ಬಾಷಾಭಿಮಾನ ಇರಬೇಕು ಆದರೆ ಅದು ದುರಾಭಿಮಾನ ಆಗಬಾರದು

ಕಳೆದ ವಾರ ತಮಿಳುನಾಡಿಗೆ ಪ್ರವಾಸಕ್ಕೆಂದು ಹೋಗಿದ್ದಾಗ, ಅಲ್ಲಿನವರ ಭಾಷಾದುರಾಭಿಮಾನ ನಿಜಕ್ಕೂ ಬೇಸರ ತರಿಸಿತು. ನಮ್ಮ ನಮ್ಮ ಮಾತೃಭಾಷೆಯ ಬಗ್ಗೆ ಅಭಿಮಾನ ಇರಬೇಕೇ ಹೊರತು ದುರಾಭಿಮಾನ ಇರಬಾರದು. ಭಾರತದ ಎಲ್ಲಾ ಭಾಷೆಗಳನ್ನೂ ಗೌರವಿಸುವವನೇ ನಿಜವಾದ ಭಾರತೀಯ ಎನಿಸಿಕೊಳ್ಳುತ್ತಾರೆ ಅಲ್ವೇ?… Read More ಬಾಷಾಭಿಮಾನ ಇರಬೇಕು ಆದರೆ ಅದು ದುರಾಭಿಮಾನ ಆಗಬಾರದು

ಹಿಂದೂ ದೇವಾಲಯಗಳಲ್ಲಿ ವಸ್ತ್ರ ಸಂಹಿತೆ

ಕಳೆದ ಎರಡು ದಿನದ ಹಿಂದೆ ಬೆಂಗಳೂರಿನಲ್ಲಿರುವ ಎಲ್ಲಾ ಹಿಂದೂ ದೇವಾಲಯಗಳಲ್ಲಿಯೂ ವಸ್ತ್ರ ಸಂಹಿತೆ ಜಾರಿಗೆ ತರಬೇಕೆಂದು ಹಿಂದೂ ಸಂಘಟನೆಗಳು ಆರಂಭಿಸಿರುವ ಅಭಿಯಾನ ಸ್ವಾಗತಾರ್ಹವಾಗಿದ್ದು. ಅ ರೀತಿಯ ವಸ್ತ್ರ ಸಂಹಿತೆಯ ಹಿಂದಿರುವ ವೈಜ್ಣಾನಿಕ ವಿವರಗಳ ಕುರಿತಾದ ವೈಚಾರಿಕತೆಯ ಹಿನ್ನಲೆಯ ಮಾಹಿತಿಗಳು ಇದೋ ನಿಮಗಾಗಿ… Read More ಹಿಂದೂ ದೇವಾಲಯಗಳಲ್ಲಿ ವಸ್ತ್ರ ಸಂಹಿತೆ

