ಪುನರ್ಜನ್ಮ ನೀಡಿದ ಅಪ್ಪ

ಬಹುಷಃ ಎಪ್ಪತ್ತು ಮತ್ತು ಎಂಭತ್ತರ ದಶಕದಲ್ಲಿ ಬಾಲ್ಯಾವಸ್ಥೆಯನ್ನು ಕಳೆದವರಿಗೆ ನಿಂಬೇಹುಳಿ ಪೆಪ್ಪರ್ಮೆಂಟ್ ಎಂಬ ಹೆಸರನ್ನು ಕೇಳಿದ ಕೂಡಲೇ ಖಂಡಿತವಾಗಿಯೂ ಬಾಯಯಲ್ಲಿ ನೀರು ಬಂದೇ ಬರುತ್ತದೆ. ಏಕೆಂದರೆ ಅಂದೆಲ್ಲಾ ನಮಗೆ ಕೈಗೆಟುಕುವ ಬೆಲೆಯಲ್ಲಿ ಸಿಗುತ್ತಿದ್ದ ಚಾಕ್ಲೇಟ್ ಎಂದರೆ ಅದೊಂದೇ. ಕಡಿಮೆ ಹಣ ಜಾಸ್ತಿ ಹೊತ್ತು ಮಜ ಕೊಡುತ್ತಿದ್ದದ್ದೇ ಈ ನಿಂಬೇಹುಳಿ ಪೆಪ್ಪರ್ಮೆಂಟ್. ನಾವು ಚಿಕ್ಕವರಿದ್ದಾಗ ಮಾಡಿದ ಅತ್ಯುತ್ತಮ ಕೆಲಸಗಳಿಗೆ ಪ್ರೋತ್ಸಾಹಕರವಾಗಿ ಬಹುಮಾನ ರೂಪದಲ್ಲಿ ಸಿಗುತ್ತಿದ್ದದ್ದೇ ಈ ನಿಂಬೇಹುಳಿ ಪೆಪ್ಪರ್ಮೆಂಟ್. ಯಾರಾದರೂ ಚಿಕ್ಕ ಮಕ್ಕಳಿರುವ ಮನೆಗೆ ಬಂದರೆ, ಹೂವು ಹಣ್ಣುಗಳ… Read More ಪುನರ್ಜನ್ಮ ನೀಡಿದ ಅಪ್ಪ

ಅಲ್ಲಾಡ್ತಾ ಇದೆ, ಅಲ್ಲಾಡ್ತಾ ಇದೆ.

ದೂರದ ಪ್ರದೇಶಗಳಿಗೆ ಕೆಲವೇ ಗಂಟೆಗಳಲ್ಲಿ ಹೋಗ ಬಹುದಾದ್ದರಿಂದ ಮಧ್ಯಮ ವರ್ಗದವರಿಗೆ ವಿಮಾನಯಾನ ಮಹಾ ಸ್ವರ್ಗ ಎನಿಸಬಹುದಾದರೂ, ಅದು ನಾವೂ ನೀವು ಎಣಿಸಿದಂತೆ ಅಷ್ಟು ಸುಲಭದಲ್ಲವಾಗಿದ್ದು, ವಿಮಾನ ಯಾನದ ಸಮಯದಲ್ಲಿ ಹೃದಯವೇ ಬಾಯಿಗೆ ಬಂದಂತಾದ ನಾನು ಅನುಭವಿಸಿದ ಕೆಲವು ರೋಚಕತೆಗಳು ಇದೋ ನಿಮಗಾಗಿ.
Read More ಅಲ್ಲಾಡ್ತಾ ಇದೆ, ಅಲ್ಲಾಡ್ತಾ ಇದೆ.

ಪುನರ್ಜನ್ಮ

ಶಂಕರ ಮೊನ್ನೆ ದೇವಸ್ಥಾನಕ್ಕೆ ಹೋಗಿ, ದೇವರ ದರ್ಶನಕ್ಕೆ ಸರದಿಯ ಸಾಲಿನಲ್ಲಿ ನಿಂತಿದ್ದಾಗಲೇ,  ಶಂಕರಾಚಾರ್ಯವಿರಚಿತ ಎಂ.ಎಸ್. ಸುಬ್ಬಲಕ್ಷ್ಮಿಯವರ ಸುಶ್ರಾವ್ಯ ಕಂಠದ ಭಜಗೋವಿಂದಂ ಭಜಗೋವಿಂದಂ ಶ್ಲೋಕ ಕೇಳುತ್ತಲೇ ಅವನಿಗೆ ತಾನು ಸಣ್ಣನಿದ್ದಾಗ ಅವನ ತಾತ ಆ ಶ್ಲೋಕಗಳನ್ನು ಹೇಳಿಕೊಡುತ್ತಿದ್ದದ್ದು  ಮತ್ತು ಅದರ ಜೊತೆ ಹೇಳಿದ ಸುಂದರ ಪ್ರಸಂಗವೊಂದು ನೆನಪಿಗೆ ಬಂತು.  ಆಗ  ಶಂಕರನಿಗೆ ಏಳೆಂಟು ವರ್ಷಗಳಿರಬಹುದು . ಪರೀಕ್ಷೆ ಮುಗಿದು ಬೇಸಿಗೆ ರಜಾ ಬಂದಿತೆಂದರೆ ತಾತನ ಮನೆಗೆ ಹೋಗುವುದಕ್ಕೆ ಅವನಿಗೆ ಪಂಚ ಪ್ರಾಣ. ಅದೇ ರೀತೀ ಅವನ ತಾತನೂ ಅಷ್ಟೇ.… Read More ಪುನರ್ಜನ್ಮ