ಚಿಂತಕರ ಚಾವಡಿಗೆ ಚಲುವಾದ ಆಯ್ಕೆ

ಗಣತಂತ್ರ ದೇಶವಾದ ನಮ್ಮ ಭಾರತದಲ್ಲಿ ನ್ಯಾಯಾಂಗ, ಕಾರ್ಯಾಂಗ ಮತ್ತು ಶಾಸಕಾಂಗ ಎಂಬುದು ಮೂರು ಆಧಾರ ಸ್ಥಂಭಗಳಾಗಿದ್ದು. ಆ ಶಾಸಕಾಂಗದಲ್ಲಿ ಲೋಕಸಭೆ ಮತ್ತು ರಾಜ್ಯಸಭೆಗೆ ಆಯ್ಕೆಯಾದ ಸಾಂದರು ದೇಶವನ್ನು ಮುನ್ನಡೆಸಿಕೊಂಡು ಹೋಗುತ್ತಾರೆ. ಲೋಕಸಭೆಯ 543 ಸದಸ್ಯರನ್ನು ಭಾರತದ ಪ್ರಜೆಗಳು ನೇರವಾಗಿ ಆಯ್ಕೆ ಮಾಡಿದರೆ, ರಾಜ್ಯಸಭೆಯ 238 ಸದಸ್ಯರನ್ನು ದೇಶದ ವಿವಿಧ ರಾಜ್ಯಗಳ ವಿಧಾನಸಭೆಗಳಿಗೆ ಆಯ್ಕೆಯಾದ ಶಾಸಕರುಗಳು ಆಯ್ಕೆ ಮಾಡಿದರೆ, ಉಳಿದ 12 ಸದಸ್ಯರನ್ನು ರಾಷ್ಟ್ರಪತಿಗಳು ಕೇಂದ್ರಸರ್ಕಾರದ ಶಿಫಾರಸ್ಸಿನ ಮೇರೆಗೆ ನಾಮಕರಣ ಮೂಲಕ ಆಯ್ಕೆ ಮಾಡುತ್ತಾರೆ. ಈ ರೀತಿಯ ನಾಮಕರಣವಾದ… Read More ಚಿಂತಕರ ಚಾವಡಿಗೆ ಚಲುವಾದ ಆಯ್ಕೆ

ಧರ್ಮಸ್ಥಳದ ಲಕ್ಷದೀಪೋತ್ಸವ

ಕರ್ನಾಟಕದ ಕರಾವಳಿಯ ದಕ್ಷಿಣ ಕನ್ನಡ ಕೇವಲ ನದಿಗಳಿಗಷ್ಟೇ ಅಲ್ಲದೇ, ದೇವಾಲಯಗಳಿಗೂ ಪ್ರಸಿದ್ಧವಾಗಿದೆ. ಅಲ್ಲಿ ಹರಿಯುವ ಪ್ರತೀ ನದಿ ಹಳ್ಳ ಕೊಳ್ಳಗಳ ತಟದಲ್ಲಿ ಪ್ರತಿ ಹತ್ತಿಪ್ಪತ್ತು ಕಿಮೀ ದೂರದಲ್ಲಿ ಒಂದೊಂದು ಒಂದೊಂದು ದೇವಸ್ಥಾನಗಳಿದ್ದು, ಅವುಗಳಲ್ಲಿ ಜೀವನದಿ ನೇತ್ರಾವತಿಯ ತಟದಲ್ಲಿರುವ ಯಾವುದೇ ಜಾತಿ ಧರ್ಮದ ಹಂಗಿಲ್ಲದೇ ಸಕಲ ಹಿಂದೂಗಳ ಧಾರ್ಮಿಕ ಕ್ಷೇತ್ರವೇ ಪುರಾಣ ಪ್ರಸಿದ್ಧ ಧರ್ಮಸ್ಥಳವಾಗಿದೆ. ಹೆಸರಿಗೆ ಅನ್ವರ್ಥದಂತೆ ಅದು ಶಾಂತಿ ಮತ್ತು ಧರ್ಮದ ಬೀಡಾಗಿದ್ದು ಧರ್ಮಸ್ಥಳದ ಮಂಜುನಾಥನ ಸ್ವಾಮಿಗೆ ಇಡೀ ದೇಶಾದ್ಯಂತ ಭಕ್ತಾದಿಗಳು ಇದ್ದು ಬಹಳ ನಂಬಿಕೆಗೆ ಹೆಸರುವಾಸಿಯಾಗಿದೆ.… Read More ಧರ್ಮಸ್ಥಳದ ಲಕ್ಷದೀಪೋತ್ಸವ

ಶ್ರೀ ವೀರೇಂದ್ರ ಹೆಗ್ಗಡೆ

ನಾವು ಚಿಕ್ಕವರಿದ್ದಾಗ ಪುರಾಣ ಪುಣ್ಯಕಥೆಗಳಲ್ಲಿ ರಾಜರ್ಷಿ ಎಂದರೆ ಸದಾಕಾಲವು ಧರ್ಮಾತ್ಮನಾಗಿದ್ದು, ಲೋಕ ಕಲ್ಯಾಣಕ್ಕಾಗಿ ವಿವಿಧ ರೀತಿಯ ಸಮಾಜಮುಖೀ ಸೇವೆಗಳಲ್ಲಿ ನಿರತರಾಗಿರುವುದಲ್ಲದೇ, ಜನರು ತಮ್ಮ ಸಂಕಷ್ಟಗಳನ್ನೋ ಇಲ್ಲವೇ ವ್ಯಾಜ್ಯಗಳೊಂದಿಗೆ ಬಂದಾಗ ಅವರಿಗೆ ಸೂಕ್ತ ಪರಿಹಾರವನ್ನು ನೀಡುವವರಾಗಿರುತ್ತಾರೆ ಎಂದು ಕೇಳಿಯೋ ಇಲ್ಲವೇ ಓದಿ ತಿಳಿದಿದ್ದೇವೆ. ಈ ಕಲಿಯುಗದಲ್ಲಿಯೂ ಅಂತಹ ರಾಜರ್ಷಿಯವರು ಇದ್ದಾರೆಯೇ ಎಂದು ಯೋಚಿಸುತ್ತಿದ್ದಲ್ಲಿ, ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಶ್ರೀ ವೀರೆಂದ್ರ ಹೆಗ್ಗಡೆಯವರ ಯಶೋಗಾಥೆಯನ್ನು ನೋಡಿದಲ್ಲಿ ನಮ್ಮ ಆ ಎಲ್ಲಾ ಕುತೂಹಲವನ್ನು ತಣಿಸುತ್ತದೆ. ದಕ್ಷಿಣ ಕನ್ನಡದ ಜೀವನದಿ ನೇತ್ರಾವತಿಯ ತಟದಲ್ಲಿರುವ ಪುರಾಣ… Read More ಶ್ರೀ ವೀರೇಂದ್ರ ಹೆಗ್ಗಡೆ