ಭಾರತ ರತ್ನ ಉಸ್ತಾದ್ ಬಿಸ್ಮಿಲ್ಲಾ ಖಾನ್

ಸನಾದಿ ಅಪ್ಪಣ್ಣ ಚಿತ್ರದ ಮೂಲಕ ಕನ್ನಡಿಗರಿಗೆ ಪರಿಚಿತರಾಗಿದ್ದಂತಹ ಹಿಂದೂಸ್ಥಾನಿ ಸಂಗೀತ ಶೈಲಿಯ ಶಹನಾಯಿ ಮಾಂತ್ರಿಕ ಉಸ್ತಾದ್ ಬಿಸ್ಮಿಲ್ಲಾ ಖಾನ್ ಅವರ ಜಯಂತಿಯಂದು ಅವರಿಗೂ ಮತ್ತು ಭಗವಾನ್ ಶ್ರೀಕೃಷ್ಣನ ನಡುವೆ ಇದ್ದ ಅವಿನಾಭಾವ ಸಂಬಂಧ ಮತ್ತು ಅವರ ವ್ಯಕ್ತಿ ವ್ಯಕ್ತಿತ್ವ ಮತ್ತು ಸಾಧನೆಗಳ ಕುರಿತಾದ ಅಪರೂಪದ ಮಾಹಿತಿಗಳು ಇದೋ ನಿಮಗಾಗಿ… Read More ಭಾರತ ರತ್ನ ಉಸ್ತಾದ್ ಬಿಸ್ಮಿಲ್ಲಾ ಖಾನ್

ಕಾಶಿಯ ವಾಲಿರುವ ರತ್ನೇಶ್ವರ ದೇವಾಲಯ

ಇಟಲಿಯ ಟಸ್ಕನಿ ಪ್ರದೇಶದ ಒಂದು ನಗರವಾದ ಪಿಸಾ ಇಂದು ಜಗತ್ಪ್ರಸಿದ್ದವಾಗಿದೆ. ಆ ನಗರ ಹಾಗೆ ಪ್ರಸಿದ್ಧವಾಗಲು ಅಲ್ಲಿರುವ ಓರೆಯಾಗಿರುವ ಗೋಪುರವೊಂದು ಕಾರಣವಾಗಿದ್ದು ಅದು ಪ್ರಪಂಚದ ಏಳು ಅದ್ಭುತಗಳಲ್ಲಿ  ಒಂದಾಗಿದೆ.  ಆಗಸ್ಟ್‌ 9, 1173 ರಲ್ಲಿ ಆ ಪ್ರದೇಶದಲ್ಲಿ  ಎತ್ತರವಾದ ಒಂದು ಗೋಪುರವನ್ನು ನಿರ್ಮಿಸಿ  ಅದರ ಮೇಲೊಂದು ದೊಡ್ಡ ಘಂಟೆಯನ್ನು ಇಡಬೇಕೆಂದು ನಿರ್ಧರಿಸಲಾಗಿತ್ತು. ಅದರೆ 1778ರಲ್ಲಿ ಮೂರು ಅಂತಸ್ತಿನ ಕೆಲಸ ಮುಗಿಯುತ್ತಿದ್ದಾಗ, ಇದ್ದಕ್ಕಿದ್ದಂತೆಯೇ ಈ ಕಟ್ಟಡ ಒಂದು ಕಡೆಗೆ ಸ್ವಲ್ಪ ವಾಲಿದ್ದನ್ನು ಕಂಡ ಅಲ್ಲಿನ ಜನ ಈ ಕಟ್ಟಡ… Read More ಕಾಶಿಯ ವಾಲಿರುವ ರತ್ನೇಶ್ವರ ದೇವಾಲಯ

ಪಂಢರಾಪುರದ ಶ್ರೀ ಪಾಂಡುರಂಗ ವಿಠ್ಠಲ

ಪ್ರಬೋಧಿನಿ ಏಕಾದಶಿಯಿಂದ ಕಾರ್ತಿಕ ಪೌರ್ಣಿಮೆಯವರೆಗೂ ಮಹಾರಾಷ್ಟ್ರದ ಪಂಡರಾಪುರದಲ್ಲಿ ಐದು ದಿನಗಳ ಕಾಲ ನಡೆಯುವ ದ್ರುಕ್ಮಿಣೀ ಮತ್ತು ಪಾಂಡುರಂಗನ ಯಾತ್ರೆಯ ಹಿಂದಿರುವ ಪೌರಾಣಿಕ ಹಿನ್ನಲೆ ಮತ್ತು ಲಕ್ಷಾಂತರ ಯಾತ್ರಾರ್ತಿಗಳ ವಾರಕರಿ ಸೇವೆಯ ಸಮಗ್ರ ಚಿತ್ರಣ ಇದೋ ನಿಮಗಾಗಿ … Read More ಪಂಢರಾಪುರದ ಶ್ರೀ ಪಾಂಡುರಂಗ ವಿಠ್ಠಲ

ನ್ಯಾಯ ದೇವತೆಯೂ ಏಕಪಕ್ಷೀಯಳೇ?

