ಕಾಫಿ ಪುಡಿ ಸಾಕಮ್ಮ

ತಮ್ಮ 16ನೇ ವಯಸ್ಸಿನಲ್ಲೇ ಮದುವೆಯಾಗಿ 18ನೇ ವಯಸ್ಸಿನಲ್ಲಿ ವಿಧವೆಯಾದರೂ, ಬೆಂಗಳೂರಿನಲ್ಲಿ ಪ್ರಥಮ ಬಾರಿಗೆ ಕಾಫೀ ಕ್ಯೂರಿಂಗ್ ಮತ್ತು ಕಾಫೀ ವಕ್ಸ್ ಆರಂಭಿಸಿ ಕರ್ನಾಟಕದ ಪ್ರಥಮ ಮಹಿಳಾ ಉದ್ಯಮಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಲ್ಲದೇ, ಅಂದಿನ ಕಾಲಕ್ಕೆ ಬ್ರಿಟನ್ನಿಗೆ ಕಾಫಿ ರಫ್ತು ಮಾಡುತ್ತಿದ್ದ ಕಾಫಿ ಪುಡಿ ಸಾಕಮ್ಮನವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯವನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಕಾಫಿ ಪುಡಿ ಸಾಕಮ್ಮ

ಕೊಡವರ ಕೈಲ್ ಪೋಳ್ದ್ ಹಬ್ಬ

ಕರ್ನಾಟಕದ ಕೆಚ್ಚೆದೆಯ ವೀರ ಕೊಡವರಿಗೆ ಕೈಲ್ ಪೋಳ್ದ್ ಹಬ್ಬದ ಶುಭಾಶಯಗಳನ್ನು ತಿಳಿಸುವುದರೊಂದಿಗೆ, ಕೊಡಗು, ಕೊಡವರ ಇತಿಹಾಸ, ಭಾರತೀಯ ಸೇನೆ ಮತ್ತು ಕ್ರೀಡಾರಂಗಕ್ಕೆ ಕೊಡವರ ಕಾಣಿಕೆಗಳ ಜೊತೆಯಲ್ಲಿ, ಅತ್ಯಂತ ವೈಶಿಷ್ಟ್ಯವಾಗಿ ಅಚರಿಸಲ್ಪಡುವ ಅವರ ಹಬ್ಬಗಳು ಅದರಲ್ಲೂ ವಿಶೇಶವಾಗಿ ಕೈಲ್ ಪೋಳ್ದ್ ಹಬ್ಬದ ಕುರಿತಾದ ಸಂಪೂರ್ಣ ಮಾಹಿತಿ ಇದೋ ನಿಮಗಾಗಿ… Read More ಕೊಡವರ ಕೈಲ್ ಪೋಳ್ದ್ ಹಬ್ಬ

ತಲಕಾವೇರಿ, ತೀರ್ಥೋಧ್ಭವ ಮತ್ತು ತುಲಾ ಸಂಕ್ರಮಣ

ನಾವು ಪ್ರತಿನಿತ್ಯವೂ ಸ್ನಾನ ಮಾಡುವಾಗ ಗಂಗೇಚ ಯಮುನೇ ಚೈವ ಗೋದಾವರಿ ಸರಸ್ವತೀ | ನರ್ಮದೇ ಸಿಂಧು ಕಾವೇರಿ ಜಲೇಸ್ಮಿನ್ ಸನ್ನಿಧಿಂ ಕುರು ಎಂದು ಹೇಳಿಕೊಂಡೇ ಸ್ನಾನ ಮಾಡುತ್ತೇವೆ. ಅಂದರೆ ನಮ್ಮ ಭಾರತೀಯ ಸಂಸ್ಕೃತಿಯಲ್ಲಿ ಏಳು ನದಿಗಳಾದ – ಗಂಗಾ, ಯಮುನಾ, ಗೋದಾವರಿ, ಸರಸ್ವತಿ, ನರ್ಮದಾ, ಸಿಂಧೂ, ಕಾವೇರಿ ನದಿಗಳು ಭಾರತೀಯರ ಪೂಜನೀಯ ಜಲಸಂಪತ್ತಾಗಿದೆ. ಅದರಲ್ಲೂ ದಕ್ಷಿಣ ಭಾರತ ಮತ್ತು ಕರ್ನಾಟಕಕ್ಕೆ ಈ ಕಾವೇರಿ ನದಿಯು ಜೀವ ನದಿಯಾಗಿರುವುದರಿಂದಲೇ ಅದನ್ನು ಕೇವಲ ನದಿ ಎಂದು ಭಾವಿಸದೇ, ಕಾವೇರಿ ತಾಯಿ… Read More ತಲಕಾವೇರಿ, ತೀರ್ಥೋಧ್ಭವ ಮತ್ತು ತುಲಾ ಸಂಕ್ರಮಣ

