ಭಾರತ ಸಂಸ್ಕೃತ ಶೋಭಾ ಯಾತ್ರೆ

ವಿದ್ಯಾರಣ್ಯಪುರದ ಶ್ರೀ ಕಾಳಿಕಾ ದುರ್ಗಾ ಪರಮೇಶ್ವರಿ ದೇವಸ್ಥಾನ ಮತ್ತು ಶ್ರೀ ಸುರವಾಣೀ ಸಂಸ್ಕೃತ ಫೌಂಡೇಶನ್ ಸಹಯೋಗದೊಂದಿಗೆ ಸಂಸ್ಕೃತ ಭಾಷಾ ಕಲಿಕೆಯ ಕುರಿತಾಗಿ ಜನಜಾಗೃತಿ ಮೂಡಿಸುವ ಸಲುವಾಗಿ ಆಯೋಜಿಸಲಾಗಿದ್ದ ಭಾರತ ಸಂಸ್ಕೃತ ಶೋಭಾ ಯಾತ್ರೆಯ ವಿಸ್ತೃತ ವರದಿ ಇದೊ ನಿಮಗಾಗಿ… Read More ಭಾರತ ಸಂಸ್ಕೃತ ಶೋಭಾ ಯಾತ್ರೆ

ವೇ.ಬ್ರ.ಶ್ರೀ ಹರೀಶ ಶರ್ಮ

ಗುರುಪೂರ್ಣಿಯ ಈ ಶುಭದಿನದಂದು ವಿದ್ಯಾರಣ್ಯಪುರದ ಶ್ರೀ ಕಾಳಿಕಾದುರ್ಗಾ ಪರಮೇಶ್ವರಿ ದೇವಾಲಯದ ಆವರಣದಲ್ಲಿ ಶ್ರೀ ಸನಾತನ ವೇದ ಪಾಠಶಾಲೆಯ ಮೂಲಕ ಸನಾತದ ಧರ್ಮ ಪ್ರಭೋಧನವನ್ನು ಮಾಡುತ್ತಿರುವ ನಮ್ಮ ಗುರುಗಳಾದ ವೇ.ಬ್ರ.ಶ್ರೀ ಹರೀಶ್ ಶರ್ಮ ಅವರ ವ್ಯಕ್ತಿ ವ್ಯಕ್ತಿತ್ವ ಮತ್ತು ಸಾಧನೆಗಳು ಇದೋ ನಿಮಗಾಗಿ… Read More ವೇ.ಬ್ರ.ಶ್ರೀ ಹರೀಶ ಶರ್ಮ

ವೇದ ವ್ಯಾಸರು ಮತ್ತು ಗುರು ಪೂರ್ಣಿಮೆ

ಇಂದು ಆಶಾಢಮಾಸದ ಹುಣ್ಣಿಮೆ. ಇದೇ ದಿವಸ ವೇದವ್ಯಾಸರು ಹುಟ್ಟಿದ ದಿನವಾದ್ದರಿಂದ ಸಮಸ್ತ ಹಿಂದೂಗಳು ಈ ದಿನವನ್ನು ಅತ್ಯಂತ ಸಡಗರ ಸಂಭ್ರಗಳಿಂದ ಗುರು ಪೂರ್ಣಿಮೆ ಎಂದು ಆಚರಿಸುತ್ತಾರೆ. ಒಂದಕ್ಷರವಂ ಕಲಿಸಿದಾತನೂ ಗುರುವಿಗೆ ಸಮಾನ ಎಂದು ತಿಳಿದು ತಮಗೆ ಶಿಕ್ಷಣವನ್ನು ಕೊಟ್ಟ ಗುರುಗಳಿಗೆ ಶ್ರದ್ಧಾಭಕ್ತಿಯಿಂದ ನಮಿಸಿದರೆ, ಇನ್ನೂ ಅನೇಕ ಆಸ್ತಿಕರು ತಮ್ಮ ತಮ್ಮ ಗುರುಗಳನ್ನು ಆರಾಧನೆ ಮಾಡುತ್ತಾರೆ. ಈ ಗುರು ಪೂರ್ಣಿಮೆಯ ವಿಶೇಷ ಸಂದರ್ಭದಲ್ಲಿ, ಮಹರ್ಷಿ ವೇದ ವ್ಯಾಸರ ವ್ಯಕ್ತಿ ವ್ಯಕ್ತಿತ್ವ ಮತ್ತು ಅವರ ಸಾಧನೆಗಳನ್ನು ಮೆಲುಕು ಹಾಕುವ ಮೂಲಕ… Read More ವೇದ ವ್ಯಾಸರು ಮತ್ತು ಗುರು ಪೂರ್ಣಿಮೆ

