುವ ಬದವನವಾಳು ಗ್ರಾಮದಿಂದ ಕೇವಲ 5 ಕಿಮೀ ದೂರದಲ್ಲಿರುವ ಪುರಾಣ ಪ್ರಸಿದ್ಧವಾದ ಹೆಮ್ಮರಗಾಲದ ಸ್ಥಳ ಪುರಾಣ ಮತ್ತು ಅಲ್ಲಿನ ಶ್ರೀ ಸಂತಾನ ವೇಣುಗೋಪಾಲಸ್ವಾಮಿಯ ವೈಶಿಷ್ಟ್ಯತೆಗಳು ಮತ್ತು ಸ್ವಾಮಿಯ ಪವಾಡಗಳನ್ನು ನಮ್ಮ ದೇಗುಲ ದರ್ಶನ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ.… Read More ಶ್ರೀ ಕೌಂಡಿನ್ಯ ಮಹರ್ಷಿ ಕ್ಷೇತ್ರ, ಸಂತಾನ ವೇಣುಗೋಪಾಲಸ್ವಾಮಿ, ಹೆಮ್ಮರಗಾಲ

ಉಚಿತ ಆಮಿಷಗಳು ಮತ್ತು ದೇಶದ ಆರ್ಥಿಕತೆ

ಚುನಾವಣೆಯಲ್ಲಿ ನಾವುಗಳು ಮಾಡುವುದು ಮತದಾನ. ದಾನ ಮಾಡುವ ಕೈಗಳು ಅರ್ಥಾತ್ ಕೊಡುವ ಕೈಗಳು ಎಂದಿಗೂ ಮೇಲೆ ಇರುತ್ತವೆಯೇ ಹೊರತು, ಬೇಡುವ ರೀತಿಯಲ್ಲಿ ಇರುವುವುದಿಲ್ಲ. ಹಾಗಾಗಿ ಚುನಾವಣಾ ಸಮಯದಲ್ಲಿ ರಾಜಕೀಯ ಪಕ್ಷಗಳು ನೀಡುವ ಹಣ, ಹೆಂಡ ಮತ್ತು ಗೃಹೋಪಯೋಗಿ ವಸ್ತುಗಳ ಉಚಿತ ಆಮೀಷಗಳಿಗೆ ಬಲಿಯಾಗಿ ದೇಶದ ಆರ್ಥಿಕತೆಯನ್ನು ಅಧೋಗತಿಗೆ ತಳ್ಳದೇ, ಸ್ವಾಭಿಮಾನಿಗಳಾಗಿ, ಸ್ವಾವಲಂಭಿಗಳಾಗಿ, ನಮ್ಮ ರಾಜ್ಯದ ಒಳಿತಿಗಾಗಿ ಮೇ 10ರಂದು ನಿರ್ಭೆಡೆಯಿಂದ ತಪ್ಪದೇ ಮತದಾನ ಮಾಡೋಣ ಅಲ್ವೇ?… Read More ಉಚಿತ ಆಮಿಷಗಳು ಮತ್ತು ದೇಶದ ಆರ್ಥಿಕತೆ