ಮೇಲುಕೋಟೆಯ ವೈರಮುಡಿ ಉತ್ಸವ

ಮೇಲುಕೋಟೆ ಕರ್ನಾಟಕದ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಕಲೆ, ಸಂಸ್ಕೃತಿ, ಶಿಲ್ಪಕಲೆಯಿಂದ ಕೂಡಿದ ಸುಂದರವಾದ ಪುರಾಣ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾಗಿದ್ದು ಆಚಾರ್ಯ ತ್ರಯರಲ್ಲಿ ಒಬ್ಬರಾದ ಶ್ರೀ ರಾಮಾನುಜಾಚಾರ್ಯರ ಕರ್ಮ ಭೂಮಿಯೂ ಆಗಿದೆ. ಬೆಟ್ಟ ಗುಡ್ಡಗಳ ನಡುವೆ ಇರುವ ಈ ಊರಿನಲ್ಲಿ ಸರಿ ಸುಮಾರು 101 ದೇಗುಲಗಳು ಹಾಗೂ 101 ಕಲ್ಯಾಣಿಗಳಿರುವ ಸುಂದರ ಬೀಡಾಗಿದ್ದು ಶ್ರೀ ವೈಷ್ಣವರ ಯಾತ್ರಾ ಸ್ಥಳವಾಗಿಯೂ, ಅನೇಕ ಶ್ರದ್ದೇಯ ಆಸ್ತಿಕ ಬಂಧುಗಳ ಪುಣ್ಯಕ್ಷೇತ್ರವಾಗಿಯೂ ಮತ್ತು ಪ್ರವಾಸಿಗರ ಮತ್ತು ಚಿತ್ರರಂಗದ ನೆಚ್ಚಿನ ಚಿತ್ರೀಕರಣದ ತಾಣವೂ ಆಗಿದೆ.… Read More ಮೇಲುಕೋಟೆಯ ವೈರಮುಡಿ ಉತ್ಸವ

ಶ್ರೀ ರಾಮಾನುಜಾಚಾರ್ಯರು

ಎಂಟನೇ ಶತಮಾನದ ಅಂತ್ಯ ಮತ್ತು ಒಂಬತ್ತನೇ ಶತಮಾನದಲ್ಲಿ ವಿವಿಧ ಧರ್ಮಗಳ ಸೆಳೆತಕ್ಕೆ ಸಿಕ್ಕಿ ಸನಾತನ ಧರ್ಮ ಆವಸಾನದ ಅಂಚಿನಲ್ಲಿದ್ದಾಗ ಹಿಂದೂ ಧರ್ಮದ ಪುನರುತ್ಥಾನದ ಆಶಾಕಿರಣವಾಗಿ ಶ್ರೀ ಶಂಕರಾಚಾರ್ಯರ ಆಗಮನವಾಗಿ ಅನ್ಯಧರ್ಮೀಯರನ್ನು ಸಮರ್ಥವಾಗಿ ವಾದದಲ್ಲಿ ಸೋಲಿಸಿ ತಮ್ಮ ಅಹಂ ಬ್ರಹ್ಮಾಸ್ಮಿ ಎನ್ನುವ ಅದ್ವೈತ ತತ್ವದ ಮೂಲಕ ಸನಾತನ ಧರ್ಮವನ್ನು ಎತ್ತಿಹಿಡಿದ ಪರಂಪರೆಯನ್ನು 10 ಮತ್ತು 11ನೇ ಶತಮಾನದಲ್ಲಿ ಮುಂದುವರಿಸಿದ ಕೀರ್ತಿ ಶ್ರೀ ರಾಮಾನುಜಾಚಾರ್ಯರಿಗೆ ಸಲ್ಲುತ್ತದೆ. ಈ ಇಬ್ಬರು ಮಹಾನ್ ಆಚಾರ್ಯರ ನಡುವೆ ಹಲವಾರು ಸಾಮ್ಯಗಳಿದ್ದು ಮೊದಲನೆಯದಾಗಿ ಈ ಇಬ್ಬರೂ… Read More ಶ್ರೀ ರಾಮಾನುಜಾಚಾರ್ಯರು

ಕರ್ಮಯೋಗಿ ಹಾಗೂ ಭಕ್ತಿಯೋಗಿ 

ಮಂಡ್ಯ ಜಿಲ್ಲೆಯ ಮೇಲುಕೋಟೆಯ ಚೆಲುವನಾರಾಯಣ ಸ್ವಾಮಿ ಮತ್ತು ಯೋಗಾನರಸಿಂಹ ಸ್ವಾಮಿ ಜಗದ್ವಿಖ್ಯಾತವಾದ ದೇವಾಲಯಗಳು. ಆಚಾರ್ಯ ತ್ರಯರಲ್ಲಿ ಒಬ್ಬರಾದ ಶ್ರೀ ರಾಮಾನುನುಜಾಚಾರ್ಯರ ಆರಾಧ್ಯ ದೈವವೂ ಹೌದು. ಪ್ರತಿನಿತ್ಯ ನೂರಾರೂ ಮತ್ತು ವಾರಾಂತ್ಯದಲ್ಲಿ ಸಾವಿರಾರು ಮತ್ತು ವಿಶೇಷ ದಿನಗಳಲ್ಲಿ ಅದರಲ್ಲೂ ವೈರಮುಡಿ ಉತ್ಸವದ ಸಮಯದಲ್ಲಿ ಲಕ್ಷಾಂತರ ಭಕ್ತಾದಿಗಳು ಸೇರುವ ಸ್ಥಳವಾಗಿದೆ. ಕಡಿದಾದ ಬೆಟ್ಟದ ತುದಿಯಲ್ಲಿ ಕಟ್ಟಿರುವ ದೇವಾಲಯ ನಿಜಕ್ಕೂ ಅಂದಿನ ದಿನದ ವಾಸ್ತುಪಂಡಿತರ ಮತ್ತು ಕುಶಲ ಕರ್ಮಿಗಳ ಅಧ್ಭುತ ಪರಿಣಿತಿಯ ದ್ಯೋತಕವಾಗಿದೆ. ಸುಮಾರು 300 ರಷ್ಟು ಕಡಿದಾದ ಎತ್ತರದ ಮೆಟ್ಟುಲುಗಳ… Read More ಕರ್ಮಯೋಗಿ ಹಾಗೂ ಭಕ್ತಿಯೋಗಿ