ಶಾಸ್ತ್ರ – ಸಂಪ್ರದಾಯ, ಆಚಾರ – ವಿಚಾರ

ಇತ್ತೀಚೆಗೆ ವಾಟ್ಸಾಪಿನಲ್ಲಿ ಓದಿದ ಆಂಗ್ಲ ಸಂದೇಶವೊಂದರ ಈ ಭಾವಾನುವಾದವನ್ನು ಮೊದಲು ಓದಿದ ನಂತರ ವಿಚಾರಕ್ಕೆ ಬರೋಣ. ಒಂದೂರಿನಲ್ಲಿದ್ದ  ದೇವಸ್ಥಾನವೊಂದಕ್ಕೆ ಪ್ರತಿದಿನ ಮುಂಜಾನೆ ಒಂದು ಚಿಕ್ಕ ಹುಡುಗಿ ಬಂದು ದೇವರ ಮುಂದೆ ನಿಂತು, ಕಣ್ಗಳನ್ನು ಮುಚ್ಚಿ, ಕೈಗಳನ್ನು ನಮಸ್ಕಾರ ಸ್ಥಿತಿಯಲ್ಲಿಸಿಕೊಂಡು ಒಂದೆರಡು ನಿಮಿಷಗಳ ಕಾಲ ಏನನ್ನೋ ಗೊಣಗುತ್ತಾ, ನಂತರ ಕಣ್ಣು ತೆರೆದು, ನಮಸ್ಕರಿಸಿ, ನಗುತ್ತಾ ಓಡಿಹೋಗುತ್ತಿದ್ದಳು. ಇದು ಆಕೆಯ ದೈನಂದಿನ ಕಾರ್ಯವಾಗಿತ್ತು. ಅ ಪುಟ್ಟ ಹುಡುಗಿಯನ್ನು ಪ್ರತಿದಿನವೂ ಗಮನಿಸುತ್ತಿದ್ದ ದೇವಸ್ಥಾನದ ಅರ್ಚಕರಿಗೆ ಅಷ್ಟು ಸಣ್ಣ ಹುಡುಗಿಗೆ ಧರ್ಮ ಆಚಾರ… Read More ಶಾಸ್ತ್ರ – ಸಂಪ್ರದಾಯ, ಆಚಾರ – ವಿಚಾರ

ಪಂಡಿತ ಸುಧಾಕರ ಚತುರ್ವೇದಿ

ಸಾಧಾರಣವಾಗಿ ನಾವೆಲ್ಲರೂ ಪಂಡಿತ್, ದ್ವಿವೇದಿ, ತ್ರಿವೇದಿ ಮತ್ತು ಚತುರ್ವೇದಿ ಎನ್ನುವ ಉಪನಾಮಗಳನ್ನು ಕೇಳಿರುತ್ತೇವೆ.  ಅದೆಲ್ಲವೂ ಅವರ ಕುಟುಂಬದ  ಎಷ್ಟೋ ತಲೆಮಾರಿನವರೊಬ್ಬರು ಪಂಡಿತರಾಗಿದ್ದರಂತೆ  ಅಥವಾ ಅವರು ಎರಡು, ಮೂರು ಅಥವಾ ನಾಲ್ಕುವೇದಗಳನ್ನೂ ಕರಗತ ಮಾಡಿಕೊಂಡಿದ್ದರಿಂದ ಅವರಿಗೆ ಆ ರೀತಿಯ ಹೆಸರು ಬಂದಿರುತ್ತದೆ. ಸದ್ಯಕ್ಕೆ  ಆ ವೇದದ ಗಂಧಗಾಳಿಯೂ ಗೊತ್ತಿಲ್ಲದೇ ಇದ್ದರೂ ಅವರ ಹೆಸರಿನೊಂದಿಗೆ ಸೇರಿಕೊಂಡಿರುತ್ತರೆ. ಆದರೆ ಇಲ್ಲೊಬ್ಬರು ಈ ಎಲ್ಲವನ್ನೂ ಅಧಿಕಾರಯುತವಾಗಿ ಕರಗತ ಮಾಡಿಕೊಂಡು ಚತುರ್ವೇದಿ ಎಂಬ ಬಿರುದನ್ನು ಗಳಿಸಿದ್ದ ಶತಾಯುಷಿಗಳಾಗಿದ್ದರೂ ಕನ್ನಡಿಗರಿಗೆ ಎಲೆಮರೆಕಾಯಿಯಾಗಿಯೇ ಉಳಿದು ಹೋದ ಪಂಡಿತ… Read More ಪಂಡಿತ ಸುಧಾಕರ ಚತುರ್ವೇದಿ