ಡಾ.ಕೇಶವ ಬಲಿರಾಮ ಹೆಡಗೇವಾರ್ (ಡಾಕ್ಟರ್ ಜೀ)

ಈ ದೇಶಕ್ಕಾಗಿ ಅಪಾರವಾಗಿ ಕೊಡುಗೆಯನ್ನು ನೀಡಿದ್ದರೂ, ಕೆಲವು ಪಟ್ಟಭದ್ರ ಹಿತಾಸಕ್ತಿಯ ಸುಳ್ಳು ಆರೋಪಗಳಿಂದ ಅವರಿಗೆ ನಿಜವಾಗಿಯೂ ಸಲ್ಲಬೇಕಾಗದ ಗೌರವಗಳಿಂದ ವಂಚಿತರಾಗಿರುವ ಸ್ವಾತಂತ್ರ್ಯ ಹೋರಾಟಗಾರರಾದ ವೀರ ಸಾವರ್ಕರ್, ಸುಭಾಷ್ ಚಂದ್ರ ಬೋಸ್, ಅಂಬೇಡ್ಕರ್ ಮುಂತಾದವರ ಅನೇಕರ ಪಟ್ಟಿಯಲ್ಲಿ ಡಾ.ಕೇಶವ ಬಲಿರಾಮ ಹೆಡಗೇವಾರ್ ಎಲ್ಲರ ಪ್ರೀತಿಯ ಡಾಕ್ಟರ್ ಜೀ ಅವರೂ ಸೇರುತ್ತಾರೆ ಎಂದರೆ ಅತಿಶಯೋಕ್ತಿಯಾಗಲಾರದು. ಈ ದೇಶದ ಬಗ್ಗೆ ಅವರಿಗಿದ್ದ ದೂರದೃಷ್ಟಿಯಿಂದಾಗಿ ಅವರು ಕಟ್ಟಿದ ಸಂಸ್ಥೆ ಅವರ ನಿಧನವಾಗಿ 8 ದಶಕಗಳ ನಂತರವೂ ಅವರ ಆದರ್ಶಗಳನ್ನು ಮುಂದುವರೆಸಿಕೊಂಡು 2025 ರಲ್ಲಿ… Read More ಡಾ.ಕೇಶವ ಬಲಿರಾಮ ಹೆಡಗೇವಾರ್ (ಡಾಕ್ಟರ್ ಜೀ)

ಭಾರತದಲ್ಲಿ ಬ್ರಾಹ್ಮಣರಾಗಿ ಹುಟ್ಟುವುದೇ ತಪ್ಪಾ?

ಸಿವಿಲ್ ಇಂಜೀನಿಯರಿಂಗ್ ನಲ್ಲಿ ಬಿ.ಟೆಕ್ ಪದವಿ ಪಡೆದಿರುವ ಅಧೂತ್ ಮೋಹಿತ್ ಎಂಬುವರ ಲೇಖನದ ಭಾವಾರ್ಥವನ್ನು ಎಲ್ಲರೊಂದಿಗೆ ಹಂಚಿಕೊಳ್ಳಲು ಬಯಸುತ್ತೇನೆ. ನಾನು ಬ್ರಾಹ್ಮಣನಲ್ಲ, ನಾನು ಮರಾಠಿಗ. ಆದರೂ ಕಳೆದ ಕೆಲವು ವರ್ಷಗಳಿಂದ ನನ್ನ ಅವಲೋಕನಗಳನ್ನು ಆಧರಿಸಿ ಇದಕ್ಕೆ ಸೂಕ್ತವಾದ ಉತ್ತರವನ್ನು ನೀಡಬಲ್ಲೆ ಎಂದು ನಾನು ಭಾವಿಸುತ್ತೇನೆ. ಇಂದಿನ ಭಾರತದಲ್ಲಿ ಬ್ರಾಹ್ಮಣನಾಗಿರುವುದು ಎಂದರೆ 1930ರ ಜರ್ಮನಿಯಲ್ಲಿ ಯಹೂದಿಗಳಿದ್ದಂತೆ. ಜರ್ಮನಿಯ ಜನಸಂಖ್ಯೆಗೆ ಹೋಲಿಸಿದರೆ, ಯಹೂದಿಗಳ ಶೇಕಡಾವಾರು ಸಂಖ್ಯೆ ಬಹಳಷ್ಟು ಕಡಿಮೆ ಇದ್ದರೂ, ಜರ್ಮನ್ನರಿಗೆ ತಮ್ಮೆಲ್ಲಾ ಸಮಸ್ಯೆಗಳಿರೂ ಯಹೂದಿಗಳೇ ಕಾರಣರು ಎಂಬ ಭಾವನೆಯಾಗಿತ್ತು.… Read More ಭಾರತದಲ್ಲಿ ಬ್ರಾಹ್ಮಣರಾಗಿ ಹುಟ್ಟುವುದೇ ತಪ್ಪಾ?