ಇಸ್ಕಾನ್ ಶ್ರೀ ರಾಧಾ ಕೃಷ್ಣ ದೇವಾಲಯ

ಸಾಧಾರಣವಾಗಿ ಹೊರ ಊರುಗಳಿಂದ ಬೆಂಗಳೂರಿಗೆ ಬರುವ ಪ್ರವಾಸಿಗರನ್ನು ಈ ಹಿಂದೆ ಬೆಂಗಳೂರು ರೈಲ್ವೇ ನಿಲ್ದಾಣ, ವಿಧಾನ ಸೌಧ, ಲಾಲ್ ಭಾಗ್ ಮತ್ತು ಕಬ್ಬನ್ ಪಾರ್ಕ್ ಗಳಿಗೆ ಕರೆದುಕೊಂಡು ಹೋಗಿ ತೋರಿಸುತ್ತಿದ್ದರೆ, 90ರ ದಶಕದಲ್ಲಿ ಬೆಂಗಳೂರಿನ ರಾಜಾಜಿನಗರದ ಆರಂಭದಲ್ಲಿ ಇಸ್ಕಾನ್ ದೇವಾಲಯ ನಿರ್ಮಾಣವಾದ ಕೂಡಲೇ, ಬೆಂಗಳೂರಿಗೆ ಬರುವ ಪ್ರವಾಸಿಗರ ಪಟ್ಟಿಯಲ್ಲೀ ಈ ದೇವಾಲಯವೂ ಸೇರಿಕೊಂಡಿದೆ ಏಂದರೂ ತಪ್ಪಾಗದು. ಬೆಂಗಳೂರಿಗೇ ಕಿರೀಟಪ್ರಾಯವಾದ ಅತ್ಯಂತ ಸುಂದರವಾದ ಇಸ್ಕಾನಿನ ಶ್ರೀ ರಾಧಾ ಕೃಷ್ಣ ದೇವಾಲಯದ ಕುರಿತಾಗಿ ನಮ್ಮ ಬೆಂಗಳೂರು ಇತಿಹಾಸ ಮಾಲಿಕೆಯಲ್ಲಿ ತಿಳಿಯೋಣ… Read More ಇಸ್ಕಾನ್ ಶ್ರೀ ರಾಧಾ ಕೃಷ್ಣ ದೇವಾಲಯ

ಪೆರ್ಣಂಕಿಲ ಶ್ರೀ ಮಹಾ ಗಣಪತಿ ದೇವಾಲಯ

ಉಡುಪಿಯಿಂದ ಕೇವಲ 22 ಕಿಮೀ ದೂರದಲ್ಲಿರುವ ಸುಮಾರು 1600 ವರ್ಷಗಳ ಇತಿಹಾಸ ಇರುವ ಪೆರ್ಣಂಕಿಲದ ಶ್ರೀ ಮಹಾಗಣಪತಿ ದೇವಸ್ಥಾನದ ಸ್ಥಳಪುರಾಣ ಮತ್ತು ಆ ದೇವಾಲಯದ ವೈಶಿಷ್ಟ್ಯಗಳನ್ನು ನಮ್ಮ ದೇಗುಲ ದರ್ಶನ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ.… Read More ಪೆರ್ಣಂಕಿಲ ಶ್ರೀ ಮಹಾ ಗಣಪತಿ ದೇವಾಲಯ

ನಾಡಪ್ರಭು ಶ್ರೀ ಕೆಂಪೇಗೌಡರು

ಪ್ರಗತಿ ಪ್ರತಿಮೆ ಎಂಬ ಹೆಸರಿನಲ್ಲಿ 108 ಅಡಿ ಎತ್ತರದ 218 ಟನ್‌ ತೂಕವಿರುವ ವಿಶ್ವವಿಖ್ಯಾತ ಬೆಂಗಳೂರಿನ ನಿರ್ಮಾತರಾದ ನಾಡಪ್ರಭು ಶ್ರೀ ಕೆಂಪೇಗೌಡರ ಪ್ರತಿಮೆ ಬೆಂಗಳೂರಿನಲ್ಲಿ ಅನಾವರಣಗೊಳ್ಳುತ್ತಿರುವ ಈ ಶುಭಸಂಧರ್ಭದಲ್ಲಿ, ಕೆಂಪೇಗೌಡರ ವ್ಯಕ್ತಿ, ವ್ಯಕ್ತಿತ್ವ, ಸಾಧನೆಯ ಜೊತೆಗೆ ಅಂತಹ ಪ್ರಾಥಃಸ್ಮರಣೀಯ ಯಶೋಗಾಧೆಯನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಮೆಲುಕು ಹಾಕೋಣ ಬನ್ನಿ.… Read More ನಾಡಪ್ರಭು ಶ್ರೀ ಕೆಂಪೇಗೌಡರು

