ಪಂಚಾಮೃತ ಮತ್ತು ಪಂಚಲೋಹ

ಸಾಧಾರಣವಾಗಿ ಬಹುತೇಕ ಎಲ್ಲಾ ದೇವಸ್ಥಾನಗಳಿಗೂ ಬೆಳಗ್ಗೆ ಹೋದಾಗ ತೀರ್ಥದ ರೂಪದಲ್ಲಿ ಪಂಚಾಮೃತ ಕೊಟ್ಟು ಅದನ್ನು ಭಕ್ತಿಯಿಂದ ಸೇವಿಸಿದ ನಂತರ ತುಳಸೀ ಮತ್ತು ಪಚ್ಚ ಕರ್ಪೂರ ಹಾಕಿದ ತೀರ್ಥವನ್ನು ಕೊಡುವುದನ್ನು ನಾವು ನೋಡಿದ್ದೇವೆ. ಪ್ರತೀ ದಿನ ದೇವರ ವಿಗ್ರಹಕ್ಕೆ ಹಾಲು, ಮೊಸರು, ತುಪ್ಪ , ಜೇನುತುಪ್ಪ, ಸಕ್ಕರೆ,ಜೊತೆಗೆ ಬಾಳೆಹಣ್ಣು, ಎಳನೀರು, ನೀರಿನ ಮುಖಾಂತರ ಅಭಿಷೇಕವನ್ನು ಮಾಡಿದ ನಂತರ ಅವೆಲ್ಲವನ್ನೂ ಒಂದು ಶುಭ್ರವಾದ ಬೆಳ್ಳಿ ಇಲ್ಲವೇ ಹಿತ್ತಾಳೆ, ಕಂಚು ಅಥವಾ ತಾಮ್ರದ ಪಾತ್ರೆಯಲ್ಲಿ ಸಂಗ್ರಹಿಸಿ ಬಂದ ಭಕ್ತಾದಿಗಳಿಗೆ ತೀರ್ಥದ ರೂಪದಲ್ಲಿ… Read More ಪಂಚಾಮೃತ ಮತ್ತು ಪಂಚಲೋಹ

ಶಿವಗಂಗೆ

ಮೊನ್ನೆ ಸ್ನೇಹಿತರೊಬ್ಬರು ಕರೆ ಮಾಡಿ ಬಹಳ ತಿಂಗಳುಗಳಿಂದಲೂ ಮನೆಯಲ್ಲಿಯೇ ಕುಳಿತು ಬಹಳ ಬೇಸರವಾಗಿದೆ. ಇಲ್ಲೇ ಬೆಂಗಳೂರಿನ ಸುತ್ತಮುತ್ತಲೇ ಇರುವ ಸುಂದರವಾದ ಯಾವುದಾದರೂ ಪ್ರದೇಶ ಇದೆಯೇ, ಬೆಟ್ಟ ಹತ್ತುವ ಹಾಗಿರಬೇಕು. ಐತಿಹಾಸಿಕವಾಗಿ ಮತ್ತು ಧಾರ್ಮಿಕವಾಗಿ ಪ್ರಸಿದ್ಧವಾಗಿರುವಂತಹ ಸ್ಥಳ ಇದ್ದರೆ ತುಂಬಾ ಚೆನ್ನಾಗಿರುತ್ತದೆ ಎಂದಾಗ ಥಟ್ ಅಂತಾ ಮನಸ್ಸಿಗೆ ಹೊಳೆದದ್ದೇ ತುಮಕೂರು ರಸ್ತೆಯಲ್ಲಿರುವ ಶಿವಗಂಗೆ. ನಾವು ಚಿಕ್ಕವರಿದ್ದಾಗ ಕೆಲ ವರ್ಷಗಳ ಕಾಲ ನೆಲಮಂಗಲದಲ್ಲಿ ವಾಸವಾಗಿದ್ದೆವು. ಹಾಗಾಗಿಯೇ ನನ್ನ ಬಾಲ್ಯದ ವಿದ್ಯಾಭ್ಯಾಸ ನಡೆದದ್ದೇ ನೆಲಮಂಗಲದ ಸರ್ಕಾರಿ ಶಾಲೆಯಲ್ಲಿ. ನಮ್ಮ ಮನೆಗೆ ಶನಿವಾರ… Read More ಶಿವಗಂಗೆ