ಆದಿ ಗುರು‌ ಶ್ರೀ ಶಂಕರಾಚಾರ್ಯರು

ಅದು ಕ್ರಿ.ಶ, ಏಳನೇ ಶತಮಾನ. ಭಾರತದ ಸನಾತನ ಧರ್ಮಕ್ಕೆ ಅತ್ಯಂತ ಕ್ಲಿಷ್ಟಕರವಾದ ಸಂದಿಗ್ಧ ಪರಿಸ್ಥಿತಿಯಿದ್ದ ಕಾಲವದು. ಒಂದು ಕಡೆ ಅಹಿಂಸಾ ಪರಮೋಧರ್ಮಃ ಎಂದು ಹೇಳುತ್ತಲೇ ಬೌದ್ಧ ಧರ್ಮ ಭಾರತದಲ್ಲೆಲ್ಲಾ ಅತ್ಯಂತ ವೇಗವಾಗಿ ಹರಡಿದ್ದಲ್ಲದೇ ವಿದೇಶಗಳಿಗೂ ತನ್ನ ಅನುಯಾಯಿಗಳನ್ನು ಕಳುಹಿಸಿಯಾಗಿತ್ತು. ಸನಾತನ ಧರ್ಮದ ಕಟ್ಟುಪಾಡು ಮತ್ತು ಅತೀಯಾದ ಆಚಾರ ಮಡಿ ಹುಡಿಗಳಿಂದ ಬೇಸತ್ತವರು ಬೌದ್ಧ ದರ್ಮದ ಕಡೆ ಆಕರ್ಷಿತರಾತೊಡಗಿದ್ದರೆ ಮತ್ತೊಂದೆಡೆ, ದೇವರು ಎಂಬುವುದೇ ಇಲ್ಲ ಅದೆಲ್ಲಾ ಕಟ್ಟು ಕಥೆ ಎನ್ನುವಂತಹ ಚಾರ್ವಾಕರ ಹಾವಳಿ. ನಮ್ಮ ಸನಾತನ ಧರ್ಮಕ್ಕೆ ವೇದವೇ… Read More ಆದಿ ಗುರು‌ ಶ್ರೀ ಶಂಕರಾಚಾರ್ಯರು

ಸನಾತನ ಧರ್ಮದ ಸಂಸ್ಕಾರ ಮತ್ತು ಆಚರಣಾ ಪದ್ದತಿಗಳು

ವಿದ್ಯಾರಣ್ಯಪುರ ಮಂಥನದ ಹನ್ನೊಂದನೆಯ ಆವೃತ್ತಿ ನಿಗಧಿಯಾಗಿದ್ದಂತೆ, ಸನಾತನ ಧರ್ಮದ ಸಂಸ್ಕಾರ ಮತ್ತು ಆಚರಣಾ ಪದ್ದತಿಗಳು ಕುರಿತಾದ ವಿಷಯದ ಬಗ್ಗೆ ಕಾರ್ಯಕ್ರಮದ ಇಂದಿನ ವಕ್ತಾರರಾದ ಶ್ರೀ ಶ್ರೀಕಂಠ ಬಾಳಗಂಚಿ (ಹವ್ಯಾಸಿ ಬರಹಗಾರರು, https://enantheeri.com) ಅವರ ಅಮೃತ ಹಸ್ತದಿಂದ ಭಾರತಮಾತೆಗೆ ಪುಷ್ಪಾರ್ಚನೆ ಸಲ್ಲಿಸುವುದರೊಂದಿಗೆ ಮತ್ತು ಶ್ರೀಮತಿ ಪ್ರೀತಿ ಜಯಂತ್ ಅವರ ಸುಶ್ರಾವ್ಯ ಕಂಠದ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಪ್ರಾರಂಭವಾಯಿತು. ಹಿಂದೂ ಧರ್ಮವನ್ನು ಸನಾತನ ಧರ್ಮ ಎಂದೂ ಕರೆಯುತ್ತಾರೆ.’ಸನಾತನ’ಎಂದರೆ ಎಂದೂ ಅಳಿಯದ,ಚಿರಂತನ,ನಿರಂತರವಾದ ಎಂದರ್ಥ. ಹಿಂದೂಧರ್ಮಕ್ಕೆ ಬೇರೆ ಧರ್ಮಗಳಿಗಿರುವಂತೆ ಸಂಸ್ಥಾಪಕರಿಲ್ಲದಿರುವುದು ವೈಶಿಷ್ಟ್ಯದ ಸಂಗತಿ. ಹಿಂದೂ… Read More ಸನಾತನ ಧರ್ಮದ ಸಂಸ್ಕಾರ ಮತ್ತು ಆಚರಣಾ ಪದ್ದತಿಗಳು