ಅತ್ತ ದರಿ ಇತ್ತ ಪುಲಿ

ಅದು 2014 ಲೋಕಸಭಾ ಚುನಾವಣಾ ಸಮಯ. ಅದಾಗಲೇ ಎರಡು ಆಡಳಿತಾವಧಿಯಲ್ಲಿ ಹಗರಣದ ಮೇಲೆ ಹಗರಣಗಳ ಆಡಳಿತ ನಡೆಸಿದ್ದ ಮನಮೋಹನ್ ಸಿಂಗ್ ಅವರ ಸರ್ಕಾರದ ಮೇಲೆ ಇಡೀ ದೇಶವಾಸಿಗಳ ಆಕ್ರೋಶವಿದ್ದಾಗ ಶುದ್ಧ ಹಸ್ತನಾಗಿ, ದಕ್ಷ ಆಡಳಿತಗಾರನಾಗಿ ಗುಜರಾತನ್ನು ಮುನ್ನೆಡೆಸಿದ್ದ ನರೇಂದ ಮೋದಿಯವರು ಇಡೀ ದೇಶಕ್ಕೆ ಆಶಾವಾದಿಯಾಗಿ ಕಂಡ ಪರಿಣಾಮವಾಗಿ ಅದ್ಭುತವಾದ ಬಹುಮತದೊಂದಿಗೆ ಆಡಳಿತಕ್ಕೆ ಬಂದಿದ್ದು ಈಗ ಇತಿಹಾಸ. ಮೊದಲ ಬಾರಿಗೆ ಸಂಸತ್ತನ್ನು ಪ್ರವೇಶಿಸುವಾಗ ಸಂಸತ್ತಿನ ಮೆಟ್ಟಿಲುಗಳಿಗೆ ಭಕ್ತಿಪೂರ್ವಕವಾಗಿ ನಮಸ್ಕರಿಸಿ ಸಂಸತ್ತನ್ನು ಪ್ರವೇಶಿಸಿ ನಾ ಮೇ ಖಾವುಂಗಾ ಔರ್ ಖಾನೇ… Read More ಅತ್ತ ದರಿ ಇತ್ತ ಪುಲಿ

ಮೂರ್ತಿ ಪೂಜೆ

ರಸ್ತೇ ಅಗಲೀಕರಣದ ನೆಪದಲ್ಲಿ ಸುಪ್ರೀಂ ಕೋರ್ಟಿನ ಆದೇಶದ ಮೇರೆಗೆ ಕಳೆದ ವಾರ ನಂಜನಗೂಡಿನ ಬಳಿ 800 ವರ್ಷದ ಹಳೆಯದಾದ ಚೋಳರ ಕಾಲದ  ದೇವಾಲಯವನ್ನು ಒಡೆದು ಹಾಕಿರುವ ವಿಷಯ ಇನ್ನೂ ಆರದಿರುವಾಗ ಅದೇ ಪ್ರಾಂತ್ಯದ ಚಾಮರಾಜನಗರದ ಬಿಳಿಗಿರಿರಂಗನಬೆಟ್ಟದ ಬಿಳಿಗಿರಿ ರಂಗನಾಥಸ್ವಾಮಿ ದೇವಾಲಯದಲ್ಲಿ ಹಾಕಲಾಗಿದ್ದ ಮೈಸೂರು ಮಹಾರಾಜರ ಫೋಟೋಗಳನ್ನು ತೆರವು ಮಾಡುವ ಎಡವಟ್ಟೊಂದನ್ನು ಮಾಡುವ ಮೂಲಕ  ಆಸ್ತಿಕ ಮಹಾಶಯರ ಸಾತ್ವಿಕ ಕೋಪ ಹೆಚ್ಚುವಂತಾಗಿದೆ. ನಮ್ಮ ರಾಜ್ಯದ ಹಲವಾರು ದೇವಾಲಯಗಳಿಗೆ ನಮ್ಮ ಮೈಸೂರು ಅರಸರ ಕೊಡುಗೆ ಅಪಾರ ಎನ್ನುವುದು ನಿರ್ವಿವಾದ. ಅದರಲ್ಲೂ… Read More ಮೂರ್ತಿ ಪೂಜೆ

ಹಿಂದೂ ಧಾರ್ಮಿಕ ಕಾರ್ಯಕ್ರಮಗಳಿಗೆ ಪ್ರಾಣಿಗಳನ್ನು ಬಳಸಿಕೊಳ್ಳುವುದು ಕ್ರೌರ್ಯವೇ?