ನೀಲಿಕುರುಂಜಿ, ಮಂದಲ ಪಟ್ಟಿ

ನಮ್ಮವರಿಗೆ ವಾರಾಂತ್ಯದ ಹಿಂದೆಯೋ ಮುಂದೆಯೋ ಒಂದು ರಜಾ ಸಿಕ್ಕರೇ ಸಾಕು ಅದರ ಜೊತೆಗೆ ಮತ್ತೆರಡು ರಜಗಳನ್ನು ಹಾಕಿಕೊಂಡು ಊರು ಸುತ್ತಲು ಹೊರಟೇ ಬಿಡುತ್ತಾರೆ. ದುರದೃಷ್ಟವಷಾತ್ ಕಳೆದ ಒಂದೂವರೆ ವರ್ಷದಿಂದ ಕೊರೋನಾ ವಕ್ಕರಿಸಿಕೊಂಡು ಪ್ರಪಂಚವೇ ಲಾಕ್ ಡೌನ್ ಆಗಿರುವಾಗ ಎಲ್ಲರೂ ಮನೆಯಲ್ಲಿಯೇ ಕುಳಿತುಕೊಂಡು ಬೇಸರಗೊಂಡವರ ಮನವನ್ನು ಮುದಗೊಳಿಸುವ ಸಲುವಾಗಿ ಪಶ್ಚಿಮ ಘಟ್ಟದ ಭಾಗವಾದ ಕೊಡಗು ಜಿಲ್ಲೆಯ ​​ಮಂದಲಪಟ್ಟಿ ಬೆಟ್ಟಗಳಲ್ಲಿ ಸ್ವರ್ಗವೇ ಧರೆಗೆ ಇಳಿದು ಬಂದಂತೆ ಪ್ರಕೃತಿಯೇ ತನ್ನ ಸೌಂದರ್ಯವನ್ನು ನೀಲಿಕುರಿಂಜಿ ಹೂವುಗಳನ್ನು ಅರಳಿಸಿಕೊಳ್ಳುವ ಮೂಲಕ ಕೇವಲ ಇಮ್ಮಡಿಯಲ್ಲಾ ನೂರ್ಮಡಿಯನ್ನಾಗಿಸಿಕೊಂಡು… Read More ನೀಲಿಕುರುಂಜಿ, ಮಂದಲ ಪಟ್ಟಿ

ಕೆಚ್ಚೆದೆಯ ಹಾಕಿ ಪಟು ಎಂ. ಪಿ. ಗಣೇಶ್

ಯಾವುದೇ ಒಂದು ಕ್ರೀಡೆಯಲ್ಲಿ ಅಂತರಾಷ್ಟ್ರೀಯ ಮಟ್ಟವನ್ನು ತಲುಪುದು ಎಷ್ಟು ಕಷ್ಟ ಎಂದು ಕ್ರೀಡಾಪಟು ಆಗಿದ್ದವರಿಗೆ ತಿಳಿಯುತ್ತದೆ ಇಲ್ಲವೇ ಕ್ರೀಡಾಸಕ್ತರಿಗೆ ತಿಳಿದಿರುತ್ತದೆ. ಇಲ್ಲೊಬ್ಬರು ಎರಡೆರಡು ಕ್ರೀಡೆಗಳಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರತಿನಿಧಿಸಿ, ಮತ್ತೊಂದು ಕ್ರೀಡೆಯ ಆಡಳಿತಾಧಿಕಾರಿಯಾಗಿ ನಮ್ಮ ರಾಜ್ಯಕ್ಕೆ ಹೆಮ್ಮೆ ತಂದ ವೀರ ಸೇನಾನಿ, ಕೆಚ್ಚೆದೆಯ ಆಟಗಾರ, ಛಲವಂತ ನಾಯಕ, ಅತ್ಯುತ್ತಮ ತರಭೇತಿದಾರ ಮತ್ತು ಸಮರ್ಥ ಕ್ರೀಡಾ ಆಡಳಿತಗಾರರಾಗಿದ್ದ ಹಾಕಿ ಆಟಗಾರ ಶ್ರೀ ಎಂ ಪಿ ಗಣೇಶ್ ಆವರ ಬಗ್ಗೆ ತಿಳಿದುಕೊಳ್ಳೋಣ. ಕೊಡಗು ಜಿಲ್ಲೆಯ ಮಡಿಕೇರಿಯ ಸುಂಟಿಕೊಪ್ಪದ ಬಳಿಯ ಅಂದಗೋವೆ… Read More ಕೆಚ್ಚೆದೆಯ ಹಾಕಿ ಪಟು ಎಂ. ಪಿ. ಗಣೇಶ್