ಕೆಲವು ಕ್ಷಣಗಳ ಹಿಂದೆ ಹೀಗೆ ಸಾಮಾಜಿಕ ಜಾಲತಾಣದಲ್ಲಿ ವಿಷಯವನ್ನು ಓದುತ್ತಿದ್ದಾಗ, ಇಂದು ಬೆಳಿಗ್ಗೆ, ಪ್ರವಾದಿ ಮೊಹಮ್ಮದ್ ಪೈಗಂಬರ್ ಬಗ್ಗೆ ಅವಹೇಳನಕಾರಿ ಹೇಳಿದ್ದಕ್ಕೆ ಅಮಾನತುಗೊಂಡಿರುವ ಬಿಜೆಪಿ ನಾಯಕಿ ನೂಪುರ್ ಶರ್ಮಾ (Nupur Sharma) ಅವರನ್ನು ತರಾಟೆಗೆ ತೆಗೆದುಕೊಂಡಿದೆಯಲ್ಲದೇ, ಪ್ರವಾದಿಗಳ ವಿರುದ್ಧ ಹೇಳಿಕೆ ನೀಡಿ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದ್ದಕ್ಕೆ ಅವರು ಇಡೀ ದೇಶದ ಕ್ಷಮೆಯಾಚಿಸಬೇಕು ಎಂದು ಸುಪ್ರೀಂ ಕೋರ್ಟ್ ಅದೇಶಿಸಿರುವ ವಿಷಯ ನಿಜಕ್ಕೂ ಆಘಾತಕರಿ ಎನಿಸಿದೆ. ಭಾರತ ದೇಶದ ಪ್ರಜ್ಞಾವಂತನಾಗಿ ದೇಶದ ಸಂವಿಧಾನ, ಕಾನೂನು ಮತ್ತು ಸರ್ವೋಚ್ಚ ನ್ಯಾಯಾಲಯದ… Read More ನ್ಯಾಯ ದೇವತೆಯೂ ಏಕಪಕ್ಷೀಯಳೇ?

ಕಾಶೀ ಶ್ರೀ ವಿಶ್ವನಾಥ

ನಮ್ಮ ಭಾರತ ದೇಶದ ಅತ್ಯಂತ ದೊಡ್ಡ ರಾಜ್ಯವಾದ ಉತ್ತರ ಪ್ರದೇಶದ ಕಾಶಿ, ವಾರಣಾಸಿ, ಬನಾರಸ್ ಎಂಬೆಲ್ಲಾ ಹೆಸರುಗಳಿಂದ ಕರೆಸಿಕೊಳ್ಳುವ ಈ ಶ್ರೀಕ್ಷೇತ್ರ ಹಿಂದೂಗಳ ಆಧ್ಯಾತ್ಮ ಕೇಂದ್ರವಲ್ಲದೇ ಮೋಕ್ಷದ ಹಾದಿಯೂ ಆಗಿದೆ. ಕಾಶಿಗೆ ಹೋಗಿ ಬಂದವರಿಗೆ ಮೋಕ್ಷ ಸಿಗುವುದಲ್ಲದೇ ಕಾಶೀಯಲ್ಲಿ ದೇಹತ್ಯಾಗ ಮಾಡುವರಿಗೆ ಶಾಶ್ವತವಾದ ಸದ್ಗತಿ ದೊರೆಯುತ್ತದೆ ಎಂಬ ನಂಬಿಕೆ ಇದೆ. ಗಂಗಾನದಿಯ ತಟದಲ್ಲಿ ೬೪ ಘಾಟ್ ಗಳಿರುವ ಈ ಶ್ರೀಕ್ಷೇತ್ರದಲ್ಲಿ ವಿಶ್ವಪ್ರಸಿದ್ಧ ಕಾಶಿ ವಿಶ್ವನಾಥ ದೇವಾಲಯವಿದ್ದು ಶಿವರಾತ್ರಿಯ ಈ ಪವಿತ್ರದಿನದಂದು ಶ್ರೀಕ್ಷೇತ್ರದ ದರ್ಶನವನ್ನು ಪಡೆಯೋಣ ಬನ್ನಿ. ಕಾಶಿಯ… Read More ಕಾಶೀ ಶ್ರೀ ವಿಶ್ವನಾಥ