ದಸರಾ ಎಂದು ನೆನಸಿಕೊಂಡಾಕ್ಷಣ ನಮ್ಮ ಕಣ್ಣ ಮುಂದೆ ಬರುವುದೇ ಆನೆಯ ಅಂಬಾರಿ. ಆನೆಗಳ ಹಿಂಡಿನ ಮಧ್ಯೆ ಬಲರಾಮನ ಮೇಲೆ ತಾಯಿ ಚಾಮುಂಡೇಶ್ವರಿ ತಾಯಿಯನ್ನು ಮೆರವಣಿಗೆ ಮಾಡುವುದನ್ನು ವೀಕ್ಷಿಸಲು ದೇಶ ವಿದೇಶಗಳಿಂದಳೂ ಲಕ್ಷಾಂತರ ಪ್ರವಾಸಿಗರು ಬರುವುದಲ್ಲದೇ ಆ ಹೆಮ್ಮೆಯ ಕ್ಷಣಗಳನ್ನು ಕಣ್ತುಂಬಿಸಿಕೊಳ್ಳುತ್ತಾರೆ. ಇನ್ನು ಕೇರಳದ ಬಹುತೇಕ ಹಿಂದೂ ದೇವಾಲಯಗಳಲ್ಲಿಯೂ ಆನೆಗಳೇ ಪ್ರಮುಖ ಆಕರ್ಷಣೆ. ಅಲ್ಲಂತೂ ಹತ್ತಾರು ಆನೆಗಳನ್ನು ಚೆನ್ನಾಗಿ ಅಲಂಕರಿಸುವುದನ್ನು ನೋಡುವುದಕ್ಕೆ ಎರಡು ಕಣ್ಣುಗಳು ಸಾಲವು. ದೇಶದಲ್ಲಿ ಎಲ್ಲಶ ಆಗಲೀ ಸ್ವಾಮೀ ಐಯ್ಯಪ್ಪನ ಮೆರವಣೆಗೆ ನಡೆಯುವುದೇ ಆನೆಯ ಮೇಲೆಯೆ.… Read More ಹಿಂದೂ ಧಾರ್ಮಿಕ ಕಾರ್ಯಕ್ರಮಗಳಿಗೆ ಪ್ರಾಣಿಗಳನ್ನು ಬಳಸಿಕೊಳ್ಳುವುದು ಕ್ರೌರ್ಯವೇ?

ಪುರಿ ಜಗನ್ನಾಥ ರಥಯಾತ್ರೆ

ಒರಿಸ್ಸಾದ ಪುರಿಯಲ್ಲಿ ಪ್ರತೀ ವರ್ಷವೂ ಲಕ್ಷಾಂತರ ಜನರ ಸಮ್ಮುಖದಲ್ಲಿ ವೈಭವವಾಗಿ ಶ್ರೀ ಜಗನ್ನಾಥ, ಬಲಭದ್ರ ಮತ್ತು ಸುಭದ್ರಯ ರಥಯಾತ್ರೆಯ ಸಡಗರ ಸಂಭ್ರಮಗಳನ್ನು ಕುಳಿತಲ್ಲಿಂದಲೇ ಕಣ್ತುಂಬಿಸಿಕೊಳ್ಳೋಣ ಬನ್ನಿ.… Read More ಪುರಿ ಜಗನ್ನಾಥ ರಥಯಾತ್ರೆ