ಅಧ್ಭುತವಾದ ಇಡ್ಲಿಗಳು!

ಅದು ಸ್ವಾತಂತ್ರ್ಯ ಪೂರ್ವದ ದಿನಗಳು ಅದೊಂದು ದಿನ ಅಯ್ಯರ್ ಎಂಬ ವ್ಯಕ್ತಿ ಮತ್ತು ಬ್ರಿಟಿಷ್ ವ್ಯಕ್ತಿಯೊಬ್ಬ ಮದ್ರಾಸ್ನಿಂದ ಕಲ್ಕತ್ತಾಗೆ ಹೌರಾ ಮೇಲ್ ನಲ್ಲಿ ಮೊದಲನೇ ದರ್ಜೆಯ ಕೋಚ್ ನಲ್ಲಿ ಪ್ರಯಾಣಿಸುತ್ತಿದ್ದರು. ನಿಗಧಿಯಂತೆ ರೈಲು ರಾತ್ರಿ 8 ಗಂಟೆಗೆ ಮದ್ರಾಸ್ ಸೆಂಟ್ರಲ್‌ನಿಂದ ಹೊರಟಿತು. ಮಾರನೇ ದಿನ ಬೆಳಿಗ್ಗೆ 7 ಗಂಟೆಗೆಯ ಹೊತ್ತಿಗೆ ವಿಜಯವಾಡ ತಲುಪಿತ್ತು. ಇಬ್ಬರೂ ಸಹಾ ತಮ್ಮ ಪ್ರಾರ್ಥರ್ವಿಧಿಗಳನ್ನು ಮುಗಿಸಿ, ಬ್ರಿಟಿಷ್ ವ್ಯಕ್ತಿ ಅಲ್ಲಿಯೇ ಸ್ಟೇಷನ್ನಿನಲ್ಲಿ ಸಿಕ್ಕ ರುಚಿಕರವಾದ ಉಪಹಾರವನ್ನು ಮಾಡಿದರೆ, ಅಯ್ಯರ್ ತನ್ನ 4-ಹಂತದ ಟಿಫಿನ್… Read More ಅಧ್ಭುತವಾದ ಇಡ್ಲಿಗಳು!

ಕ್ರಾಂತಿಕಾರಿ ಖುದಿರಾಮ್ ಬೋಸ್

ನಮ್ಮ ದೇಶಕ್ಕೆ ಸ್ವಾತಂತ್ರ ಬಂದಿದ್ದು, ಕೆಲವರ ಉಪವಾಸ ಸತ್ಯಾಗ್ರಹದಿಂದ ಎಂದು ನಂಬಿಸುವವರಿಗೆ, ಭಾರತಮಾತೆಯ ಚರಣಾರವಿಂದಗಳಿಗೆ ತನ್ನ 18 ನೇ ವಯಸ್ಸಿನ 8 ನೇ ತಿಂಗಳ 8 ನೇ ದಿನದಂದು ತನ್ನ ಪ್ರಾಣವನ್ನು ಅರ್ಪಿಸಿದ ಶ್ರೀ ಖುದಿರಾಮ್ ಬೋಸ್ ರಂತಹ ಲಕ್ಷಾಂತರ ವೀರಾಗ್ರಣಿಗಳ ತ್ಯಾಗ ಮತ್ತು ಬಲಿದಾನಗಳ ನೆನಪೇ ಇಲ್ಲದಿರುವುದು ಈ ದೇಶದ ದುರಂತವೇ ಸರಿ. … Read More ಕ್ರಾಂತಿಕಾರಿ ಖುದಿರಾಮ್ ಬೋಸ್