ಊನಕೋಟಿ

ನಮ್ಮ ಸನಾತನ ಧರ್ಮದಲ್ಲಿ ಅನೇಕ ಪುರಾಣ ಪುಣ್ಯಕಥೆಗಳಿದ್ದು ಅವೆಲ್ಲವೂ ಭಾರತದಲ್ಲಿ ಸಾವಿರಾರು ವರ್ಷಗಳ ಹಿಂದೆ ನಡೆದದ್ದು ಎಂದು ನಂಬಿದರೆ, ಇನ್ನೂ ಅನೇಕರು ಅದು ಕೇವಲ ಕಾಲ್ಪನಿಕ ಕಟ್ಟು ಕಥೆ ಎಂದು ವಾದ ಮಾಡುವವರೂ ಇದ್ದಾರೆ. ಹಾಗೆ ವಾದ ಮಾಡುವವರಿಗೆ ಉತ್ತರಿಸುವಂತೆ ಆ ಪುರಾಣ ಕಥೆಗಳಲ್ಲಿ ಉಲ್ಲೇಖವಿರುವ ಬಹುತೇಕ ನದಿಗಳು, ನಗರಗಳು ಭಾರತಾದ್ಯಂತ ಹರಡಿಕೊಂಡಿದ್ದು ಈ ಪುರಾಣ ಕಥೆಗಳಿಗೆ ಪೂರಕವಾಗಿದೆ. ಪುರಾಣ ಕಥೆಯಲ್ಲಿ ಬರುವ ಇಂತಹದ್ದೇ ಒಂದು ದಂತಕತೆಗೆ ಜ್ವಲಂತ ಉದಾಹರಣೆಯಾಗಿ ತ್ರಿಪುರದ ಕಾಡುಗಳಲ್ಲಿ ಗೋಚರವಾಗಿರುವ, ಕಾಲ ಭೈರವನ… Read More ಊನಕೋಟಿ

ಕಾಶಿಗೆ ಹೋದಾಗ, ಇಷ್ಟವಾದದ್ದನ್ನು ಏಕೆ ಬಿಟ್ಟು ಬರಬೇಕು?

ಸನಾತನ ಧರ್ಮದಲ್ಲಿ ದೇಶಾದ್ಯಂತ ಇರುವ ತೀರ್ಥಕ್ಷೇತ್ರಗಳಿಗೆ ಹೋಗುವ ಮುಖಾಂತರ ಹಿಂದೂಗಳ ಭಾವೈಕ್ಯತೆ ಸೌಹಾರ್ದತೆಯೊಂದಿಗೆ, ನಾವೆಲ್ಲರೂ ಒಂದು ಎಂದು ಸಾರುವ ಸತ್ ಸಂಪ್ರದಾಯವನ್ನು ಸಾವಿರಾರು ವರ್ಷಗಳ ಹಿಂದಿನಿಂದಲೂ ಅನೂಚಾನವಾಗಿ ನಡೆಸಿಕೊಂಡು ಬಂದಿದ್ದಾರೆ. ಹಾಗಾಗಿಯೇ ಪ್ರತಿಯೊಬ್ಬ ಹಿಂದೂವೂ ಸಹಾ ತನ್ನ ಜೀವಿತಾವಧಿಯಲ್ಲಿ ಒಮ್ಮೆಯಾದರೂ ಈ ತೀರ್ಥಕ್ಷೇತ್ರಗಳಿಗೆ ಭೇಟಿ ನೀಡಿಯೇ ತೀರುತ್ತಾರೆ. ಅಂತಹ ತೀರ್ಥಕ್ಷೇತ್ರಗಳಲ್ಲಿ ವಾರಣಾಸಿ ಅಥವಾ ಕಾಶಿ ಪ್ರಮುಖವಾಗಿದೆ. ಕಾಶೀಯಲ್ಲಿ ಹರಿಯುವ ಗಂಗಾ ನದಿಯ 64 ಘಾಟ್ ಗಳಲ್ಲಿ ಪುಣ್ಯ ಸ್ನಾನ ಮಾಡಿ ಶ್ರೀ ಕಾಶೀ ವಿಶ್ವನಾಥ ಮತ್ತು ಶ್ರೀ… Read More ಕಾಶಿಗೆ ಹೋದಾಗ, ಇಷ್ಟವಾದದ್ದನ್ನು ಏಕೆ ಬಿಟ್ಟು ಬರಬೇಕು?