ವಿಶ್ವಕಪ್-ಟಿ20 ರೋಚಕ ಬೋಲ್ ಔಟ್ ಪಂದ್ಯ

ಚೊಚ್ಚಲು ಟಿ20 ವಿಶ್ವಕಪ್ ಪಂದ್ಯಾವಳಿಗಳು ದಕ್ಷಿಣ ಆಫ್ರಿಕಾದಲ್ಲಿ ಆಯೋಜಿಸಲಾಗಿತ್ತು. ಉಳಿದೆಲ್ಲಾ ತಂಡಗಳಿಗೆ ಹೋಲಿಸಿದಲ್ಲಿ, ಭಾರತಕ್ಕೆ ಅಷ್ಟೇನೂ ಟಿ20 ಪಂದ್ಯಾವಳಿಗಳ ಅನುಭವವಿರಲಿಲ್ಲ. ಎಲ್ಲದ್ದಕ್ಕಿಂತಲೂ ಹೆಚ್ಚಾಗಿ ಸಚಿನ್, ಸೌರವ್, ದ್ರಾವಿಡ್ ಅಂತಹ ಘಟಾನುಘಟಿಗಳಿಲ್ಲದೇ ಮಹೇಂದ್ರ ಸಿಂಗ್ ಧೋನಿ ನೇತೃತ್ವದಲ್ಲಿ ಯುವಕರ ಪಡೆಯೇ ದಕ್ಷಿಣ ಆಫ್ರಿಕಾಕ್ಕೆ ಹೋಗಿತ್ತು. 2007ರ, Sep 14 ರಂದು ದರ್ಭಾನ್ ನಲ್ಲಿ ಭಾರತ ತನ್ನ ಸಾಂಪ್ರದಾಯಿಕ ಎದುರಾಳಿ ಪಾಕೀಸ್ಥಾನವನ್ನು ಎದುರಿಸುತ್ತಿತ್ತು. ಕ್ರೀಡಾಂಗಣದಲ್ಲಿ ಭಾರತೀಯರು ಮತ್ತು ಪಾಕೀಸ್ಥಾನೀಯರಿಂದಲೇ ಕಿಕ್ಕಿರಿದು ತುಂಬಿದ್ದ ಕಾರಣ ಅದೊಂದು ಭಾರತ ಮತ್ತು ಪಾಕ್ ಉಪಖಂಡದಲ್ಲಿಯೇ… Read More ವಿಶ್ವಕಪ್-ಟಿ20 ರೋಚಕ ಬೋಲ್ ಔಟ್ ಪಂದ್ಯ

ಪ್ರಧಾನಿಗಳ ಇಂದಿನ ಲೇಹ್ ಭೇಟಿಯ ಹಿಂದಿರುವ ಕೂತಹಲಕಾರಿ ಸಂಗತಿಗಳು

ಕಳೆದ ತಿಂಗಳು ಜೂನ್ 15ದಂದು ಭಾರತ ಮತ್ತು ಚೀನಾ ಸೈನಿಕರ ನಡುವೆ ಲಢಾಕ್ಕಿನ ಗಾಲ್ವಾನ್ ಎಂಬ ಪ್ರದೇಶದಲ್ಲಿ ಪರಸ್ಪರ ಘರ್ಷಣೆ ನಡೆದಿದ್ದು, ಈ ಘರ್ಷಣೆಯಲ್ಲಿ ಭಾರತದ 20 ಸೈನಿಕರು ಹುತಾತ್ಮರಾಗಿದ್ದರೆ, ಅದಕ್ಕೆ ಪ್ರತ್ಯುತ್ತರವಾಗಿ ಚೀನಾದೇಶದ 40ಕ್ಕೂ ಅಧಿಕ ಸೈನಿಯರನ್ನು ಯಮಪುರಿಗೆ ಅಟ್ಟಿದದ್ದು ಈಗ ಇತಿಹಾಸವಾಗಿದೆ. ಈ ಸಂಘರ್ಷದ ಇಡೀ ವಿಶ್ವವೇ ಏಷ್ಯಾದಲ್ಲಿ ಶಾಂತಿ ಸೌಹಾರ್ಧತೆಯನ್ನು ಕಾಪಾಡಿಕೊಂಡು ಬರಲು ಸಲಹೆ ನೀಡುತ್ತಿದ್ದರೆ, ಭಾರತ ಮತ್ತು ಚೀನಾ ದೇಶಗಳ ವಿದೇಶಾಂಗ ಸಚಿವರುಗಳು ಮತ್ತು ರಾಜತಾತಂತ್ರಿಕ ಅಧಿಕಾರಿಗಳ ನಡುವೆ ಗಡಿಯಲ್ಲಿ ಶಾಂತಿಯನ್ನು… Read More ಪ್ರಧಾನಿಗಳ ಇಂದಿನ ಲೇಹ್ ಭೇಟಿಯ ಹಿಂದಿರುವ ಕೂತಹಲಕಾರಿ ಸಂಗತಿಗಳು