ಜಲಿಯನ್ ವಾಲಾ ಭಾಗ್ ಹತ್ಯಾಕಾಂಡ

ಏಪ್ರಿಲ್ 13, 1919 ರಂದು ಬೈಶಾಖೀ ಹಬ್ಬದ ದಿನದಂದು ಸ್ವಾತಂತ್ರ್ಯ ಹೋರಾಟಗಾರರನ್ನು ಅಂದಿನ ಬ್ರಿಟಿಷ್ ಸರ್ಕಾರ ಏಕಾಏಕಿ ಬಂಧಿಸಿ, ಗಡೀಪಾರು ಮಾಡುತಿದ್ದರ ವಿರುದ್ಧ ಪಂಜಾಬಿನ ಅಮೃತ್ ಸರದ ಮತ್ತು ಸುತ್ತ ಮುತ್ತಲಿನ ಗ್ರಾಮಸ್ಥರು ಜಲಿಯನ್ ವಾಲಾ ಭಾಗ್ ನಲ್ಲಿ ಶಾಂತಿಯುತ ಪ್ರತಿಭಟನೆಯ ಸಮಯದಲ್ಲಿ ನಡೆದ ಹತ್ಯಾಕಾಂಡದ ಕಥೆ-ವ್ಯಥೆ ಸಂಪೂರ್ಣ ವಿವರಗಳು ಇದೋ ನಿಮಗಾಗಿ
Read More ಜಲಿಯನ್ ವಾಲಾ ಭಾಗ್ ಹತ್ಯಾಕಾಂಡ

ಶ್ರೀ ಮದನ್ ಲಾಲ್ ಡಿಂಗ್ರಾ

ಆಗ 1900 ಆರಂಭದ ದಿನಗಳು. ಇಂಗ್ಲೇಂಡಿನ ನೈಟ್ ಕ್ಲಬ್ಬಿನಲ್ಲಿ ಚೆನ್ನಾಗಿ ಉಡುಪು ಧರಿಸಿಕೊಂಡು ಅಲ್ಲಿಯ ರಂಗು ರಂಗಿನ ಬೆಳೆಕಿನಲ್ಲಿ ರಂಗಾದ ಹುಡುಗಿಯರೊಂದಿಗೆ ಶೋಕಿ ಮಾಡುತ್ತಿದ್ದ ಭಾರತೀಯ ತರುಣನೊಬ್ಬ ಶ್ಯಾಮ್ ಜೀ ವರ್ಮ ಮತ್ತು ವೀರಸಾವರ್ಕರ್ ಅವರ ಪ್ರಖರ ಮಾತುಗಳಿಂದ ಪ್ರೇರಿತನಾಗಿ ಇದ್ದಕ್ಕಿದ್ದಂತೆಯೇ ತನ್ನ ಶೋಕಿಗಳನ್ನೆಲ್ಲಾ ಬದಿಗೊತ್ತಿ ತನ್ನ ತಾಯ್ನಾಡು ಭಾರತವನ್ನು ದಾಸ್ಯದಲ್ಲಿ ಇಟ್ಟುಕೊಂಡಿದ್ದ ಬ್ರಿಟೀಷರಿಗೆ ಅವರ ನೆಲದಲ್ಲಿಯೇ ಬುದ್ದಿ ಕಲೆಸಬೇಕೆಂದು ಫಣ ತೊಟ್ಟು ಇಂಗ್ಲೆಂಡಿನಲ್ಲಿಯೇ ಮರಣ ದಂಡನೆಗೆ ಒಳಗಾಗಿ ಬ್ರಿಟೀಷರನ್ನು ಭಾರತದಿಂದ ಹೊರಹಾಕಲು ತನ್ನ ಪ್ರಾಣವನ್ನೇ ತ್ಯಾಗ… Read More ಶ್ರೀ ಮದನ್ ಲಾಲ್ ಡಿಂಗ್ರಾ