bullet ಮತ್ತು wallet ಶಕ್ತಿ ಸಾಮರ್ಥ್ಯ

ಚೀನಾ ದೇಶದ ವುಹಾನ್ ಪ್ರದೇಶದಲ್ಲಿ ಮೊತ್ತ ಮೊದಲಬಾರಿಗೆ ಕಾಣಿಸಿಕೊಂಡ ಕೂರೋನಾ ಎಂಬ ಮಹಾಮಾರಿ ಸೋಂಕು ನೋಡ ನೋಡುತ್ತಿದ್ದಂತೆಯೇ ಇಡೀ ಪ್ರಪಂಚವನ್ನೆಲ್ಲಾ ಆಕ್ರಮಿಸಿ ಲಕ್ಷಾಂತರ ಸಾವು ನೋವು ಸಂಭವಿಸಿದ್ದಲ್ಲದೇ ಜಾಗತಿಕವಾಗಿ ಆರ್ಥಿಕ ಬಿಕ್ಕಟ್ಟಿನ ಪರಿಸ್ಥಿತಿ ಉಂಟಾಗಿದೆ. ಭಾರತವೂ ಸೇರಿದಂತೆ ಪ್ರಪಂಚದ ಎಲ್ಲಾ ದೇಶಗಳು ಆರ್ಥಿಕ ಪುನಶ್ಚೇತನಕ್ಕಾಗಿ ಪ್ರಯತ್ನ ಪಡುತ್ತಿದ್ದರೆ, ಯುದ್ಧೋನ್ಮತ್ತ ಚೀನಾ ದೇಶ ಪ್ರಪಂಚದ ಗಮನವನ್ನು ಬೇರೆಡೆಗೆ ಸೆಳೆಯಲು ಜೂನ್16 ರಂದು ಪೂರ್ವ ಲಡಾಕ್ನ ಗಾಲ್ವಾನ್ ಕಣಿವೆಯಲ್ಲಿ ಏಕಾಏಕಿ ಭಾರತದ ಸೇನೆಯ ಮೇಲೆ ಲಾಠಿ ಮತ್ತು ಕಲ್ಲುಗಳ ಧಾಳಿಯನ್ನು… Read More bullet ಮತ್ತು wallet ಶಕ್ತಿ ಸಾಮರ್ಥ್ಯ

ಭಾರತ / ಆಸ್ಟ್ರೇಲಿಯ ಟೈಟಾನ್ ಕಪ್ 1996

ಇಂದು ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಎರಡೂ ತಂಡಗಳು ಒಂದೊಂದು ಪಂದ್ಯವನ್ನು ಗೆದಿದ್ದು ಸರಣಿ ಗೆಲ್ಲಲು ಎರಡೂ ತಂಡಗಳಿಗೆ ಈ ಪಂದ್ಯ ಬಹಳ ಮುಖ್ಯವಾಗಿರುವ ಪರಿಣಾಮವಾಗಿ ಈ ಪಂದ್ಯ ಬಹಳ ಜಿದ್ದಾ ಜಿದ್ದಿನಿಂದ ರೋಚಕವಾಗಿರುವುದರಲ್ಲಿ ಸಂದೇಹವೇ ಇಲ್ಲ. ಈ ಸಮಯದಲ್ಲಿ, ಇದೇ ಕ್ರೀಡಾಂಗಣದಲ್ಲಿ , ಇದೇ ತಂಡಗಳ ನಡುವೆ 1996ರಲ್ಲಿ ರೋಚಕವಾಗಿ ನಡೆದ ಟೈಟಾನ್ ಕಪ್ ಪಂದ್ಯವಳಿ ನನ್ನ ಮನಸ್ಸಿನಲ್ಲಿ ಅಚ್ಚಳಿಯದೇ ಉಳಿದಿದೆ. ಹೊನಲು ಬೆಳಕಿನ ಆ ಪಂದ್ಯವನ್ನು ಕ್ರೀಡಾಂಗಣದಲ್ಲಿ… Read More ಭಾರತ / ಆಸ್ಟ್ರೇಲಿಯ ಟೈಟಾನ್ ಕಪ್ 1996

Nation First Everything Next

ಒಂದನೊಂದು ಊರಿನ ಪಕ್ಕದಲ್ಲಿ ಒಂದು ದೊಡ್ಡ ಕಾಡು ಇತ್ತು. ಆ ಕಾಡಿನ ಒಂದು ದೊಡ್ಡ ಮರವೊಂದರಲ್ಲಿ ಹಲವಾರು ಪಕ್ಷಿಗಳು ಸುಖವಾಗಿ ವಾಸಮಾಡಿ ಕೊಂಡಿದ್ದವು. ಅಂತಹ ಪಕ್ಷಿಗಳ ಸಂಕುಲಗಳಲ್ಲಿ ಒಂದು ಗಂಡುಬೇರುಂಡ ಪಕ್ಷಿಯೂ ಇತ್ತು. ಎಲ್ಲರಿಗೂ ತಿಳಿದಿರುವಂತೆ ಗಂಡುಬೇರುಂಡ ಪಕ್ಷಿಗೆ ಒಂದೇ ದೇಹ ಎರಡು ತಲೆಗಳು ಇರುತ್ತಿದ್ದವು. ಈಗ ಈ ಪಕ್ಷಿಗಳು ನಶಿಸಿ ಹೋಗಿರುವುದರಿಂದ ಅದರ ಜ್ಣಾಪಕಾರ್ಥವಾಗಿ ನಮ್ಮ ರಾಜ್ಯದ ಅಧಿಕೃತ ಲಾಂಛನದ ಮಧ್ಯಭಾಗದಲ್ಲಿ ಗಂಡುಬೇರುಂಡ ಪಕ್ಷಿಯನ್ನು ಅಳವಡಿಸಿಕೊಂಡಿದ್ದಾರೆ. ಇಂತಹ ಗಂಡುಬೇರುಂಡ ಪಕ್ಷಿಯು ಇತರೇ ಪಕ್ಷಿಗಳಂತೆ ಕಾಡಿನಲ್ಲಿದ್ದ ಹಲವಾರು… Read More Nation First Everything Next